kranthikidi.com
ತಾಜಾಸುದ್ದಿರಾಜಕೀಯರಾಜ್ಯ

ಬ್ರೇಕ್‌ಫಾಸ್ಟ್‌ ಮೀಟಿಂಗ್‌ – ಸಿದ್ದರಾಮಯ್ಯನವರನ್ನು ತಬ್ಬಿ ಕಾಲಿಗೆ ಬಿದ್ದ ಡಿಕೆ ಶಿವಕುಮಾರ್‌

ಬೆಂಗಳೂರು : ಬ್ರೇಕ್‌ಫಾಸ್ಟ್‌ ಮೀಟಿಂಗ್‌ನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್‌ ಪರಸ್ಪರ ಅಲಿಂಗನ ಮಾಡಿಕೊಂಡಿದ್ದಾರೆ. ಇಂದು ಬೆಳಗ್ಗೆ ಉಪಹಾರಕ್ಕೆ ಕಾವೇರಿ ನಿವಾಸಕ್ಕೆ ಆಗಮಿಸಿದ ಡಿಕೆ ಶಿವಕುಮಾರ್‌ ಅವರು ಸಿದ್ದರಾಮಯ್ಯರನ್ನು ತಬ್ಬಿಕೊಂಡು ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ.

ಮನೆಗೆ ಬಂದ ಡಿಕೆಶಿ ಜೊತೆ ಮೊದಲು ಸಿಎಂ ಪ್ರತ್ಯೇಕ ಮಾತುಕತೆ ನಡೆಸಿದರು. ಆ ಬಳಿಕ‌ ಸಚಿವರ ಜೊತೆ ಸಿಎಂ ಮಾತನಾಡಿದರು. ಸಭೆಯಲ್ಲಿ ಸಿದ್ದರಾಮಯ್ಯನವರ ಅಕ್ಕಪಕ್ಕ ಕುಳಿತ ಡಿಸಿಎಂ ಡಿಕೆ ಶಿವಕುಮಾರ್‌ ಮತ್ತು ಪರಮೇಶ್ವರ್‌ ಕುಳಿತ್ತಿದ್ದಾರೆ.

ಡಿಕೆ ಶಿವಕುಮಾರ್, ಪರಮೇಶ್ವರ್‌, ಭೈರತಿ ಸುರೇಶ್, ಸಂತೋಷ್ ಲಾಡ್, ಎಂಸಿ ಸುಧಾಕರ್, ಎಂಬಿ ಪಾಟೀಲ್, ಪ್ರಿಯಾಂಕ್ ಖರ್ಗೆ, ಎಸ್‌ಎಸ್‌ ಮಲ್ಲಿಕಾರ್ಜುನ್‌, ಕೆಜೆ ಜಾರ್ಜ್, ಕೆ.ವೆಂಕಟೇಶ್, ಶಿವರಾಜ್ ತಂಗಡಗಿ, ಚೆಲುವರಾಯಸ್ವಾಮಿ, ಲಕ್ಷ್ಮೀ ಹೆಬ್ಬಾಳ್ಕರ್, ದರ್ಶಾನಪುರ, ಮಧು ಬಂಗಾರಪ್ಪ, ಸತೀಶ್ ಜಾರಕಿಹೋಳಿ, ಮಹದೇವಪ್ಪ, ಮಂಕಾಳ್ ವೈದ್ಯ, ತಿಮ್ಮಾಪುರ್, ಶರಣು ಪ್ರಕಾಶ್ ಪಾಟೀಲ್, ಪ್ರಿಯಾಂಕ್ ಖರ್ಗೆ, ಮುನಿಯಪ್ಪ, ಹೆಚ್.ಕೆ. ಪಾಟೀಲ್, ಈಶ್ವರ್ ಖಂಡ್ರೆ, ಬೋಸರಾಜು ಇವರೆಲ್ಲರೂ ಭಾಗಿಯಾಗಿದರು.

Related posts

‘ಅಪ್ಪ-ಮಗನ ನಂಬಿ ಕೆಟ್ಟೆ’ 29 ಕೋಟಿ ನಷ್ಟ ಎಂದ ನಿರ್ಮಾಪಕ

Kalpana Editor

ಬಾಲಿವುಡ್ ನಟಿ ಜಾಕ್ವೆಲಿನ್​​ ಕೋರಿಕೆಗೆ ನೋ ಎಂದ ಕೋರ್ಟ್​; ಹೆಚ್ಚಿತು ಸಂಕಷ್ಟ..!

Kalpana Editor

ಎಸ್‌ಡಿಆರ್‌ಎಫ್‌ ಸಿಪಿಐ ನೇಣು ಬಿಗಿದುಕೊಂಡು ಆತ್ಮಹತ್ಯೆ..!

Kalpana Editor