July 12, 2026
kranthikidi.com
ತಾಜಾಸುದ್ದಿರಾಜ್ಯ

ದೇವರ ಮಹೋತ್ಸವ ಕಾರ್ಯಕ್ರಮದಲ್ಲಿ ಊಟ ಸೇವನೆ; 150 ಕ್ಕೂ ಹೆಚ್ಚು ಮಂದಿ ಅಸ್ವಸ್ಥ..!

ತುಮಕೂರು : ದೇವರ ಮಹೋತ್ಸವ ಹಾಗೂ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಊಟ ಸೇವಿಸಿದ್ದ 150 ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡು ಆಸ್ಪತ್ರೆ ಸೇರಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ನಾಗಲಮಡಿಕೆ ಹೋಬಳಿಯ ಕೆ. ಸೇವಾಲಾಲಪುರದಲ್ಲಿ ಗುರುವಾರ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ದೇವರ ಮಹೋತ್ಸವ ಹಾಗೂ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸುಮಾರು 300ಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು. ಊಟ ಸೇವನೆ ಮಾಡಿದ ಬಳಿಕ ಬಹುತೇಕರಿಗೆ ವಾಂತಿ-ಭೇದಿ ಕಾಣಿಸಿಕೊಂಡಿದೆ. ಕೆಲವರಿಗೆ ಗುರುವಾರ ರಾತ್ರಿಯೇ, ಇನ್ನೂ ಕೆಲವರಿಗೆ ಮರುದಿನ ಬೆಳಗ್ಗೆ ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ.

ಈ ಕಾರ್ಯಕ್ರಮದಲ್ಲಿ ಊಟ ಸೇವನೆ ಮಾಡಿದ್ದವರಲ್ಲಿ ಮಕ್ಕಳು ಸೇರಿದಂತೆ ಹಲವಾರು ಮಂದಿ ಅಸ್ವಸ್ಥಗೊಂಡಿದಾರೆ. ಕೂಡಲೇ ಅವರನ್ನ ಪಾವಗಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿದೆ. ತಿರುಮಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ : ಬೆಂಗಳೂರಿನ ಮೊದಲ ಟನಲ್‌ ರಸ್ತೆ ಕಾಮಗಾರಿಗೆ ಇಂದು ಸಿಎಂ ಭೂಮಿಪೂಜೆ

Related posts

ವಯನಾಡಿನಲ್ಲಿ ಭೂಕುಸಿತ; ಕಾರ್ಮಿಕರು ಬಲಿ – ಸಿಎಂ ಸತೀಶನ್‌ ತುರ್ತು ಸಭೆ..!

Kalpana Editor

ಫಾರ್ಮ್‌ ಹೌಸ್ ಗೇಟ್ ಬಳಿ ನಾಡಬಾಂಬ್ ಸ್ಫೋಟ; ವಕೀಲನ ಸ್ಥಿತಿ ಗಂಭೀರ..!

Kalpana Editor

ಬೆಂಗಳೂರಿನಲ್ಲಿ ಫುಟ್​ಪಾತ್ ತೆರವು ಕಾರ್ಯಾಚರಣೆ ಆರಂಭ..!

Kalpana Editor