August 27, 2026
kranthikidi.com
ತಾಜಾಸುದ್ದಿರಾಜ್ಯ

ನಾಟಿ ಕೋಳಿ, ಮುದ್ದೆ, ಚಿಕನ್‌ ಚಾಪ್ಸ್‌, ಬಾಯಿ ಚಪ್ಪರಿಸಿ ತಿಂದ ಸಿದ್ದರಾಮಯ್ಯ

ಮೈಸೂರು : ಮಾಜಿ ಸಿಎಂ ಸಿದ್ದರಾಮಯ್ಯ ಅವರ ಮೈಸೂರಿನ ನಿವಾಸದಲ್ಲಿ ಕಾಂಗ್ರೆಸ್ ನಾಯಕರು ಇಂದು ಭರ್ಜರಿ ಬಾಡೂಟ ಸವಿದರು. ಸಿಎಂ ಸ್ಥಾನದಿಂದ ಕೆಳಗಿಳಿದ ಮೇಲೆ ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿದ್ದ, ಸಿದ್ದರಾಮಯ್ಯ ಅವರು ಎಸ್‌ಐಆರ್ ಕುರಿತ ಕಾಂಗ್ರೆಸ್ ಪಕ್ಷದ ಜಾಗೃತಿ ಸಮಾವೇಶದಲ್ಲಿ ಪಾಲ್ಗೊಂಡಿದ್ದರು.

ಬಳಿಕ ಕಾಂಗ್ರೆಸ್‌ನ ನಾಯಕರಿಗೆ ತಮ್ಮ ಮನೆಯಲ್ಲೇ ಬಾಡೂಟದ ವ್ಯವಸ್ಥೆ ಮಾಡಿದ್ದರು. ನಾಟಿಕೋಳಿ ಸಾರು, ಮುದ್ದೆ, ಚಿಕನ್‌ ಚಾಪ್ಸ್‌, ಪಲಾವ್‌ ಹಾಗೂ ಸಸ್ಯಾಹಾರದ ಊಟ ವ್ಯವಸ್ಥೆಯನ್ನೂ ಮಾಡಿದ್ದರು. ಮೈಸೂರಿನ ಟಿ.ಕೆ ಬಡಾವಣೆಯಲ್ಲಿರುವ ಸಿದ್ದರಾಮಯ್ಯ ನಿವಾಸ ಮುಂದೆ ಜರ್ಮನ್ ಟೆಂಟ್ ಹಾಕಿ ಊಟದ ವ್ಯವಸ್ಥೆ ಮಾಡಲಾಗಿತ್ತು. ತಾವು ಕೂಡ ಕಾಂಗ್ರೆಸ್‌ ಶಾಸಕರು ಹಾಗೂ ಸಂಸದರೊಟ್ಟಿಗೆ ಕುಳಿತು ಊಟ ಸವಿದಿದ್ದಾರೆ. ಇದನ್ನೂ ಓದಿ : ವಕ್ಫ್ ವಿವಾದ; ರಾಜ್ಯ ಸರ್ಕಾರದ ಮೇಲೆ ಮುಗಿಬಿದ್ದ, ಆರ್‌.ಅಶೋಕ್

Related posts

ಕಾಕ್ರೋಚ್‌ಗಳ ಮೇಲೆ ಪೊಲೀಸರ ಲಾಠಿಚಾರ್ಜ್‌ – ಕೆಲ ಭಾಗಗಳಲ್ಲಿ ಇಂಟರ್‌ನೆಟ್‌ ಸ್ಥಗಿತ..!

Kalpana Editor

ಅಮ್ಮನ ಹಣೆಗೆ ಮುತ್ತಿಟ್ಟು ಕಣ್ಣೀರು ಹಾಕಿ, ಅಂತಿಮ ವಿದಾಯ ಹೇಳಿದ ಹೆಚ್​​​​.ಡಿ ಕುಮಾರಸ್ವಾಮಿ

Kalpana Editor

ಹೆಚ್​​.ಸಿ. ಮಹದೇವಪ್ಪ ವಿರುದ್ಧ ಭ್ರಷ್ಟಾಚಾರ ಆರೋಪ; ರಾಜ್ಯಪಾಲರಿಗೆ ದೂರು ಸಲ್ಲಿಕೆ..!

Kalpana Editor