July 12, 2026
kranthikidi.com
ತಾಜಾಸುದ್ದಿದೇಶಸಿನಿಮಾ

ಕಾನ್ ಫಿಲ್ಮ್​​ ಫೆಸ್ಟಿವಲ್​ನಲ್ಲಿ ಐಶ್ವರ್ಯಾನ ಟೀಕಿಸಿದವರಿಗೆ ಕ್ಲಾಸ್..!

ವಿಶ್ವ ವಿಖ್ಯಾತ ಕಾನ್ ಫಿಲ್ಮ್​ ಫೆಸ್ಟಿವಲ್​​​ನಲ್ಲಿ ರೆಡ್ ಕಾರ್ಪೆಟ್ ಮೇಲೆ ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಕಾಣಿಸಿಕೊಳ್ಳುವವರೆಗೂ ಆ ಸಂಭ್ರಮ ಪೂರ್ಣಗೊಳ್ಳುವುದಿಲ್ಲ ಎಂಬ ಮಾತಿದೆ. ಈ ವರ್ಷವೂ ಅಭಿಮಾನಿಗಳು ಐಶ್ವರ್ಯಾ ಎಂಟ್ರಿಗಾಗಿ ಕಾತರದಿಂದ ಕಾಯುತ್ತಿದ್ದರು. ಅಂತಿಮವಾಗಿ, ಐಶ್ವರ್ಯಾ ತಮ್ಮ ಮಗಳು ಆರಾಧ್ಯ ಬಚ್ಚನ್ ಅವರೊಂದಿಗೆ ಪ್ರತಿಷ್ಠಿತ ಚಲನಚಿತ್ರೋತ್ಸವದಲ್ಲಿ ಭಾಗವಹಿಸಿದ್ದಾರೆ. ಆದರೆ, ಈ ಬಾರಿ ಅವರ ರೆಡ್ ಕಾರ್ಪೆಟ್ ಲುಕ್ ಸಾಮಾಜಿಕ ಮಾಧ್ಯಮದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ.

ಕೆಲವು ನೆಟ್ಟಿಗರು ಐಶ್ವರ್ಯಾ ಅವರ ನೀಲಿ ಬಣ್ಣದ ಗೌನ್ ಸೌಂದರ್ಯವನ್ನು ಹೊಗಳುತ್ತಿದ್ದರೆ, ಇನ್ನು ಕೆಲವರು ಅವರ ವಯಸ್ಸು ಮತ್ತು ಸ್ಟೈಲಿಂಗ್ ಅನ್ನು ಆಧರಿಸಿ ನೆಗೆಟಿವ್ ಕಾಮೆಂಟ್ ಮಾಡುತ್ತಿದ್ದಾರೆ. ಈಗ ಈ ಟ್ರೋಲರ್‌ಗಳ ವಿರುದ್ಧ ನಟಿ ಹಾಗೂ ಸಂಸದೆ ಕಂಗನಾ ರನೌತ್ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಐಶ್ವರ್ಯಾ ಅವರ ಫೋಟೋವನ್ನು ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಹಂಚಿಕೊಂಡಿರುವ ಕಂಗನಾ ರನೌತ್, ಟ್ರೋಲರ್‌ಗಳಿಗೆ ಬಲವಾದ ಪ್ರತಿಕ್ರಿಯೆ ನೀಡಿದ್ದಾರೆ.

‘ಫ್ಯಾಷನ್ ಮತ್ತು ಶೈಲಿ ಎಂಬುದು ಪ್ರತಿಯೊಬ್ಬ ವ್ಯಕ್ತಿಯ ವೈಯಕ್ತಿಕ ಆಯ್ಕೆ ಹಾಗೂ ಅಭಿವ್ಯಕ್ತಿ. ಯಾವುದೇ ಮಹಿಳೆ ಇತರರನ್ನು ಮೆಚ್ಚಿಸಲು ಮಾತ್ರ ಬದುಕುವುದಿಲ್ಲ. ಈ ಲುಕ್‌ನಲ್ಲಿ ಐಶ್ವರ್ಯಾ ಅದ್ಭುತವಾಗಿ ಕಾಣುತ್ತಿದ್ದಾರೆ. ಕೆಲವರು ಅವಳನ್ನು ವಿಭಿನ್ನವಾಗಿ ನೋಡಲು ಬಯಸಿದರೆ, ಅವರು ಮೊದಲು ತಮ್ಮನ್ನು ತಾವು ಕನ್ನಡಿಯಲಿ ನೋಡಿಕೊಳ್ಳಬೇಕು. ಐಶ್ವರ್ಯಾ ಯಾರನ್ನೂ ಇಂಪ್ರೆಸ್ ಮಾಡಲು ರೆಡ್ ಕಾರ್ಪೆಟ್‌ಗೆ ಬರುವುದಿಲ್ಲ, ಅವರು ತಮ್ಮ ಆತ್ಮವಿಶ್ವಾಸ ಮತ್ತು ವಿಶಿಷ್ಟ ಗುರುತಿನಿಂದ ಅಲ್ಲಿ ನಿಲ್ಲುತ್ತಾರೆ” ಎಂದು ಬರೆದುಕೊಂಡಿದ್ದಾರೆ.

