28.9 C
ಬೆಂಗಳೂರು
June 10, 2026
kranthikidi.com
ತಾಜಾಸುದ್ದಿರಾಜ್ಯ

ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ; ಆರೆಂಜ್ ಅಲರ್ಟ್ ಘೋಷಣೆ..!

ಬೆಂಗಳೂರು : ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲಿಯೂ ಸಹ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ‌ಯೆಲ್ಲೋ ಅಲರ್ಟ್ ಘೋಷಿಸಿದೆ.

ಉಳಿದ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಬೆಳಗಾವಿ, ಬಾಗಲಕೋಟೆ, ರಾಯಚೂರು ಸೇರಿದಂತೆ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಯೆಲ್ಲೋ‌ ಅಲರ್ಟ್ ಘೋಷಣೆ ಮಾಡಲಾಗಿದೆ. ಗಾಳಿಯ ಗಂಟೆಗೆ 40-50 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ರಾಜ್ಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇದನ್ನೂ ಓದಿ : ಕನಕಪುರಕ್ಕೆ ಡಿಕೆಶಿ ಭೇಟಿ: ನಿಮ್ಮೊಂದಿಗೆ ಸದಾ ಇರ್ತೆನೆ ಎಂದ ಸಿಎಂ

64.5 ಮಿ.ಮೀ ನಿಂದ 115.5 ಮಿ.ಮೀ ಒಳಗಡೆ ಮಳೆಯಾಗುವ ಸಾಧ್ಯತೆ ಇದ್ದರೆ ಯೆಲ್ಲೋ ಅಲರ್ಟ್‌ ಘೋಷಣೆಯಾಗುತ್ತದೆ. 115.6 ಮಿ.ಮೀ ನಿಂದ 204.4 ಮಿ.ಮೀ. ಒಳಗಡೆ ಮಳೆಯಾಗಲಿದ್ದರೆ ಆರೆಂಜ್‌ ಅಲರ್ಟ್‌ ಎಂದು ಪ್ರಕಟಿಸಲಾಗುತ್ತದೆ. 204.5 ಮಿ.ಮೀಗಿಂತ ಹೆಚ್ಚು ಮಳೆ ಬೀಳುವ ಸಾಧ್ಯತೆ ಇದ್ದರೆ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗುತ್ತದೆ.

Related posts

ಎಸಿ ಸ್ಫೋಟ; ಭಾರತೀಯ ಸ್ಪರ್ಧಾ ಆಯೋಗದ ಮೊದಲ ಅಧ್ಯಕ್ಷ ಧನೇಂದ್ರ ಕುಮಾರ್ ಸಾವು..!

Kalpana Editor

ಪಾಕ್‌ಗೆ ಬಿಸಿ ಮುಟ್ಟಿಸಲು ಮತ್ತೆ ರೆಡಿ; ಭಾರತಕ್ಕೆ ಬಂದಿಳಿದ ಮತ್ತೊಂದು ಸುದರ್ಶನ ಚಕ್ರ

Kalpana Editor

ಮತ್ತೆ ಮಧ್ಯಪ್ರಾಚ್ಯದಲ್ಲಿ ಯುದ್ಧ; ಇರಾನ್‌ ಮೇಲೆ ಅಮೆರಿಕ ವೈಮಾನಿಕ ದಾಳಿ..!

Kalpana Editor