27 C
ಬೆಂಗಳೂರು
August 26, 2026
kranthikidi.com
ತಾಜಾಸುದ್ದಿರಾಜ್ಯ

ಹಿಡಕಲ್ ಜಲಾಶಯ ಭರ್ತಿ – ಇಂದು ನೀರು ಬಿಡುಗಡೆ ಸಾಧ್ಯತೆ..!

ಚಿಕ್ಕೋಡಿ : ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ರಾಜಾ ಲಖಮಗೌಡ ಹಿಡಕಲ್ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಜಿಲ್ಲೆಯ ರೈತರಲ್ಲಿ ಸಂತಸ ಮೂಡಿಸಿದೆ. 51 ಟಿಎಂಸಿ ಸಾಮರ್ಥ್ಯದ ಹಿಡಕಲ್ ಜಲಾಶಯಕ್ಕೆ 8,523 ಕ್ಯೂಸೆಕ್ ನೀರು ಒಳಹರಿವು ಇದ್ದು, 4,655 ಕ್ಯೂಸೆಕ್ ನೀರು ಹೊರಹರಿವಿದೆ. ನೀರಾವರಿ ಯೋಚಜನೆಗಳ ಕಾಲುವೆಗಳ ಮೂಲಕ ನೀರನ್ನು ಹೊರಹರಿಸಲಾಗುತ್ತಿದೆ.

ಜಲಾಶಯದ ನೀರಿನ ಮಟ್ಟ ನಿರಂತರವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆ ಇಂದು ಮಧ್ಯಾಹ್ನ ಜಲಾಶಯದಿಂದ ಹೆಚ್ಚುವರಿ ನೀರು ಬಿಡುಗಡೆ ಮಾಡುವ ಸಾಧ್ಯತೆಯಿದೆ. ಹಿಡಕಲ್ ಜಲಾಶಯ ಭರ್ತಿಯಾಗಿರುವುದು ಬೆಳಗಾವಿ ಮಾತ್ರವಲ್ಲದೆ ಬಾಗಲಕೋಟೆ ಜಿಲ್ಲೆಯ ರೈತರಿಗೂ ನೆಮ್ಮದಿ ತಂದಿದೆ. ಜಲಾಶಯದ ನೀರು ನೀರಾವರಿ ಯೋಜನೆಗಳಿಗೆ ಪ್ರಮುಖ ಆಧಾರವಾಗಿರುವುದರಿಂದ, ಜಲಾಶಯ ಭರ್ತಿಯಾಗಿರುವುದು ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಲಿದೆ. ಇದನ್ನೂ ಓದಿ : ಉಕ್ರೇನ್‌ನಲ್ಲಿರುವ ಭಾರತೀಯ ಬಿಲಿಯನೇರ್‌ ಕಾರ್ಖಾನೆ ಮೇಲೆ ರಷ್ಯಾ ದಾಳಿ..!

Related posts

ಚೆನ್ನಮ್ಮ ನಿಧನ; ಇಂದು, ನಾಳೆ ಹಾಸನ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧ..!

Kalpana Editor

ಹಿರಿಯೂರು ಉಪಚುನಾವಣೆಗೆ ಸ್ಪರ್ಧೆ ಮಾಡಲ್ಲ; ಹೆಚ್‌ಡಿಕೆ ಸ್ಪಷ್ಟನೆ..!

Kalpana Editor

ವೈಭವದ ‘ಸರ್ಜನ್ಸ್ ಡೇ 2026’ ಆಚರಣೆ; ಹಿರಿಯ ಶಸ್ತ್ರಚಿಕಿತ್ಸಕರಿಗೆ ಸನ್ಮಾನ..!

Kalpana Editor