ವಯಸ್ಸನ್ನು ಮುಂದಿಟ್ಟುಕೊಂಡು ನೆಗೆಟಿವ್ ಕಾಮೆಂಟ್ ಮಾಡಿದವರಿಗೆ ಕಂಗನಾ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. “ಜನರಿಗೆ ರೆಡ್ ಕಾರ್ಪೆಟ್ ಮೇಲೆ ವಯಸ್ಸಾದ ಮಹಿಳೆಯರನ್ನು ನೋಡಿ ಅಭ್ಯಾಸವಿಲ್ಲದಿದ್ದರೆ, ಅವರು ಈಗಲೇ ಅದಕ್ಕೆ ಒಗ್ಗಿಕೊಳ್ಳುವುದು ಒಳ್ಳೆಯದು. ಐಶ್ವರ್ಯಾ ರೈ ಬಚ್ಚನ್ ಕಳೆದ 20 ವರ್ಷಗಳಿಗೂ ಹೆಚ್ಚು ಕಾಲ ಕಾನ್ ಫೆಸ್ಟ್​ನ ಭಾಗವಾಗಿದ್ದಾರೆ. ಅವರ ರೆಡ್ ಕಾರ್ಪೆಟ್ ಲುಕ್ ಪ್ರತಿ ವರ್ಷವೂ ಜಾಗತಿಕ ಮಟ್ಟದಲ್ಲಿ ಚರ್ಚೆಯಾಗುತ್ತದೆ. ಪ್ರಪಂಚದಾದ್ಯಂತದ ಫ್ಯಾಷನಿಸ್ಟರು ಅವರ ಸ್ಟೈಲಿಂಗ್‌ಗಾಗಿ ಕಾಯುತ್ತಿರುತ್ತಾರೆ” ಎಂದು ಹೇಳುವ ಮೂಲಕ ಕಂಗನಾ ಅವರು ಐಶ್ವರ್ಯಾ ಬೆಂಬಲಕ್ಕೆ ನಿಂತಿದ್ದಾರೆ.

ಕಾನ್ 2026ರ ವೇದಿಕೆಯಲ್ಲಿ ಐಶ್ವರ್ಯಾ ರೈ ಬಚ್ಚನ್ ಅವರು ಪ್ರಸಿದ್ಧ ವಿನ್ಯಾಸಕ ಅಮಿತ್ ಅಗರ್ವಾಲ್ ವಿನ್ಯಾಸಗೊಳಿಸಿದ ನೀಲಿ ಬಣ್ಣದ ವಿಶೇಷ ಗೌನ್ ಧರಿಸಿದ್ದರು. ವರದಿಗಳ ಪ್ರಕಾರ, ಈ ರಾಯಲ್ ಉಡುಪನ್ನು ಸಿದ್ಧಪಡಿಸಲು ಬರೋಬ್ಬರಿ 1500 ಗಂಟೆಗಳು ಬೇಕಾಗಿದ್ದವಂತೆ. ಆದರೆ, ಈ ವಿಶಿಷ್ಟ ಲುಕ್ ಹೊರಬರುತ್ತಿದ್ದಂತೆ ಸಾಮಾಜಿಕ ಮಾಧ್ಯಮದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು.

Related posts

ಕೇರಳಂನ ಮಾಜಿ ಸಿಎಂ ಪಿಣರಾಯಿ ನಿವಾಸದ ಮೇಲೆ ಇಡಿ ದಾಳಿ..!

Kalpana Editor

ಕಲ್ಲು ಕ್ವಾರಿ ದುರಂತ – ತಪ್ಪಿತಸ್ಥರ ವಿರುದ್ಧ ಕ್ರಮ ಎಂದ ಡಿಸಿಎಂ ಜಿ.ಪರಮೇಶ್ವರ್‌

Kalpana Editor

ಬೆಂಗಳೂರು ಅಭಿವೃದ್ಧಿ ಖಾತೆ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ ಸ್ವೀಕಾರ..!

Kalpana Editor