ನವದೆಹಲಿ : ಜಮೀರ್ ಅವರು ಮಾತನಾಡಿದ ಆಡಿಯೋ ಈಗ ಹೊರಬಂದಿದೆ. ಬಿಜೆಪಿಗೆ ಸಹಾಯ ಮಾಡಲು ಅವರು ಹೀಗೆ ಮಾಡಿದ್ದಾರೆ. ಅವರಿಗೆ ಮಾಡಿದ್ದುಣ್ಣೋ ಮಾರಾಯ ಅನ್ನೋ ಹಾಗೆ ಆಗಿದೆ ಎಂದು ಕಾಂಗ್ರೆಸ್ ನಾಯಕ ಎಸ್.ಎಸ್ ಮಲ್ಲಿಕಾರ್ಜುನ್ ಕಿಡಿಕಾರಿದ್ದಾರೆ.
ದೆಹಲಿಯಲ್ಲಿ ಮಾತನಾಡಿದ ಅವರು ದಾವಣಗೆರೆ ಉಪಚುನಾವಣೆಯ ವಿಚಾರವಾಗಿ ಜಮೀರ್ ಹಾಗೂ ಸಿರಾಜ್ ಮಾತನಾಡಿದ್ದ ಆಡಿಯೋ ವೈರಲ್ ಆದ ಬಗ್ಗೆ ಪ್ರತಿಕ್ರಿಯಿಸಿದರು. ಜಮೀರ್ ಅಹಮದ್ ಮಾತನಾಡಿದ್ದು ಆಡಿಯೋ ಮೂಲಕ ಹೊರ ಬಂದಿದೆ. ಹೈಕಮಾಂಡ್ ನಾಯಕರು ಎಲ್ಲವನ್ನೂ ನೋಡಿದ್ದಾರೆ ಎಂದರು.
ಈ ಬಗ್ಗೆ ಅವರು ತೀರ್ಮಾನ ಮಾಡುತ್ತಾರೆ. ನಾನು ಅವರನ್ನು ಉಚ್ಛಾಟನೆ ಮಾಡಿ ಎನ್ನುವಂತ ಕೆಳಮಟ್ಟದ ರಾಜಕೀಯ ಮಾಡಲ್ಲ. ಹೈಕಮಾಂಡ್ ನಾಯಕರು ಈ ಬಗ್ಗೆ ತಿರ್ಮಾನ ಮಾಡ್ತಾರೆ ಎಂದು ಹೇಳಿದ್ದಾರೆ.
