28.2 C
ಬೆಂಗಳೂರು
July 11, 2026
kranthikidi.com
ಕ್ರೈಂತಾಜಾಸುದ್ದಿರಾಜ್ಯ

ಶಾಲಾ ವಾಹನಕ್ಕೆ ಸಿಲುಕಿ 4 ವರ್ಷದ ಬಾಲಕಿ ಸಾವು..!

ನೆಲಮಂಗಲ : ಶಾಲಾ ವಾಹನಕ್ಕೆ ಸಿಲುಕಿ 4 ವರ್ಷದ ಬಾಲಕಿ ದಾರುಣವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ದಾಸನಪುರ ಬಳಿ ನಡೆದಿದೆ. ತನುಶಾ ಮೃತ ದುರ್ದೈವಿ. ವಾಹನ ರಿವರ್ಸ್​​ ತೆಗೆದುಕೊಳ್ಳುವಾಗ ಅವಘಡ ನಡೆದಿದ್ದು, ಬಾಲಕಿ ಬಸ್​ನ ಮುಂಭಾಗದ ಚಕ್ರಕ್ಕೆ ಸಿಲುಕಿ ದುರ್ಮರಣ ಹೊಂದಿದ್ದಾಳೆ. ಚಾಲಕನ ನಿರ್ಲಕ್ಷ್ಯವೇ ಘಟನೆಗೆ ಕಾರಣ ಎಂಬ ಆರೋಪ ಕೇಳಿಬಂದಿದೆ.

ತನುಶಾ, ತುಮಕೂರಿನ ಹೆಬ್ಬೂರು ನಿವಾಸಿಗಳಾಗಿರುವ ಕಿಶೋರ್ ಮತ್ತು ಮಧುಸ್ಮಿತಾ ದಂಪತಿಯ ಎರಡನೇ ಮಗು ಎನ್ನಲಾಗಿದೆ. ಶಾಂತಿನಗರದ ಆರ್​​ಟಿಒದಲ್ಲಿ ಕೆಲಸ ಮಾಡುತ್ತಿದ್ದ ಕಿಶೋರ್, ಮಧ್ಯಾಹ್ನ ಈಕೆಯನ್ನು ಶಾಲೆಯಿಂದ ಕರೆತಂದಿದ್ದರು. ಆ ಬಳಿಕ ಸಂಜೆ ಮೊದಲ ಮಗಳು ಹನಿಕಾ ಕೂಡ ಶಾಲೆಯಿಂದ ಬರಲಿರುವ ಕಾರಣ ಆಕೆಯನ್ನು ಕರೆತರಲೆಂದು ತಾಯಿ ಮಧುಸ್ಮಿತಾ ತೆರಳಿದ್ದರು. ಈ ವೇಳೆ ತನುಶಾಳನ್ನು ಸಹ ಅವರು ಕರೆದೊಯ್ದಿದ್ದರು. ಆದರೆ ದುರ್ದೈವ ಎಂಬಂತೆ ಹನಿಕಾಳನ್ನ ಕರೆತರುವಷ್ಟರಲ್ಲಿ ಅಲ್ಲೇ ಆಡಲು ಶುರುಮಾಡಿದ್ದ ಬಾಲಕಿಯ ಮೇಲೆ ಶಾಲಾ ಬಸ್​​ ಹರಿದಿದೆ. ಪರಿಣಾಮ ತಾಯಿಯ ಕಣ್ಣೆದುರೇ ತನುಶಾ ಉಸಿರು ಚೆಲ್ಲಿದ್ದಾಳೆ.

ಇನ್ನು ಅಪಘಾತದ ಬೆನ್ನಲ್ಲೇ ಶಾಲಾ ಬಸ್​​ನ ಚಾಲಕ ಸ್ಥಳದಿಂದ ಎಸ್ಕೇಪ್​​ ಆಗಿದ್ದು, ಮೃತ ಬಾಲಕಿಯ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಚಿಕ್ಕಬಾಣಾವರ ಸಂಚಾರಿ ಪೊಲೀಸರೂ ಸ್ಥಳಕ್ಕೆ ಭೇಟಿ ಕೊಟ್ಟಿದ್ದು, ಬಾಲಕಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಕಾಗಿ ನೆಲಮಂಗಲದ ಶವಾಗಾರಕ್ಕೆ ರವಾನಿಸಲಾಗಿದೆ. ಬಾಲಕಿ ಬಲಿ ಪಡೆದ ವಾಹನ ಕಿಡ್ಸ್​ ಇಂಟರ್​ನ್ಯಾಷನಲ್​ ಶಾಲೆಗೆ ಸೇರಿದ್ದು ಎಂಬುದು ಗೊತ್ತಾಗಿದೆ. ಇದನ್ನೂ ಓದಿ : ಖಮೇನಿ ಅಂತ್ಯಕ್ರಿಯೆಗೂ ಮುನ್ನವೇ ಇರಾನ್‌ ಮೇಲೆ ವಿನಾಶಕಾರಿ ದಾಳಿ; ಇನ್ನೂ ಪರಿಸ್ಥಿತಿ ಕೆಟ್ಟದಾಗಿರಲಿದೆ – ಟ್ರಂಪ್‌

Related posts

“ಗ್ಯಾರಂಟಿ ಮೋಸ” – ಗೃಹಜ್ಯೋತಿ ಮರು ಪರಿಶೀಲನೆಗೆ ಜೆಡಿಎಸ್ ಕಿಡಿ..!

Kalpana Editor

ಸತತ ಸೋಲಿನಿಂದ ಕಂಗೆಟ್ಟ ಪೂಜಾ ಹೆಗ್ಡೆಗೆ ಬಾಲಿವುಡ್​​ನಲ್ಲಿ ಮೂಡಿದೆ ಆಶಾಕಿರಣ

Kalpana Editor

ಪ್ರಧಾನಿ ಮೋದಿ ಭೇಟಿ ಮಾಡಿ ಕರ್ನಾಟಕದ ಬೇಡಿಕೆಗಳ ಪಟ್ಟಿ ಸಲ್ಲಿಸಿದ ಸಿಎಂ ಡಿಕೆಶಿ ಸಿಎಂ

Kalpana Editor