22.1 C
ಬೆಂಗಳೂರು
September 21, 2026
kranthikidi.com
ತಾಜಾಸುದ್ದಿದೇಶರಾಜ್ಯ

ಕೇಂದ್ರ ಗೃಹ ಸಚಿವ ಅಮಿತ್ ಶಾ ಹುಬ್ಬಳ್ಳಿ ಪ್ರವಾಸ ದಿಢೀರ್ ರದ್ದು..!

ಹುಬ್ಬಳ್ಳಿ : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹುಬ್ಬಳ್ಳಿ ಪ್ರವಾಸ ದಿಢೀರ್ ರದ್ದಾಗಿದೆ. ಜುಲೈ 24ರಂದು ಹುಬ್ಬಳ್ಳಿಗೆ ಆಗಮಿಸಿ, ಜುಲೈ 25ರಂದು ಕೆಎಲ್‌ಇ ಮೆಡಿಕಲ್ ಕಾಲೇಜಿನ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವ ವೇಳಾಪಟ್ಟಿ ನಿಗದಿಯಾಗಿತ್ತು. ಆದರೆ, ದೆಹಲಿಯಲ್ಲಿ ನಡೆದಿರುವ ಮಹತ್ವದ ರಾಜಕೀಯ ಬೆಳವಣಿಗೆಗಳ ಹಿನ್ನೆಲೆ ಈ ಪ್ರವಾಸವನ್ನು ರದ್ದುಪಡಿಸಲಾಗಿದೆ.

ಅಮಿತ್ ಶಾ ಅವರ ಭೇಟಿಗೆ ಸಂಬಂಧಿಸಿದಂತೆ ಭದ್ರತಾ ವ್ಯವಸ್ಥೆ ಪರಿಶೀಲನೆಗಾಗಿ ಈಗಾಗಲೇ ಅವರ ಸಿಬ್ಬಂದಿ ಹುಬ್ಬಳ್ಳಿಗೆ ಆಗಮಿಸಿ ಸಿದ್ಧತೆ ನಡೆಸುತ್ತಿದ್ದರು. ಸದ್ಯ ಪ್ರವಾಸ ರದ್ದಾದ ಹಿನ್ನೆಲೆ ಜುಲೈ 25ರಂದು ನಡೆಯಬೇಕಿದ್ದ ಕೆಎಲ್‌ಇ ಮೆಡಿಕಲ್ ಕಾಲೇಜಿನ ಉದ್ಘಾಟನಾ ಕಾರ್ಯಕ್ರಮವೂ ಮುಂದೂಡಲಾಗಿದೆ. ಪ್ರವಾಸಕ್ಕೆ ಹೊಸ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ : ಕರ್ನಾಟಕ ಗೂಂಡಾಗಳ ರಾಜ್ಯವಾಗಿದೆ; ಗೂಂಡಾ ಮುಖ್ಯಮಂತ್ರಿ ಇಲ್ಲಿದ್ದಾರೆ – ಆರ್.ಅಶೋಕ್‌

Related posts

80ನೇ ಸ್ವಾತಂತ್ರ್ಯ ದಿನಾಚರಣೆ; ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ

kknewskannada1987@gmail.com

ಕುತೂಹಲಕ್ಕೂ ಕಾಂಗ್ರೆಸ್‌ ಹೈಕಮಾಂಡ್‌ ಬ್ರೇಕ್‌; ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಹೆಸರು ಖಚಿತ..!

Kalpana Editor

ಪತಿ ಕಿರುಕುಳಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆಗೆ ಯತ್ನ – ಪಿಎಸ್ಐ ಅರೆಸ್ಟ್‌..!

Kalpana Editor