July 12, 2026
kranthikidi.com
ಕ್ರೈಂತಾಜಾಸುದ್ದಿರಾಜ್ಯ

ಮೆಟ್ರೋ ಕಾಮಗಾರಿ ವೇಳೆ ಕಾರ್ಮಿಕ ಸಾವು; ಬಿಎಂಆರ್‌ಸಿಎಲ್ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌

ಬೆಂಗಳೂರು : ಮೆಟ್ರೋ ಕಾಮಗಾರಿ ವೇಳೆ ಕರೆಂಟ್ ಶಾಕ್ ತಗುಲಿ ಕಾರ್ಮಿಕ ಸಾವನ್ನಪ್ಪಿದ್ದ ಪ್ರಕರಣ ಸಂಬಂಧ ಇದೀಗ ನಾಲ್ವರು ಬಿಎಂಆರ್‌ಸಿಎಲ್ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಮೃತ ಕಾರ್ಮಿಕ ಗುರುವಪ್ಪ ಮಗ ಮೂರ್ತಿ ಅವರು ಹಲಸೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಕೆಲಸದ ವೇಳೆ ನಿರ್ಲಕ್ಷ್ಯ ತೋರಿದ್ದಾರೆ ಎಂದು ಆರೋಪಿಸಿದ್ದಾರೆ.

ದೂರಿನ ಆಧಾರದ ಮೇಲೆ ಗುತ್ತಿಗೆ ಕಂಪನಿಯ ಸೂರಜ್, ಗುತ್ತಿಗೆ ಪಡೆದ ಕಂಪನಿಯ ಇನ್‌ಚಾರ್ಜ್ ರಾಜೇಶ್, ಗುತ್ತಿಗೆ ಪಡೆದ ಕಂಪನಿಯ ವ್ಯವಸ್ಥಾಪಕ ಮಾನಸ ಹಾಗೂ ಇನ್ನೋರ್ವ ಬಿಎಂಆರ್‌ಸಿಎಲ್ ಅಧಿಕಾರಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಶುಕ್ರವಾರ (ಜೂ.26) ಮಧ್ಯಾಹ್ನ 3:52ರ ಸುಮಾರಿಗೆ ಈ ಘಟನೆ ನಡೆದಿದೆ.

ಟ್ರಿನಿಟಿ ಮೆಟ್ರೋ ನಿಲ್ದಾಣದ ಹೊರಭಾಗದಲ್ಲಿರುವ ಪಿಲ್ಲರ್ ಸಂಖ್ಯೆ 153ರ ಸಮೀಪ ಭೂಮಿಯಲ್ಲಿ ಅರ್ಥ್ ಪಿಟ್ ಕಾಮಗಾರಿ ನಡೆಯುತ್ತಿತ್ತು. ಈ ವೇಳೆ ಗುರುವಪ್ಪ ಎಂಬ ಕಾರ್ಮಿಕನಿಗೆ ಕರೆಂಟ್ ಶಾಕ್ ತಗುಲಿದೆ. ಕೂಡಲೇ ಕಾರ್ಮಿಕನನ್ನು ಸೇಂಟ್ ಫಿಲೋಮಿನಾ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗಕ್ಕೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಗೆ ತಲುಪವಷ್ಟರಲ್ಲೇ ಕಾರ್ಮಿಕ ಸಾವನ್ನಪ್ಪಿರುವುದಾಗಿ ವೈದ್ಯರು ದೃಢಪಡಿಸಿದ್ದರು. ಇದನ್ನೂ ಓದಿ : ಜಪ್ತಿ ಮಾಡಿದ್ದ, ಮದ್ಯದ ಲೆಕ್ಕದಲ್ಲಿ ಭಾರೀ ವ್ಯತ್ಯಾಸ; ಅಬಕಾರಿ ಅಧಿಕಾರಿಗಳ ಮೇಲೆ ʻಲೋಕಾʼ ದಾಳಿ..!

Related posts

ಸೂರ್ಯ, ಚಂದ್ರ ಇರೋವರೆಗೂ ಜಾನಕಿ ಅಮ್ಮ ಶಾಶ್ವತ; ವಿಜಯ ಪ್ರಕಾಶ್‌ ಭಾವುಕ..!

Kalpana Editor

ಡೀಸೆಲ್-ಪೆಟ್ರೋಲ್ ಬೆಲೆ ಏರಿಕೆ; ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಆಮ್ ಆದ್ಮಿ ಪಕ್ಷದ ಪ್ರತಿಭಟನೆ..!

Kalpana Editor

ಕೆಆರ್‌ಪುರಂ ತ್ರಿವಳಿ ಹತ್ಯೆ ಕೇಸ್; ಪುದುಚೇರಿಯಲ್ಲಿ ಹಂತಕಿ ಶ್ವೇತಾ ಅರೆಸ್ಟ್‌..!

Kalpana Editor