28.2 C
ಬೆಂಗಳೂರು
July 11, 2026
kranthikidi.com
ತಾಜಾಸುದ್ದಿರಾಜ್ಯ

ಮಣಿಪಾಲದಲ್ಲಿ ಶಾಲಾ ಬಸ್ ಅಪಘಾತ; ಡಿವೈಡರ್ ಮೇಲೇರಿದ ಬಸ್..!

ಉಡುಪಿ : ಅಲ್-ಇಬಾದಾದ್ ಇಂಡಿಯನ್ ಸ್ಕೂಲ್‌ಗೆ ಸೇರಿದ ಬಸ್‌ವೊಂದು ಇಂದಯ (ಗುರುವಾರ) ಬೆಳಿಗ್ಗೆ ಮಣಿಪಾಲದ ಐನಾಕ್ಸ್ (ಸಿನಿಗ್ಯಾಲಕ್ಸಿ) ಮುಂಭಾಗ ಅಪಘಾತಕ್ಕೀಡಾಗಿ ಡಿವೈಡರ್ ಮೇಲೇರಿ ನಿಂತ ಘಟನೆ ನಡೆದಿದೆ.

ಮಣಿಪಾಲ ಟ್ರಾಫಿಕ್ ಸಿಗ್ನಲ್‌ನಿಂದ ಲಕ್ಷ್ಮೀಂದ್ರನಗರ ಕಡೆಗೆ ಸಾಗುವ ತಿರುವಿನಲ್ಲಿ ಈ ಅಪಘಾತ ಸಂಭವಿಸಿದೆ. ನಿಯಂತ್ರಣ ತಪ್ಪಿದ ಬಸ್ ಹೆದ್ದಾರಿಯ ಡಿವೈಡರ್ ಮೇಲೇರಿ ನಿಂತಿದ್ದು, ಅಪಘಾತದ ರಭಸಕ್ಕೆ ತಡೆಬೇಲಿ ಹಾಗೂ ಬಸ್‌ನ ಮುಂಭಾಗ ಹಾನಿಗೊಳಗಾಗಿದೆ.

ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಅಥವಾ ಗಂಭೀರ ಗಾಯಗಳ ಬಗ್ಗೆ ವರದಿಯಾಗಿಲ್ಲ. ಇದರಿಂದ ಸಂಭವಿಸಬಹುದಾಗಿದ್ದ ಹೆಚ್ಚಿನ ಅನಾಹುತ ತಪ್ಪಿದೆ ಎಂದು ತಿಳಿದುಬಂದಿದೆ. ಅಪಘಾತದ ಕಾರಣದ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದ್ದು, ಸಂಬಂಧಿಸಿದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ : ತಮಿಳುನಾಡಿನಲ್ಲಿ ಹುಟ್ಟುವ ಮಕ್ಕಳಿಗೆ 1 ಗ್ರಾಂ ಉಂಗುರ; ಷರತ್ತುಗಳೇನು..?

Related posts

ಉತ್ತರ ಕರ್ನಾಟಕದ ಅಭಿವೃದ್ಧಿಗೆ ಹೊಸ ವೇಗ ಸಿಗುವ ವಿಶ್ವಾಸ – ಶಾಸಕಿ ಲಕ್ಷ್ಮೀ ಹೆಬ್ಬಾಳಕರ್

Kalpana Editor

ನರೇಗಲ್ ಘಟನೆ ತನಿಖೆಗೆ ಎಸ್ ಐಟಿ ರಚನೆಗೆ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹ..!

Kalpana Editor

ಕಲ್ಲು ಕ್ವಾರಿ ದುರಂತ; ಅಧಿಕೃತ ವರದಿ ಬಂದ ಬಳಿಕ ಕ್ರಮಗಳ ಬಗ್ಗೆ ತೀರ್ಮಾನ – ಸಿಎಂ ಡಿಕೆಶಿ

Kalpana Editor