29 C
ಬೆಂಗಳೂರು
September 20, 2026
kranthikidi.com
ತಾಜಾಸುದ್ದಿದೇಶ

ಕಾಕ್ರೋಚ್‌ಗಳ ಮೇಲೆ ಪೊಲೀಸರ ಲಾಠಿಚಾರ್ಜ್‌ – ಕೆಲ ಭಾಗಗಳಲ್ಲಿ ಇಂಟರ್‌ನೆಟ್‌ ಸ್ಥಗಿತ..!

ನವದೆಹಲಿ : ಸಂಸತ್ ಮುತ್ತಿಗೆಗೆ ಯತ್ನಿಸಿದ ಕಾಕ್ರೋಚ್ ಜನತಾ ಪಾರ್ಟಿ ಸದಸ್ಯರ ಮೇಲೆ ಪೊಲೀಸರು ಲಾಠಿಚಾರ್ಜ್‌ ಮಾಡಿದ್ದಾರೆ. ಲಾಠಿಚಾರ್ಜ್‌ ಬೆನ್ನಲ್ಲೇ ದೆಹಲಿಯ ಕೆಲವು ಭಾಗಗಳಲ್ಲಿ ಮೊಬೈಲ್ ಇಂಟರ್ನೆಟ್ ಸ್ಥಗಿತಗೊಂಡಿದೆ. ಸಂಸತ್ತಿನ ಮುಂಗಾರು ಅಧಿವೇಶನ ಆರಂಭದ ಮೊದಲ ದಿನವಾದ ಇಂದು (ಜುಲೈ 20), ನವದೆಹಲಿಯ ಜಂತರ್ ಮಂತರ್‌ನಿಂದ ಸಂಸತ್ ಭವನದತ್ತ ‘ಚಲೋ ಸಂಸತ್’ ಮೆರವಣಿಗೆಗೆ ಸಿಜೆಪಿ ಕರೆ ನೀಡಿತ್ತು.

ಕರೆಯ ಬೆನ್ನಲ್ಲೇ ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ಸಿಜೆಪಿ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ಜಂತರ್ ಮಂತರ್‌ನಲ್ಲಿ ಜಮಾಯಿ ಸಂಸತ್ತಿನತ್ತ ತೆರಳಲು ಮುಂದಾದರು. ಈ ವೇಳೆ ಪೊಲೀಸರು ಪ್ರತಿಭಟನಕಾರರನ್ನು ತಡೆದರು. ಬ್ಯಾರಿಕೇಡ್‌ಗಳನ್ನು ದಾಟಿ ಮುನ್ನಗ್ಗುತ್ತಿದ್ದಂತೆ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಪ್ರಯೋಗ ಮಾಡಿದ್ದಾರೆ.

ಮುಂಜಾಗ್ರತಾ ಕ್ರಮವಾಗಿ ದೆಹಲಿ ಪೊಲೀಸರು ಹಾಗೂ ರ‍್ಯಾಪಿಡ್ ಆಕ್ಷನ್ ಫೋರ್ಸ್ ಸಿಬ್ಬಂದಿ ಜಂತರ್ ಮಂತರ್ ರಸ್ತೆಯ ಸುತ್ತಲೂ ಬಿಗಿ ಭದ್ರತೆ ಒದಗಿಸಿದ್ದರು. ಪ್ರತಿಭಟನಾಕಾರರು ಪೊಲೀಸ್ ಕಾವಲನ್ನು ಮೀರಿ ಮುನ್ನುಗ್ಗಿದಾಗ, ಪರಿಸ್ಥಿತಿ ಹದ್ದುಬಸ್ತಿಗೆ ತರಲು ಪೊಲೀಸರು ಹಗುರ ಲಾಠಿಚಾರ್ಜ್ ನಡೆಸಿ ಹಲವು ಕಾರ್ಯಕರ್ತರನ್ನು ವಶಕ್ಕೆ ಪಡೆದರು.

ಸಂಸತ್ತಿನ ಅಧಿವೇಶನ ಆರಂಭವಾಗುತ್ತಿರುವುದರಿಂದ ದೆಹಲಿ ನಗರದಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ’ಯ ಸೆಕ್ಷನ್ 163 (ಹಳೆಯ 144ನೇ ವಿಧಿ) ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಈ ಮೆರವಣಿಗೆಗೆ ಯಾವುದೇ ಅಧಿಕೃತ ಅನುಮತಿ ನೀಡಿರಲಿಲ್ಲ ಮತ್ತು ಕಾನೂನು ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಮುಂಚಿತವಾಗಿಯೇ ಎಚ್ಚರಿಸಿದ್ದರು. ಇದನ್ನೂ ಓದಿ : ಇಂದಿನಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ; ಎಂಟು ಮಸೂದೆಗಳ ಮಂಡನೆ ಸಾಧ್ಯತೆ..!

Related posts

ಕ್ಯಾಲ್ಸಿಯಂ ಕೊರತೆಯಿಂದ ಯಾವ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು..!

Kalpana Editor

ಪೊಲೀಸ್ ಕಾನ್‌ಸ್ಟೇಬಲ್‌ ಪರೀಕ್ಷೆ ಗೊಂದಲ; ಪ್ರಿಯಾಂಕ್‌ ರಾಜೀನಾಮೆಗೆ ಸಿಟಿ ರವಿ ಆಗ್ರಹ..!

kknewskannada1987@gmail.com

ದಲಿತರ ಭೂಮಿ ಅಕ್ರಮ ಒತ್ತುವರಿ ಆರೋಪ; ಆರ್ಟ್ ಆಫ್ ಲೀವಿಂಗ್ ವಿರುದ್ಧ ತನಿಖೆಗೆ ಆದೇಶ…!

Kalpana Editor