kranthikidi.com
ತಾಜಾಸುದ್ದಿದೇಶವಿದೇಶ

ಭಾರತೀಯ ಸಿಬ್ಬಂದಿ ಇದ್ದ, ಹಡಗಿನ ಮೇಲೆ ಅಮೆರಿಕ ದಾಳಿ; ಭಾರತ ತೀವ್ರ ಖಂಡನೆ..!

ನವದೆಹಲಿ : ಒಮಾನ್‌ ಕರಾವಳಿಯಲ್ಲಿ 24 ಭಾರತೀಯ ಸಿಬ್ಬಂದಿ ಇದ್ದ, ವಾಣಿಜ್ಯ ಹಡಗಿನ ಮೇಲೆ ಅಮೆರಿಕ ನಡೆಸಿದ ದಾಳಿಯನ್ನು ಭಾರತ ತೀವ್ರವಾಗಿ ಖಂಡಿಸಿದೆ. ದೊಡ್ಡ ಬೆಳವಣಿಗೆಯೊಂದರಲ್ಲಿ, ದಾಳಿಯ ನಂತರ ದೆಹಲಿಯಲ್ಲಿರುವ ಅಮೆರಿಕದ ಉನ್ನತ ರಾಜತಾಂತ್ರಿಕರಿಗೆ ಭಾರತ ಡಿಮಾರ್ಚ್ ಜಾರಿ ಮಾಡಿದೆ.

ಒಮಾನ್ ಕರಾವಳಿಯಲ್ಲಿ ಸೆಟ್ಟೆಬೆಲ್ಲೊ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ನಾವು ಖಂಡಿಸುತ್ತೇವೆ. ಹಡಗಿನಲ್ಲಿದ್ದ 24 ಭಾರತೀಯ ಸಿಬ್ಬಂದಿಯಲ್ಲಿ ಇಲ್ಲಿಯವರೆಗೆ 21 ಭಾರತೀಯರನ್ನು ರಕ್ಷಿಸಲಾಗಿದೆ. 3 ಭಾರತೀಯರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ ಎಂದು ವಿದೇಶಾಂಗ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.‌

ಈ ಪ್ರದೇಶದಲ್ಲಿ ಹಡಗು ಸಾಗಣೆಯ ಮೇಲಿನ ದಾಳಿಗಳು ತೀವ್ರ ಕಳವಳಕಾರಿ. ಇದು ಮಧ್ಯಪ್ರಾಚ್ಯ ಸಂಘರ್ಷದ ನೇರ ಪರಿಣಾಮ ಎಂದು ಭಾರತ ಅಸಮಾಧಾನ ಹೊರಹಾಕಿದೆ. ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆ ಮರಳಲು ಸಾಧ್ಯವಾಗುವಂತೆ, ಉದ್ವಿಗ್ನತೆಯನ್ನು ತಕ್ಷಣವೇ ಕಡಿಮೆ ಮಾಡಲು ಮತ್ತು ರಾಜತಾಂತ್ರಿಕ ಪರಿಹಾರಕ್ಕಾಗಿ ನಡೆಯುತ್ತಿರುವ ಮಾತುಕತೆಗಳನ್ನು ಮುಕ್ತಾಯಗೊಳಿಸಲು ನಾವು ನಮ್ಮ ಕರೆಯನ್ನು ಪುನರುಚ್ಚರಿಸುತ್ತೇವೆ. ಇದನ್ನೂ ಓದಿ : ನಮ್ಮ ಮೆಟ್ರೋ 3ನೇ ಹಂತಕ್ಕೆ ಕೇಂದ್ರ ಸರ್ಕಾರದಿಂದ ಶೀಘ್ರ ಅನುಮೋದನೆ ಸಾಧ್ಯತೆ..!

ಈ ಪ್ರದೇಶದಲ್ಲಿ ವಾಣಿಜ್ಯ ಹಡಗು ಸಾಗಣೆ ಮತ್ತು ನಾಗರಿಕ ಮೂಲಸೌಕರ್ಯವನ್ನು ಗುರಿಯಾಗಿಸಿಕೊಳ್ಳುವುದು ಕೊನೆಗೊಳ್ಳಬೇಕು. ಅಂತರರಾಷ್ಟ್ರೀಯ ಕಾನೂನಿಗೆ ಅನುಸಾರವಾಗಿ ಈ ಪ್ರದೇಶದಲ್ಲಿನ ಜಲಮಾರ್ಗಗಳ ಮೂಲಕ ಮುಕ್ತ ಮತ್ತು ಅಡೆತಡೆಯಿಲ್ಲದ ಸಂಚರಣೆಯನ್ನು ಆದಷ್ಟು ಬೇಗ ಪುನಃಸ್ಥಾಪಿಸಬೇಕು ಎಂದು ಭಾರತ ಒತ್ತಾಯಿಸಿದೆ. ವಿದೇಶಾಂಗ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ನಾಗರಾಜ್ ನಾಯ್ಡು, ಅಮೆರಿಕದ ಉಸ್ತುವಾರಿ ಜೇಸನ್ ಮೀಕ್ಸ್ ಅವರ ಎದುರು ಹಡಗಿನ ಮೇಲಿನ ದಾಳಿ ಖಂಡಿಸಿದ್ದಾರೆ.

Related posts

ಕೆಆರ್‌ಪುರಂ ತ್ರಿವಳಿ ಹತ್ಯೆ ಕೇಸ್; ಪುದುಚೇರಿಯಲ್ಲಿ ಹಂತಕಿ ಶ್ವೇತಾ ಅರೆಸ್ಟ್‌..!

Kalpana Editor

ಮಳೆ ಆರ್ಭಟ ಜೋರು; ಹಾರಂಗಿ ಜಲಾಶಯದಿಂದ ನೀರು ಕಾವೇರಿ ನದಿಗೆ..!

Kalpana Editor

ಜಿನೆವಾದಲ್ಲಿ ಅಮೆರಿಕ-ಇರಾನ್‌ ಶಾಂತಿ ಮಾತುಕತೆ; ಮುನೀರ್‌ ಹತ್ಯೆಗೆ ಇಸ್ರೇಲ್‌ ಸಂಚು..!

Kalpana Editor