August 26, 2026
kranthikidi.com
ತಾಜಾಸುದ್ದಿದೇಶ

ಮುಂಬೈನಲ್ಲಿ ಮಳೆಯ ರೌದ್ರನರ್ತನ; ಇಂದು 43 ರೈಲು ಸಂಚಾರ ರದ್ದು..!

ಮುಂಬೈ : ಮೂರು ದಿನಗಳಿಂದ ಮುಂಬೈ ಸೇರಿದಂತೆ ಮಹಾರಾಷ್ಟ್ರದ ಹಲವು ಭಾಗಗಳಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ರಸ್ತೆಗಳು ಜಲಾವೃತವಾಗಿದ್ದು, ವಾಹನ ಸಂಚಾರ, ರೈಲು ಸೇವೆ ಮತ್ತು ದೈನಂದಿನ ಬದುಕಿನ ಮೇಲೆ ಮಳೆಯ ಪರಿಣಾಮ ತೀವ್ರವಾಗಿದೆ.

ಈ ದುರ್ಘಟನೆಗಳ ನಡುವೆ ಭಿವಂಡಿಯಲ್ಲಿ ಮನಕಲಕುವ ಘಟನೆ ನಡೆದಿದೆ. ತುಂಬಿ ಹರಿಯುತ್ತಿದ್ದ ಚರಂಡಿಯಲ್ಲಿ 13 ವರ್ಷದ ಬಾಲಕ ಮುಹಮ್ಮದ್ ಅಬೂಝರ್ ಕೊಚ್ಚಿಹೋಗಿದ್ದಾನೆ. ಸ್ಥಳೀಯರು ರಕ್ಷಿಸಲು ಪ್ರಯತ್ನಿಸಿದರೂ ನೀರಿನ ರಭಸಕ್ಕೆ ಸಿಲುಕಿ ಬಾಲಕ ಸಾವನ್ನಪ್ಪಿದ್ದಾನೆ. ಆರು ದಿನಗಳಲ್ಲಿ ಮುಂಬೈ ನಗರದಲ್ಲಿ ಮಳೆಯ ಅವಾಂತರಕ್ಕೆ 10 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಭಾರಿ ಮಳೆಯ ಕಾರಣ ಹಲವೆಡೆ ಭೂಕುಸಿತ, ನೀರು ನಿಲ್ಲುವುದು ಮತ್ತು ಅಪಘಾತಗಳು ಹೆಚ್ಚಾಗಿವೆ.

ಮಳೆಯ ಹೊಡೆತಕ್ಕೆ ರೈಲು ಸಂಚಾರ ತೀವ್ರವಾಗಿ ಹದಗೆಟ್ಟಿದೆ. ಇಂದು ಕೂಡ ಸೆಂಟ್ರಲ್ ಮತ್ತು ವೆಸ್ಟರ್ನ್ ರೈಲ್ವೆ ವ್ಯಾಪ್ತಿಯಲ್ಲಿ 200ಕ್ಕೂ ಹೆಚ್ಚು ರೈಲು ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ. ಕೂಡ 43 ರೈಲುಗಳ ಸಂಚಾರವನ್ನ ರದ್ದುಗೊಳಿಸಲಾಗಿದೆ. ಇದರಲ್ಲಿ ಸೆಂಟ್ರಲ್ ರೈಲ್ವೆಯ 27 ಮತ್ತು ವೆಸ್ಟರ್ನ್ ರೈಲ್ವೆಯ 16 ರೈಲುಗಳು ಸೇರಿವೆ.

ಲೋನಾವಾಲಾ-ಕರ್ಜತ್ ಘಾಟ್ ವಿಭಾಗದಲ್ಲಿ ಭೂಕುಸಿತ ಸಂಭವಿಸಿರುವುದರಿಂದ ರೈಲು ಸಂಚಾರಕ್ಕೆ ಮತ್ತಷ್ಟು ತೊಂದರೆಯಾಗಿದೆ. ಪಾಲ್ಘರ್ ಜಿಲ್ಲೆಯಲ್ಲಿ 300 ಮಿಲಿ ಮೀಟರ್‌ಗೂ ಹೆಚ್ಚು ಮಳೆಯಾಗಿದ್ದು, ನಲಸೋಪಾರಾ ಭಾಗದಲ್ಲಿ ಭಾರಿ ಜಲಾವೃತ ಉಂಟಾಗಿದೆ. ಇದರ ಪರಿಣಾಮವಾಗಿ ವಸಾಯಿ ಮತ್ತು ವಿರಾರ್ ನಡುವಿನ ಉಪನಗರ ರೈಲು ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಇದನ್ನೂ ಓದಿ : ಕಲಬುರಗಿಯ ಶರಣಬಸವೇಶ್ವರ ದೇವಸ್ಥಾನಕ್ಕೆ ಸಿಎಂ ಡಿಕೆ ಶಿವಕುಮಾರ್ ಭೇಟಿ..!

Related posts

ಮೆಟಲ್ ಚೈನ್ ಮೆಟ್ರೋ ಡೋರ್ ಗೈಡ್‌ವೇಯಲ್ಲಿ ಸಿಲುಕಿದ್ದರಿಂದ ಬಾಗಿಲು ಮುಚ್ಚಲಿಲ್ಲ: ಮೆಟ್ರೋ ಸ್ಪಷ್ಟನೆ..!

Kalpana Editor

ಗುಬ್ಬಿ, ಕುಣಿಗಲ್ ಬರಪೀಡಿತ ಪ್ರದೇಶಕ್ಕೆ ಡಿಸಿಎಂ ಪರಮೇಶ್ವರ್ ಭೇಟಿ..!

kknewskannada1987@gmail.com

ಸಾರಿಗೆ ನೌಕರರಿಗೆ ಸಿಹಿ ಸುದ್ದಿ – ವೇತನ ಹೆಚ್ಚಳ ಮಾಡಿದ ರಾಜ್ಯ ಸರ್ಕಾರ..!

Kalpana Editor