August 25, 2026
kranthikidi.com
ತಾಜಾಸುದ್ದಿರಾಜ್ಯ

ಕೊಲೆ ಆರೋಪಿ ಪವಿತ್ರಾಗೌಡ ಜೈಲಲ್ಲಿ ಬೇರೆ ಸೆಲ್‌ಗೆ ಶಿಫ್ಟ್‌..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಆರೋಪಿ ಪವಿತ್ರಾಗೌಡ ರನ್ನ ಬ್ಯಾರಕ್ ಶಿಫ್ಟ್ ಮಾಡಲಾಗಿದೆ. ಇಬ್ಬರ ಬ್ಯಾರಕ್‌ನಲ್ಲಿದ್ದ ಆರೋಪಿಯನ್ನು 16 ಕೈದಿಗಳಿರುವ ಬ್ಯಾರಕ್‌ಗೆ ಶಿಫ್ಟ್ ಮಾಡಲಾಗಿದೆ. ಮೂಲಕ ಪವಿತ್ರಗೌಡಗೆ ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳು ಶಾಕ್ ನೀಡಿದ್ದಾರೆ.

ರೇಣುಕಾಸ್ವಾಮಿ ಕೊಲೆ ಕೇಸ್ ಕೋರ್ಟ್‌ನಲ್ಲಿದೆ. ಟ್ರಯಲ್ ನಡೆಯುವಾಗ ಎಲ್ಲಾ ಆರೋಪಿಗಳು ವಿಸಿ ಮೂಲಕ ನ್ಯಾಯಾಧೀಶರ ಮುಂದೆ ಹಾಜರಾಗಬೇಕು. ಕಳೆದ ಮೂರು ದಿನಗಳ ಹಿಂದೆ ಎಲ್ಲಾ ಆರೋಪಿಗಳು ಹಾಜರಾದ ಬಳಿಕ ತಡವಾಗಿ ಪವಿತ್ರಾಗೌಡ ಹಾಜರಾಗಿ ನ್ಯಾಯಾಧೀಶರ ಕೆಂಗಣ್ಣಿಗೆ ಗುರಿಯಾಗಿದ್ದರು.

ಅಷ್ಟೇ ಅಲ್ಲದೇ ಪವಿತ್ರಾಗೌಡ ವಿಸಿಯಲ್ಲಿ ಹಾಜರಾಗಿದ್ದಾಗ ಕಿವಿಯಲ್ಲಿ ಏರ್‌ಬಡ್ಸ್ ಬಳಕೆ ಮಾಡಿದ್ದರು. ನ್ಯಾಯಾಧೀಶರು ಮಹಿಳಾ ಬ್ಯಾರಕ್‌ನಲ್ಲಿ ಏರ್‌ಬಡ್ಸ್ ಬಳಕೆ ಮಾಡುವುದರ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಏರ್‌ಬಡ್ಸ್ ಬಳಕೆ ಮಾಡಿರುವ ಬಗ್ಗೆ ಜೈಲು ಅಧಿಕಾರಿಗಳಿಂದ ನ್ಯಾಯಾಧೀಶರು ಸ್ಪಷ್ಟನೆ ಕೇಳಿದ್ದರು. ಈ ಎಲ್ಲಾ ಕಾರಣಗಳಿಂದ ಪವಿತ್ರಾಗೌಡ ಬ್ಯಾರಕ್‌ನ ಶಿಫ್ಟ್ ಮಾಡಲಾಗಿದೆ. ಇದನ್ನೂ ಓದಿ : ಇಂದು ಕೊಡಗಿಗೆ ಸಿಎಂ ಡಿಕೆಶಿ ಭೇಟಿ; ನಲಪಾಡ್ ವಿವಾಹ ಸಮಾರಂಭದಲ್ಲಿ ಭಾಗಿ ಸಾಧ್ಯತೆ..!

Related posts

ನಮ್ಮದು ಸಣ್ಣ ಪಕ್ಷ, ನಾವ್ಯಾಕೆ ಕಾಂಗ್ರೆಸ್ ಶಾಸಕರನ್ನ ಆಪರೇಷನ್ ಮಾಡೋಣ; ಹೆಚ್‌ಡಿಕೆ

Kalpana Editor

ಒತ್ತಡದಿಂದ ಮುಕ್ತರಾಗಲು; ಗಾರ್ಡನಿಂಗ್‌ ಹವ್ಯಾಸ ಆರೋಗ್ಯಕ್ಕೂ ಪ್ರಯೋಜನಕಾರಿ..!

kknewskannada1987@gmail.com

ಕರ್ನಾಟಕ-ತಮಿಳುನಾಡು ಭಾರತ-ಪಾಕಿಸ್ತಾನವಲ್ಲ – ಮಾಣಿಕಂ ಟ್ಯಾಗೋರ್

Kalpana Editor