August 26, 2026
kranthikidi.com
ತಾಜಾಸುದ್ದಿರಾಜ್ಯ

ಕೆಆರ್‌ಎಸ್ ಡ್ಯಾಂನಿಂದ ತಮಿಳುನಾಡಿಗೆ ಹರಿದ ಕಾವೇರಿ ನೀರು

ಮಂಡ್ಯ : ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ಪ್ರಕ್ರಿಯೆ ಮುಂದುವರಿದಿದ್ದು, ಇದೀಗ ಕೆಆರ್‌ಎಸ್ ಡ್ಯಾಂನಿಂದ ನೀರನ್ನು ನದಿಗೆ ಹರಿಸಲಾಗಿದೆ. ಇಷ್ಟು ದಿನ ಕೇವಲ ಕಬಿನಿ ಜಲಾಶಯದಿಂದ ಮಾತ್ರ ತಮಿಳುನಾಡಿಗೆ ನೀರು ಹರಿಸಲಾಗುತ್ತಿತ್ತು. ಆದರೆ ಇತ್ತೀಚಿಗೆ ಕಬಿನಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಗಣನೀಯವಾಗಿ ತಗ್ಗಿದ ಹಿನ್ನೆಲೆ ನೀರಿನ ಪ್ರಮಾಣ ಸರಿದೂಗಿಸಲು ಕೆಆರ್‌ಎಸ್ ಡ್ಯಾಂನಿಂದ ನೀರು ಬಿಡಲು ನಿರ್ಧರಿಸಲಾಗಿದೆ.

ಸರ್ಕಾರದ ಆದೇಶ ಹಾಗೂ ಸೂಚನೆಯ ಮೇರೆಗೆ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಕಳೆದ ರಾತ್ರಿಯಿಂದಲೇ ನೀರು ಬಿಡುಗಡೆ ಕಾರ್ಯ ಆರಂಭಿಸಿದ್ದಾರೆ. ಜಲಾಶಯದ 80ಕ್ಕೂ ಹೆಚ್ಚು ಕ್ರಸ್ಟ್‌ ಗೇಟ್‌ಗಳ ಮೂಲಕ ಸುಮಾರು 3,000 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ ಎಂದು ಅಧಿಕಾರಿಗಳ ಮೂಲಗಳು ಮಾಹಿತಿ ನೀಡಿವೆ. ಇದನ್ನೂ ಓದಿ : 9 ಯೋಧರಿಗೆ ಕೀರ್ತಿ ಚಕ್ರ ಸೇರಿ 78 ಜನರಿಗೆ ಶೌರ್ಯ ಪ್ರಶಸ್ತಿ ಘೋಷಣೆ..!

Related posts

ತಾರಕಕ್ಕೇರಿದ ಬಿಡದಿ ಭೂಯುದ್ಧ – ಬಿಜೆಪಿ ಬಿಟ್ಟು ಜೆಡಿಎಸ್ ಪ್ರತ್ಯೇಕ ಪಾದಯಾತ್ರೆ..!

Kalpana Editor

ಟಾಕ್ಸಿಕ್ ಟ್ರೈಲರ್ ಬಿಡುಗಡೆಯ ದಿನಾಂಕ ರಿವೀಲ್; ಹೊಸ ಪೋಸ್ಟರ್ ಮೂಲಕ ಗುಡ್‌ನ್ಯೂಸ್ ನೀಡಿದ ನಟ ಯಶ್

Kalpana Editor

ಭೀಮನ ಮೇಲೆ ಕಲ್ಲು ತೂರಾಟ; ಕಾರ್ಮಿಕನೊಬ್ಬ ವಿರುದ್ಧ ಸ್ಥಳೀಯರು ಗರಂ

Kalpana Editor