kranthikidi.com
ತಾಜಾಸುದ್ದಿರಾಜ್ಯ

ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತ..!

ಬೆಂಗಳೂರು : ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ ಅವರಿಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಮನಗರ ‌ಕಾಂಗ್ರೆಸ್ ಶಾಸಕ, ಸಿಎಂ ಡಿಕೆ ಶಿವಕುಮಾರ್ ಆಪ್ತ ಇಕ್ಬಾಲ್ ಹುಸೇನ್ ಹೃದಯ ಸಂಬಂಧಿ ಕಾಯಿಲೆ ಹಿನ್ನೆಲೆ, ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ಇಂದು ದಾಖಲಾಗಿದ್ದಾರೆ. ಅವರಿಗೆ ಈ ಹಿಂದೆ ಹಾರ್ಟ್ ಬ್ಲಾಕ್ ಆಗಿತ್ತು. ಸ್ಟೆಂಟ್ ಹಾಕಿಸಿಕೊಳ್ಳುವಂತೆ ವೈದ್ಯರು ಸೂಚಿಸಿದ್ದರು.

ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಸಿಎಂ ಡಿಕೆಶಿವಕುಮಾರ್ ಆಪ್ತರಾಗಿದ್ದು, ಶಾಸಕರ ಆರೋಗ್ಯ ವಿಚಾರಿಸಲು ಸಿಎಂ ಡಿಕೆಶಿ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ. ಕೆಲವೇ ಗಂಟೆಗಳಲ್ಲಿ ಆಸ್ಪತ್ರೆಗೆ ಸಿಎಂ ಡಿಕೆಶಿ ಭೇಟಿ ಮಾಡಲಿದ್ದಾರೆ ಎನ್ನಲಾಗಿದೆ. ಈಗಾಲೇ ಆಸ್ಪತ್ರೆಗೆ ಬಿಗಿ ಬಂದೋಬಸ್ತ್ ಮಾಡಲಾಗಿದೆ.

ಇಕ್ಬಾಲ್ ಹುಸೇನ್ ಅವರಿಗೆ ಚಿಕಿತ್ಸೆ ನೀಡುತ್ತಿರುವ ಡಾ.ವಿಕೆ ಶ್ರೀನಿವಾಸ್ ಅವರು ಮಾತನಾಡಿ, ಶನಿವಾರ ಬೆಳಗ್ಗೆ ಎದೆನೋವು ಕಾಣಿಸಿಕೊಂಡ ಪರಿಣಾಮ ಆಸ್ಪತ್ರೆಗೆ ದಾಖಲಾದರು. ಡಯಾಬಿಟಿಸ್ ಕೂಡಾ ಇದೆ. ತಕ್ಷಣವೇ ಆಂಜಿಯೋಗ್ರಾಮ್ ಮಾಡಿಸಿದಾಗ ಹೃದಯದಲ್ಲಿ 3 ಬ್ಲಾಕ್ ಇರುವುದು ಕಂಡುಬಂದಿದೆ. ಹಾಗಾಗಿ ಬೈಪಾಸ್ ಸರ್ಜರಿ ಇನ್ನೆರಡು ಮೂರು ದಿನದಲ್ಲಿ ಮಾಡಲಾಗುವುದು ಎಂದಿದ್ದಾರೆ. ಇದಕ್ಕೆ ಕುಟುಂಬಸ್ಥರೂ ಒಪ್ಪಿಗೆ ಸೂಚಿಸಿದ್ದಾರೆ. ಇದನ್ನೂ ಓದಿ : ಇಂದು ಶಬರಿಮಲೆ ಯಾತ್ರೆ ಕೈಗೊಂಡ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Related posts

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ರಾಜ್ಯಪಾಲರ ಕಾರ್ಯದರ್ಶಿಗೆ ಪತ್ರ ಹಸ್ತಾಂತರ..!

Kalpana Editor

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ- ಸಿಎಂ ಸಿದ್ದರಾಮಯ್ಯ

Kalpana Editor

ಸಶಸ್ತ್ರ ಸೀಮಾ ಬಲದಲ್ಲಿ 404 ಕಾನ್ಸ್‌ಟೇಬಲ್ ಹುದ್ದೆಗೆ ನೇಮಕಾತಿ..!

Kalpana Editor