August 25, 2026
kranthikidi.com
ತಾಜಾಸುದ್ದಿರಾಜ್ಯ

ಲಾಲ್‌ಬಾಗ್ ಉಳಿಸಿ; ಬಂಡೆ ತಬ್ಬಿಕೊಂಡು ವಾಕರ್ಸ್ ಪ್ರತಿಭಟನೆ..!

ಬೆಂಗಳೂರು : ಸುರಂಗ ರಸ್ತೆ ಯೋಜನೆ ವಿರುದ್ಧ ವಾಕರ್ಸ್ ಅಸೋಷಿಯೇಷನ್‌ ವಿಭಿನ್ನವಾಗಿ ಪ್ರತಿಭಟನೆ ನಡೆಸಿದೆ. ಲಾಲ್‌ಬಾಗ್‌ನಲ್ಲಿರುವ ಬಂಡೆಯನ್ನು ತಬ್ಬಿಕೊಂಡು ಲಾಲ್‌ಬಾಗ್‌ ಉಳಿಸಿ ಎಂದು ವಾಕಾರ್ಸ್ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ʻಬಂಡೆಯನ್ನು ತಬ್ಬಿಕೊಳ್ಳಿʼ ಹೆಸರಿನಲ್ಲಿ ಪ್ರತಿಭಟನೆ ನಡೆದಿದೆ.

ಸುರಂಗ ರಸ್ತೆ ಯೋಜನೆಯಿಂದ ಲಾಲ್‌ಬಾಗ್‌ಗೆ ಸಮಸ್ಯೆಯಾಗಲಿದೆ. ಯಾವುದೇ ಕಾರಣಕ್ಕೂ ಲಾಲ್‌ಬಾಗ್‌ಗೆ ಧಕ್ಕೆ ಆಗಬಾರದು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಅನುಮತಿ ಇಲ್ಲದೇ ಪ್ರತಿಭಟನೆ ಮಾಡೋ ಹಾಗಿಲ್ಲ ಎಂದು ಪೊಲೀಸರು ಪ್ರತಿಭಟನಾಕಾರರಿಗೆ ಮಾಹಿತಿ ನೀಡಿ ಕಳುಹಿಸಿದ್ದಾರೆ.

ಮುಂದಿನ ದಿನಗಳಲ್ಲಿ ಫ್ರೀಡಂಪಾರ್ಕ್ ಪ್ರತಿಭಟನೆ ಮಾಡೋದಾಗಿ ಹೇಳಿ ಪ್ರತಿಭಟನಾಕಾರರು ಅಲ್ಲಿಂದ ತೆರಳಿದ್ದಾರೆ. ಈ ಹಿಂದೆ ಮಾನವ ಸರಪಳಿ ಮಾಡಿ ಸರ್ಕಾರದ ವಿರುದ್ಧ ಕಿಡಿಕಾರಿದ್ದರು. ಈಗ ಮತ್ತೊಮ್ಮೆ ಲಾಲ್ ಬಾಗ್ ಉಳಿಸಬೇಕು ಅಂತ ಸರ್ಕಾರಕ್ಕೆ ವಾಕರ್ಸ್ ಮನವಿ ಮಾಡಿದ್ದಾರೆ. ಇದನ್ನೂ ಓದಿ : ಮಾಜಿ ಉಪಸಭಾಪತಿ ಆಶಿಶ್ ಬ್ಯಾನರ್ಜಿ ಟಿಎಂಸಿ ಕಚೇರಿಯಲ್ಲಿ ಶವವಾಗಿ ಪತ್ತೆ..!

Related posts

ಹೈಕೋರ್ಟ್​​ನಲ್ಲಿ ಡಿ ಬಾಸ್‌ – ಜೂನ್ 30ಕ್ಕೆ ಭವಿಷ್ಯ ನಿರ್ಧಾರ..!

Kalpana Editor

ಒಂದು ವಾಹನಕ್ಕೆ 200 ಲೀಟರ್‌ ದಿನಕ್ಕೆ ಮಾತ್ರ – ಡೀಸೆಲ್‌ ಮಾರಾಟ ಮಿತಿಗೊಳಿಸಿದ ಕೇಂದ್ರ ಸರ್ಕಾರ..!

Kalpana Editor

ದೂರದ ದ್ವೀಪ ನೋಡ್ತಿರೋ ದರ್ಶನ್‌ – ಇನ್‌ಸ್ಟಾದಲ್ಲಿ ವಿಜಯಲಕ್ಷ್ಮಿ ಸ್ಟೋರಿ ಪೋಸ್ಟ್‌..!

Kalpana Editor