kranthikidi.com
ತಾಜಾಸುದ್ದಿರಾಜ್ಯ

ಮಳೆಗೆ ಸೇತುವೆ ಕುಸಿತ; ಚಿಂಚೋಳಿ – ಭಾಲ್ಕಿ ಮಾರ್ಗದಲ್ಲಿ ವಾಹನ ಸಂಚಾರ ಸ್ಥಗಿತ..!

ಕಲಬುರಗಿ : ಭಾರೀ ಮಳೆಗೆ ಚಿಂಚೋಳಿ ತಾಲೂಕಿನ ಚಿಮ್ಮನಚೋಡ ಗ್ರಾಮದ ಬಳಿ ಕಿರು ಸೇತುವೆ ಕುಸಿದಿದೆ. ಚಿಮ್ಮನಚೋಡ – ನರನಾಳ ಗ್ರಾಮದ ನಡುವೆ ಈ ಸೇತುವೆ ಇದೆ. ಸೇತುವೆ ಕುಸಿದ ಪರಿಣಾಮ ಚಿಂಚೋಳಿಯಿಂದ ಭಾಲ್ಕಿಗೆ ವಾಹನ ಸಂಚಾರ ಸ್ಥಗಿತಗೊಂಡಿದೆ.

ಚಿಂಚೋಳಿಯ ಬೆಡಕಪಳ್ಳಿ ಗ್ರಾಮದ 20ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಇದರಿಂದ ಜನ ಪರದಾಡುತ್ತಿದ್ದಾರೆ. ಸರ್ಕಾರ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಜನ ಒತ್ತಾಯಿಸಿದ್ದಾರೆ. ಇದನ್ನೂ ಓದಿ : ರಾಷ್ಟ್ರ ಪ್ರಶಸ್ತಿ ವಿಜೇತ ನಟ ಮಲಯಾಳಂ ಸಲೀಂ ಕುಮಾರ್ ಇನ್ನಿಲ್ಲ..!

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದ್ದು, ಮುಂದಿನ ನಾಲ್ಕೈದು ದಿನಗಳಲ್ಲಿ ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿ ವ್ಯಾಪಕ ಮಳೆಯಾಗುವ ಸಾದ್ಯತೆ ಇದೆ. ಉಳಿದ ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Related posts

ಐರ್ಲೆಂಡ್, ಇಂಗ್ಲೆಂಡ್ ಟಿ20 ಸರಣಿ; ಸಿರಾಜ್ ಬದಲಿಗೆ ಕನ್ನಡಿಗ ಪ್ರಸಿದ್ಧ್ ಕೃಷ್ಣ ಆಯ್ಕೆ..!

Kalpana Editor

ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ – ಬಿ.ವೈ.ವಿಜಯೇಂದ್ರ

Kalpana Editor

ಕಾಡುಗೋಡಿ ಮಗು ಕೊಲೆ ಪ್ರಕರಣ; ಮೂವರು ಪೊಲೀಸರ ತಲೆದಂಡ..!

Kalpana Editor