kranthikidi.com
ತಾಜಾಸುದ್ದಿದೇಶ

ಅಂಗನವಾಡಿ ಪೌಷ್ಟಿಕ ಆಹಾರದಲ್ಲಿ ಸತ್ತ ಹಾವಿನ ಮರಿ ಪತ್ತೆ..!

ಭೋಪಾಲ್ : ಮಧ್ಯಪ್ರದೇಶದ ಪಾಂಡುರ್ಣ ಜಿಲ್ಲೆಯ ಅಂಗನವಾಡಿ ಕೇಂದ್ರದಲ್ಲಿ ಗರ್ಭಿಣಿಗೆ ನೀಡಿದ್ದ, ಪೌಷ್ಟಿಕ ಆಹಾರದ ಪ್ಯಾಕೆಟ್‌ ಒಳಗಡೆ ಸತ್ತ ಹಾವಿನ ಮರಿ ಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಕಾರ್ಘಾಟ್ ಕಮಠಿ ಗ್ರಾಮದ ಗರ್ಭಿಣಿ ವಚಲಾ ಬಾಯಿ ಧುರ್ವೆ ಅವರಿಗೆ ಅಂಗನವಾಡಿ ಕೇಂದ್ರದಿಂದ ಪೌಷ್ಟಿಕ ಆಹಾರದ ಲಡ್ಡುಗಳ ಪ್ಯಾಕೆಟ್ ನೀಡಲಾಗಿತ್ತು.

ಅದೃಷ್ಟವಶಾತ್ ಅವರು ಆಹಾರವನ್ನು ಸೇವಿಸಿರಲಿಲ್ಲ. ಮನೆಗೆ ತೆಗೆದುಕೊಂಡು ಹೋಗಿ ಪ್ಯಾಕೆಟ್ ತೆರೆದಾಗ ಅದರೊಳಗೆ ಸತ್ತ ಹಾವಿನ ಮರಿ ಕಂಡುಬಂದಿದೆ. ಈ ಘಟನೆ ತಿಳಿಯುತ್ತಿದ್ದಂತೆ ಕುಟುಂಬಸ್ಥರು ಅಂಗನವಾಡಿ ಸಿಬ್ಬಂದಿ ಹಾಗೂ ಸ್ಥಳೀಯ ಆಡಳಿತಕ್ಕೆ ಮಾಹಿತಿ ನೀಡಿದ್ದಾರೆ. ಬಳಿಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು, ಪೊಲೀಸರು ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಆಹಾರದ ಪ್ಯಾಕೆಟ್ ಅನ್ನು ಅಧಿಕಾರಿಗಳು ವಶಕ್ಕೆ ಪಡೆದು ಪರಿಶೀಲನಾ ವರದಿ ಸಿದ್ಧಪಡಿಸಿದ್ದಾರೆ. ಅಲ್ಲದೆ, ಆಹಾರದ ಮಾದರಿಯನ್ನು ಪರೀಕ್ಷೆಗಾಗಿ ಸಂರಕ್ಷಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಐವರು ಸದಸ್ಯರ ತನಿಖಾ ಸಮಿತಿಯನ್ನು ರಚಿಸಲಾಗಿದೆ. ಆಹಾರದ ಮಾದರಿಯನ್ನು ಭೋಪಾಲ್‌ನ ರಾಜ್ಯ ಆಹಾರ ಪರೀಕ್ಷಾ ಕೇಂದ್ರಕ್ಕೆ ಕಳುಹಿಸಲಾಗಿದ್ದು, ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ : ಮೋದಿ ಸರ್ಕಾರ ಜನರು ಹಾಳಾಗಿ ಹೋಗ್ಲಿ ಅಂತಾ ಬೆಲೆ ಜಾಸ್ತಿ ಮಾಡಿದ್ದಾರೆ – ಯತೀಂದ್ರ

ಈ ಘಟನೆಗೆ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಅಂಗನವಾಡಿ ಕೇಂದ್ರಗಳ ಮೂಲಕ ವಿತರಿಸುವ ಪೌಷ್ಟಿಕ ಆಹಾರದ ಗುಣಮಟ್ಟವನ್ನು ನಿಯಮಿತವಾಗಿ ಪರಿಶೀಲಿಸಬೇಕು ಎಂದು ಆಗ್ರಹಿಸಿದ್ದಾರೆ.ತನಿಖಾ ವರದಿ ಬರುವವರೆಗೆ ವದಂತಿಗಳಿಗೆ ಕಿವಿಗೊಡಬಾರದು ಎಂದು ಆಡಳಿತ ಸಾರ್ವಜನಿಕರಲ್ಲಿ ಮನವಿ ಮಾಡಿದೆ.

Related posts

ಅತ್ಯಂತ ಎತ್ತರ ಅಪಾರ್ಟ್ಮೆಂಟ್ ಕಟ್ಟಡ ತೆರವಿಗೆ ಜಿಬಿಎ ತೀರ್ಮಾನ..!

Kalpana Editor

ಬ್ರೇಕ್‌ಫಾಸ್ಟ್‌ ಮೀಟಿಂಗ್‌ – ಸಿದ್ದರಾಮಯ್ಯನವರನ್ನು ತಬ್ಬಿ ಕಾಲಿಗೆ ಬಿದ್ದ ಡಿಕೆ ಶಿವಕುಮಾರ್‌

Kalpana Editor

ಡಿಕೆಶಿ ಪ್ರವಾಸದ ವೇಳೆ ತೀವ್ರ ಭದ್ರತಾ ಲೋಪ; ಬೆಳಗಾವಿ ಡಿಹೆಚ್‌ಒಗೆ ಶೋಕಾಸ್ ನೋಟಿಸ್..!

Kalpana Editor