July 22, 2026
kranthikidi.com
ತಾಜಾಸುದ್ದಿರಾಜ್ಯ

ಕೆಪಿಎಸ್‌ಸಿ ನೇಮಕಾತಿ ಅಕ್ರಮ; ರಾಜ್ಯ ಸರ್ಕಾರ, ಸಿಬಿಐಗೆ ಕರ್ನಾಟಕ ಹೈಕೋರ್ಟ್ ನೋಟಿಸ್..!

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡಿರುವ ಕರ್ನಾಟಕ ಹೈಕೋರ್ಟ್, ರಾಜ್ಯ ಸರ್ಕಾರ ಹಾಗೂ ಸಿಬಿಐಗೆ ನೆನ್ನೆ (ಮಂಗಳವಾರ) ನೋಟಿಸ್ ಜಾರಿ ಮಾಡಿದೆ. ಅಮಾನತುಗೊಂಡ ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ್ ಅವರ ಪುತ್ರಿಯರ ಆಯ್ಕೆ ಸೇರಿದಂತೆ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಲಾಗಿದೆ.

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಅಖಿಲ ಕರ್ನಾಟಕ ವಿದ್ಯಾರ್ಥಿ ಸಂಘದ ಪರವಾಗಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ, ಜುಲೈ 29ರೊಳಗೆ ರಾಜ್ಯ ಸರ್ಕಾರ ತನ್ನ ನಿಲುವು ತಿಳಿಸುವಂತೆ ಸೂಚಿಸಿದ್ದಾರೆ. ಈ ನಡುವೆ ಸರ್ಕಾರ ವಿಶೇಷ ತನಿಖಾ ತಂಡ ರಚಿಸಿ ಪ್ರಕರಣವನ್ನು ವರ್ಗಾಯಿಸಲು ಮುಂದಾದರೆ, ಅರ್ಜಿದಾರರು ಮತ್ತೆ ನ್ಯಾಯಾಲಯದ ಮೊರೆ ಹೋಗಲು ಅವಕಾಶವಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಜುಲೈ 3ರಂದು ಸಲ್ಲಿಸಿದ್ದ ದೂರಿನ ಆಧಾರದಲ್ಲಿ ವಿಧಾನದೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದರೂ, ಅದು ಕೇವಲ ಮೇಲ್ನೋಟದ ಕ್ರಮವಾಗಿದೆ. ಮೂಲ ಆರೋಪಗಳ ಬಗ್ಗೆ ಸಮಗ್ರ ತನಿಖೆ ನಡೆದಿಲ್ಲ ಎಂದು ಅರ್ಜಿದಾರರ ಪರ ವಕೀಲರು ವಾದಿಸಿದರು. ಸಾರ್ವಜನಿಕರ ಆಕ್ರೋಶ ತಣಿಸಲು ಸರ್ಕಾರ ಎಸ್‌ಐಟಿ ರಚಿಸುವ ಸಾಧ್ಯತೆಯೂ ಇದೆ ಎಂದು ಅವರು ನ್ಯಾಯಾಲಯದ ಗಮನಕ್ಕೆ ತಂದರು.

ಕೆಪಿಎಸ್‌ಸಿ ಅಧ್ಯಕ್ಷರಾಗಿದ್ದ, ಶಿವಶಂಕರಪ್ಪ ಸಾಹುಕಾರ್ ಅವರು ನೇಮಕಾತಿ ಪ್ರಕ್ರಿಯೆಯಲ್ಲಿ ಹಿತಾಸಕ್ತಿ ಸಂಘರ್ಷ ಉಂಟುಮಾಡುವ ರೀತಿಯಲ್ಲಿ ವರ್ತಿಸಿ, ತಮ್ಮ ಇಬ್ಬರು ಪುತ್ರಿಯರ ಆಯ್ಕೆಗೆ ಅವಕಾಶ ಮಾಡಿಕೊಟ್ಟಿದ್ದಾರೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ. ಅಲ್ಲದೆ, 3ಬಿ ಮೀಸಲಾತಿ ಪಡೆಯಲು ಅಗತ್ಯವಾಗಿರುವ ಆದಾಯ ಪ್ರಮಾಣಪತ್ರದಲ್ಲಿ ಅವರ ವಾರ್ಷಿಕ ಆದಾಯವನ್ನು ಕೇವಲ 40 ಸಾವಿರ ರೂಪಾಯಿ ಎಂದು ತೋರಿಸಲಾಗಿದೆ ಎಂಬ ಗಂಭೀರ ಆರೋಪವನ್ನೂ ಉಲ್ಲೇಖಿಸಲಾಗಿದೆ. ಪ್ರಕರಣದ ಮುಂದಿನ ವಿಚಾರಣೆ ಜುಲೈ 29ಕ್ಕೆ ನಿಗದಿಯಾಗಿದೆ. ಇದನ್ನೂ ಓದಿ : ಹೈಕಮಾಂಡ್‌ ಮುಂದೆ ಡಿಸಿಎಂ ಪ್ರಸ್ತಾಪ; ಸಂಪುಟ ವಿಸ್ತರಣೆ ಹೊಸ್ತಿಲಲ್ಲಿ ಡಿಕೆಶಿ ಮಾಸ್ಟರ್‌ಸ್ಟ್ರೋಕ್..!

Related posts

ಮನೆಯಲ್ಲಿ ಗೆಳೆಯ ಆತ್ಮಹತ್ಯೆ; ವಿಚಾರ ಪೊಲೀಸರಿಗೆ ತಿಳಿಸಿದ್ದೇ ನಟಿ ಕೃಷಿ ತಾಪಂಡ

Kalpana Editor

ಮಳೆಗೆ ಸೇತುವೆ ಕುಸಿತ; ಚಿಂಚೋಳಿ – ಭಾಲ್ಕಿ ಮಾರ್ಗದಲ್ಲಿ ವಾಹನ ಸಂಚಾರ ಸ್ಥಗಿತ..!

Kalpana Editor

ಮುಂಬೈನಲ್ಲಿ ಮಳೆಯ ರೌದ್ರನರ್ತನ; ಇಂದು 43 ರೈಲು ಸಂಚಾರ ರದ್ದು..!

Kalpana Editor