28.9 C
ಬೆಂಗಳೂರು
June 10, 2026
kranthikidi.com
ತಾಜಾಸುದ್ದಿದೇಶ

ಉಜ್ವಲ ಯೋಜನೆ; ವಾರ್ಷಿಕ ಸಿಲಿಂಡರ್‌ ಸಂಖ್ಯೆ 9 ರಿಂದ 4ಕ್ಕೆ ಇಳಿಕೆ..!

ನವದೆಹಲಿ : ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ನೀಡಲಾಗುತ್ತಿದ್ದ ವಾರ್ಷಿಕ ಸಬ್ಸಿಡಿ ಸಿಲಿಂಡರ್‌ಗಳ ಸಂಖ್ಯೆಯನ್ನು 9 ರಿಂದ 4 ಕ್ಕೆ ಕಡಿತಗೊಳಿಸಿದೆ. ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಎಲ್‌ಪಿಜಿ ಕೊರತೆಯಿಂದಾಗಿ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.

2016 ರಲ್ಲಿ ಯೋಜನೆ ಆರಂಭವಾದಾಗ ವರ್ಷಕ್ಕೆ 12 ಸಿಲಿಂಡರ್ ನೀಡಲಾಗುತ್ತಿತ್ತು. ಕಳೆದ ವರ್ಷ ಇದನ್ನು 9 ಕ್ಕೆ ಇಳಿಸಲಾಗಿತ್ತು. ಈಗ ಅದನ್ನು ಮತ್ತೆ 4 ಕ್ಕೆ ಕಡಿಮೆ ಮಾಡಲಾಗಿದೆ. 14.2 ಕೆಜಿ ಸಿಲಿಂಡರ್‌ಗೆ ಸಿಗುವ 300 ರೂ. ಸಬ್ಸಿಡಿ ಮುಂದುವರಿಯಲಿದೆ. ಈ ಹಣ ನೇರವಾಗಿ ಗ್ರಾಹಕರ ಬ್ಯಾಂಕ್ ಖಾತೆಗೆ ಜಮೆ ಆಗಲಿದೆ.

ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆ 942 ರೂ.ಗೆ ಏರಿಕೆಯಾಗಿದೆ. ಹೀಗಾಗಿ 300 ರೂ. ಸಬ್ಸಿಡಿ ಕಡಿತದ ನಂತರ ಉಜ್ವಲ ಗ್ರಾಹಕರು ಪ್ರತಿ ಸಿಲಿಂಡರ್‌ಗೆ 642 ರೂ. ಪಾವತಿಸಬೇಕಾಗುತ್ತದೆ. ಉಜ್ವಲ ಯೋಜನೆಯಡಿ ಬರುವ ಬಡ ಕುಟುಂಬಗಳು ವರ್ಷಕ್ಕೆ ಸರಾಸರಿ 4 ಸಿಲಿಂಡರ್‌ಗಳಿಗಿಂತ ಹೆಚ್ಚು ಬಳಸುತ್ತಿಲ್ಲ ಎಂದು ಸರ್ಕಾರದ ಸಮೀಕ್ಷೆ ಹೇಳಿದೆ. ಹಾಗಾಗಿ ಸಬ್ಸಿಡಿಯನ್ನು ನಿಜವಾದ ಬಳಕೆಗೆ ತಕ್ಕಂತೆ ಹೊಂದಿಸಲಾಗಿದೆ. ಇದನ್ನೂ ಓದಿ : ಗೃಹಲಕ್ಷ್ಮಿ ಹಣದ ದುರುಪಯೋಗ ತಡೆಗೆ ಬಯೋಮೆಟ್ರಿಕ್ ಜಾರಿ..!

ಒಂದು ಗ್ಯಾಸ್ ಸಿಲಿಂಡರ್ ಪೂರೈಸಲು ಸರ್ಕಾರಕ್ಕೆ ಒಟ್ಟು 1,600 ರೂ. ಕ್ಕಿಂತ ಹೆಚ್ಚು ವೆಚ್ಚವಾಗುತ್ತಿದೆ. ಸರ್ಕಾರ ಇದನ್ನು ಸಾಮಾನ್ಯ ಜನರಿಗೆ 942 ರೂ.ಗೆ ಮಾರಾಟ ಮಾಡುತ್ತಿದೆ. ಇದರಿಂದಾಗಿ ಸರ್ಕಾರಿ ತೈಲ ಕಂಪನಿಗಳು ಪ್ರತಿ ಸಿಲಿಂಡರ್ ಮೇಲೆ ಸುಮಾರು 700 ರೂ. ನಷ್ಟ ಅನುಭವಿಸುತ್ತಿವೆ. ತೈಲ ಮಾರುಕಟ್ಟೆ ಕಂಪನಿಗಳು ಪ್ರತಿ ಸಿಲಿಂಡರ್ ಮಾರಾಟದಲ್ಲಿ ದೊಡ್ಡ ನಷ್ಟ ಅನುಭವಿಸುತ್ತಿರುವುದರಿಂದ ಆರ್ಥಿಕ ಹೊರೆಯನ್ನು ಕಡಿಮೆ ಮಾಡಲು ಈ ಕ್ರಮ ಕೈಗೊಳ್ಳಲಾಗಿದೆ.

Related posts

ಭಾರತದ ಮಾವಿನ ಹಣ್ಣುಗಳಿಗೆ ಜಪಾನ್ ಸರ್ಕಾರ ತಾತ್ಕಾಲಿಕ ಬ್ರೇಕ್..!

Kalpana Editor

ಕೇರಳಂನ ಮಾಜಿ ಸಿಎಂ ಪಿಣರಾಯಿ ನಿವಾಸದ ಮೇಲೆ ಇಡಿ ದಾಳಿ..!

Kalpana Editor

ಎಂಟು ವರ್ಷದಿಂದ ಜೊತೆಯಲ್ಲಿದ್ದ ಅಂಧ ಮಹಿಳೆಯನ್ನೇ ದೋಚಿದ ದಂಪತಿ..!

Kalpana Editor