July 22, 2026
kranthikidi.com
ತಾಜಾಸುದ್ದಿರಾಜ್ಯ

ಕೋವಿಡ್‌ನಿಂದ ಎರಡು ಸಾವು; ಗಡಿಯಲ್ಲಿ ಹೈ ಅಲರ್ಟ್ – ಆರೋಗ್ಯ ಇಲಾಖೆಯಿಂದ ಕಟ್ಟುನಿಟ್ಟಿನ ತಪಾಸಣೆ…!

ತುಮಕೂರು : ನೆರೆಯ ಆಂಧ್ರಪ್ರದೇಶದ ವೈಎಸ್ಆರ್ ಕಡಪ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಇಬ್ಬರು ಮೃತಪಟ್ಟಿರುವ ಹಿನ್ನೆಲೆಯಲ್ಲಿ ಗಡಿಭಾಗವಾದ ಪಾವಗಡ ತಾಲೂಕಿನಲ್ಲಿ ಜಿಲ್ಲಾಡಳಿತ ಹೈ ಅಲರ್ಟ್ ಘೋಷಿಸಿದೆ.

ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಅವರ ನಿರ್ದೇಶನದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಆಶಾ ಕಾರ್ಯಕರ್ತರೊಂದಿಗೆ ರಾಜವಂತಿ, ನಾಗಲಮಡಿಕೆ ಹಾಗೂ ಕೊಡಮಡುಗು ಗಡಿ ಭಾಗಗಳಲ್ಲಿ ತೀವ್ರ ನಿಗಾ ವಹಿಸಿದ್ದಾರೆ. ಆಂಧ್ರಪ್ರದೇಶದಿಂದ ಆಗಮಿಸುವ ಪ್ರಯಾಣಿಕರ ಆರೋಗ್ಯವನ್ನು ಥರ್ಮಲ್ ಸ್ಕ್ಯಾನರ್ ಮೂಲಕ ಪರಿಶೀಲಿಸಿ, ಕೋವಿಡ್ ಸೋಂಕಿನ ಲಕ್ಷಣಗಳ ಬಗ್ಗೆ ತಪಾಸಣೆ ನಡೆಸಲಾಗುತ್ತಿದೆ.

ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಸೋಂಕು ಹರಡದಂತೆ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸಾರ್ವಜನಿಕರು ಆತಂಕಪಡದೆ ಮುನ್ನೆಚ್ಚರಿಕೆ ಪಾಲಿಸುವಂತೆ ಆರೋಗ್ಯ ಇಲಾಖೆ ಮನವಿ ಮಾಡಿದೆ. ಇದನ್ನೂ ಓದಿ : ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ; ಸರ್ಕಾರದ ವಿರುದ್ಧ ಆಕ್ರೋಶ – ಬಸವರಾಜ ಬೊಮ್ಮಾಯಿ

Related posts

ಪಿಡಿಓ, ಕಾರ್ಯದರ್ಶಿ, ಲೆಕ್ಕ ಸಹಾಯಕರ ಕೌನ್ಸೆಲಿಂಗ್‌ಗೆ ಈಶ್ವರ ಖಂಡ್ರೆ ಚಾಲನೆ..!

Kalpana Editor

ಜಪ್ತಿ ಮಾಡಿದ್ದ, ಮದ್ಯದ ಲೆಕ್ಕದಲ್ಲಿ ಭಾರೀ ವ್ಯತ್ಯಾಸ; ಅಬಕಾರಿ ಅಧಿಕಾರಿಗಳ ಮೇಲೆ ʻಲೋಕಾʼ ದಾಳಿ..!

Kalpana Editor

ಹೊಳೆನರಸೀಪುರದಲ್ಲಿ ಇಂದು ಚೆನ್ನಮ್ಮ ಅಂತ್ಯಕ್ರಿಯೆ – ಬೆಟ್ಟದ ರಂಗನಾಥಸ್ವಾಮಿ ತಪ್ಪಲಿನಲ್ಲಿ ವಿಧಿವಿಧಾನ ಪ್ರಕಾರ..!

Kalpana Editor