July 22, 2026
kranthikidi.com
ತಾಜಾಸುದ್ದಿದೇಶ

ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ – ವಾಂಗ್ಚುಕ್‌ ಆರೋಗ್ಯ ಕ್ಷೀಣ; ಆಸ್ಪತ್ರೆಗೆ ಶಿಫ್ಟ್‌..!

ನವದೆಹಲಿ : ಜಂತರ್ ಮಂತರ್‌ನಲ್ಲಿ 20 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಅವರನ್ನು ಆಸ್ಪತ್ರೆಗೆ ಶಿಫ್ಟ್‌ ಮಾಡಲಾಗಿದೆ. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ, ಕಾಕ್ರೋಚ್‌ ಜನತಾ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ವಾಂಗ್ಚುಕ್‌ ಅವರು ಕಳೆದ 20 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.

ಸೋನಮ್ ವಾಂಗ್ಚುಕ್ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿರುವುದರಿಂದ ಹೈಕೋರ್ಟ್ ಆದೇಶಗಳಿಗೆ ಅನುಸಾರವಾಗಿ ಮತ್ತು ತಜ್ಞರ ವೈದ್ಯಕೀಯ ಸಲಹೆಯ ಮೇರೆಗೆ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಅವರನ್ನು ಅಗತ್ಯ ವೈದ್ಯಕೀಯ ಆರೈಕೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸ್ ತಿಳಿಸಿದ್ದಾರೆ. ಪ್ರತಿಭಟನಾಕಾರರು ಜಂತರ್ ಮಂತರ್ ಅನ್ನು ಶಾಂತಿಯುತವಾಗಿ ತೆರವುಗೊಳಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.

ಗೌರವಾನ್ವಿತ ಹೈಕೋರ್ಟ್‌ನ ಆದೇಶಗಳನ್ನು ಪಾಲಿಸುವಾಗ ಪ್ರತಿಭಟನಾಕಾರರು ಅಡಚಣೆ ಉಂಟುಮಾಡಲು ಪ್ರಯತ್ನಿಸಿದರು. ಇದರಿಂದ ಸ್ವಲ್ಪ ಗದ್ದಲ ಉಂಟಾಯಿತು. ಆದಾಗ್ಯೂ, ಪೊಲೀಸರು ಸಂಯಮ ವಹಿಸಿ ಸುರಕ್ಷಿತವಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ.

ವಾಂಗ್ಚುಕ್‌ ಅವರ ದೈನಂದಿನ ವೈದ್ಯಕೀಯ ಆರೋಗ್ಯ ತಪಾಸಣೆ ನಡೆಸುವಂತೆ ನ್ಯಾಯಾಲಯ ಎರಡು ದಿನಗಳ ಹಿಂದೆ ಅಧಿಕಾರಿಗಳಿಗೆ ನಿರ್ದೇಶನ ನೀಡಿತ್ತು. ಶುಕ್ರವಾರ, ವಾಂಗ್ಚುಕ್ ಅವರನ್ನು ಪರೀಕ್ಷಿಸಿದ ವೈದ್ಯರು, ಅವರ ಅಂಗಾಂಗಗಳು ವಿಫಲಗೊಳ್ಳುತ್ತಿವೆ ಎಂದು ಕಳವಳ ವ್ಯಕ್ತಪಡಿಸಿದ್ದರು. ಇದನ್ನೂ ಓದಿ : ಸಚಿವ ಸಂಪುಟ ವಿಸ್ತರಣೆ; ವರಿಷ್ಠರಿಂದ ಸೂಕ್ತ ಮಾರ್ಗದರ್ಶನ ಪಡೆದು ಸಿದ್ಧತೆ – ಸಿಎಂ ಡಿಕೆ ಶಿವಕುಮಾರ್

Related posts

ಥೈರಾಯ್ಡ್ ಸಮಸ್ಯೆ ತಡೆಗಟ್ಟಲು ಪಾಲಿಸಬೇಕಾದ ಆರೋಗ್ಯಕರ ಅಭ್ಯಾಸಗಳು..!

Kalpana Editor

ಬೈಕ್ ತಡೆದಿದ್ದಕ್ಕೆ ಪೊಲೀಸ್ ಕಾನ್‌ಸ್ಟೆಬಲ್ ತಲೆಗೆ ಹೊಡೆದು ಪರಾರಿ..!

Kalpana Editor

ತೇಜಸ್ವಿ ಸೂರ್ಯ ದೂರಿನ ಬೆನ್ನಲ್ಲೇ BMRCLಗೆ ಕೇಂದ್ರದಿಂದ ತನಿಖೆಗೆ ಆದೇಶ..!

Kalpana Editor