July 12, 2026
kranthikidi.com
ತಾಜಾಸುದ್ದಿರಾಜ್ಯ

ಎಸ್​ಐಆರ್​​ – ಮನೆ ಮನೆಗೆ ಭೇಟಿ ಕೊಡದೆ, ಫಾರಂ ಇಶ್ಯೂ; ಇದು ಸರಿಯಾದ ಪ್ರಕ್ರಿಯೆ ಅಲ್ಲ..!

ಬೆಂಗಳೂರು : ಯಶವಂತಪುರ ವಿಧಾನಸಭಾ ಕ್ಷೇತ್ರದ ತಾವರೆಕೆರೆಯಲ್ಲಿ ಈ ರೀತಿ ಎಸ್‌ಐಆರ್‌ ಮಾಡುತ್ತಿದ್ದಾರೆ. ಮನೆ ಮನೆಗೆ ಭೇಟಿ ಕೊಡದೆ, ಒಂದು ಜಾಗದಲ್ಲಿ ಕುಳಿತುಕೊಂಡು ಫಾರಂ ಅನ್ನು ಇಶ್ಯೂ ಮಾಡಿ ನಂತರ ಸರ್ವೆ ಕಂಪ್ಲೀಟ್ ಆಗಿದೆ ಎಂದು ಸ್ಟಿಕ್ಕರ್ ಸಹ ಕೊಡುತ್ತಿದ್ದಾರೆ. ಹಾಗೆ ಮತದಾರರ ಬಗ್ಗೆ ಮಾಹಿತಿ ಪಡೆದುಕೊಳ್ಳಲು ಯಶವಂತಪುರ ಕ್ಷೇತ್ರದ ಶಾಸಕರ ಫೋಟೋ ಇರುವ ಬುಕ್ಕನ್ನು ಉಪಯೋಗಿಸುತ್ತಿದ್ದಾರೆ ಎಂದು ಹೇಳಲಾಗಿದೆ.

ಇದು ಸರಿಯಾದ ಪ್ರಕ್ರಿಯೆ ಅಲ್ಲ ದಯಮಾಡಿ ಯಶವಂತಪುರ ಜನತೆ ಹಾಗೂ ಕಾರ್ಯಕರ್ತರುಗಳು ಎಚ್ಚರದಿಂದ ಇರಬೇಕು. ಈ ರೀತಿ ಎಸ್ಐಆರ್ ಮಾಡಿದರೆ, ಅಕ್ರಮ ಮತದಾರರನ್ನು ತಡೆಗಟ್ಟಲು ಆಗುವುದಿಲ್ಲ. ದಯಮಾಡಿ ಪಕ್ಷದ ಅಧ್ಯಕ್ಷರು ಹಾಗೂ ಹೋಬಳಿಯ ಮುಖಂಡರುಗಳು, ಹೋಬಳಿ ಅಧ್ಯಕ್ಷರು, ಕಾರ್ಯಕರ್ತರು ಇದರ ಬಗ್ಗೆ ನಿಗಾವಹಿಸಬೇಕು ಹಾಗೂ ಎಚ್ಚರದಿಂದಿರಬೇಕು. ಇಂಥವರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಲಾಗಿದೆ. ಇದನ್ನೂ ಓದಿ : ಮುಸ್ಲಿಂ ಧರ್ಮಗುರುಗಳಿಗೆ ಅವಮಾನ ಆರೋಪ – ಪುನೀತ್ ಕೆರೆಹಳ್ಳಿ ಅರೆಸ್ಟ್‌..!

Related posts

ಪಾಕ್‌ಗೆ ಬಿಸಿ ಮುಟ್ಟಿಸಲು ಮತ್ತೆ ರೆಡಿ; ಭಾರತಕ್ಕೆ ಬಂದಿಳಿದ ಮತ್ತೊಂದು ಸುದರ್ಶನ ಚಕ್ರ

Kalpana Editor

ಜನರಿಗೆ ಬೆಳ್ಳಂಬೆಳಗ್ಗೆ ಶಾಕ್‌ – ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ದರ 42 ರೂ. ಏರಿಕೆ..!

Kalpana Editor

ಮುಖ್ಯಮಂತ್ರಿಗಳು ಬೂಟಾಟಿಕೆ ಬಿಟ್ಟು ಹಿಂದೂಗಳಿಗೆ ರಕ್ಷಣೆ ಕೊಡಲು ಆಗ್ರಹ; ಹಿಂದೂಗಳ ಮೇಲೆ ಪದೇಪದೇ ದೌರ್ಜನ್ಯ – ಬಿ.ವೈ.ವಿಜಯೇಂದ್ರ

Kalpana Editor