July 22, 2026
kranthikidi.com
ತಾಜಾಸುದ್ದಿಸಿನಿಮಾ

ಆಸ್ಪತ್ರೆ, ಐಸಿಯು ಪೋಸ್ಟ್ ವೈರಲ್; ಯಾವುದೇ ಆತಂಕ ಬೇಡ – ಬಚ್ಚನ್‌ ಸ್ಪಷ್ಟನೆ..!

ಇತ್ತೀಚೆಗೆ ಆಸ್ಪತ್ರೆ, ಶಸ್ತ್ರಚಿಕಿತ್ಸೆ ಮತ್ತು ಐಸಿಯು ಬಗ್ಗೆ ಬಾಲಿವುಡ್‌ನ ಬಿಗ್‌ ಬಿ ಅಮಿತಾಬ್ ಬಚ್ಚನ್ ಮಾಡಿದ್ದ ಬ್ಲಾಗ್ ಪೋಸ್ಟ್ ಅಭಿಮಾನಿಗಳಲ್ಲಿ ಭಾರೀ ಆತಂಕ ಮೂಡಿಸಿತ್ತು. ಆದರೆ ಇದೀಗ ಸ್ವತಃ ಅಮಿತಾಬ್ ಬಚ್ಚನ್ ಎಲ್ಲ ವದಂತಿಗಳಿಗೆ ತೆರೆ ಎಳೆದು, ʼನಾನು ಚೆನ್ನಾಗಿದ್ದೇನೆ. ನನ್ನ ಪೋಸ್ಟ್‌ನ್ನು ತಪ್ಪಾಗಿ ಅರ್ಥ ಮಾಡಿಕೊಂಡಿದ್ದಾರೆʼ ಎಂದು ಸ್ಪಷ್ಟನೆ ನೀಡಿದ್ದಾರೆ.

ಅಮಿತಾಬ್ ಬಚ್ಚನ್ ತಮ್ಮ ಬ್ಲಾಗ್‌ನಲ್ಲಿ ಆಸ್ಪತ್ರೆ, ಶಸ್ತ್ರಚಿಕಿತ್ಸೆ, ಐಸಿಯು ಹಾಗೂ ಮನೆಗೆ ಬಂದ ಬಳಿಕದ ಚೇತರಿಕೆ ಬಗ್ಗೆ ಬರೆದಿದ್ದರು. ಇದನ್ನು ಓದಿದ ಅಭಿಮಾನಿಗಳು ಬಿಗ್ ಬಿ ಆರೋಗ್ಯ ಹದಗೆಟ್ಟಿದೆಯೇ ಎಂದು ಆತಂಕ ವ್ಯಕ್ತಪಡಿಸಿದ್ದರು. ಸೋಶಿಯಲ್ ಮೀಡಿಯಾದಲ್ಲೂ ಇದೇ ವಿಚಾರ ಭಾರೀ ಚರ್ಚೆಗೆ ಕಾರಣವಾಗಿತ್ತು.

ಈ ಬಗ್ಗೆ ಇದೀಗ ಅಮಿತಾಬ್ ಸ್ಪಷ್ಟನೆ ನೀಡಿದ್ದಾರೆ. ‘ನಾನು ಯಾವುದೇ ಶಸ್ತ್ರಚಿಕಿತ್ಸೆಗೆ ಒಳಗಾಗಿಲ್ಲ. ನಾನು ಬ್ಲಾಗ್‌ನಲ್ಲಿ ನನ್ನ ಆರೋಗ್ಯದ ಬಗ್ಗೆ ಬರೆದಿಲ್ಲ. ಶಸ್ತ್ರಚಿಕಿತ್ಸೆಯ ಬಳಿಕ ರೋಗಿಯೊಬ್ಬರು ಎದುರಿಸುವ ಪರಿಸ್ಥಿತಿಯನ್ನು ಉದಾಹರಣೆಯಾಗಿ ಹೇಳಿದ್ದೆ. ಅದನ್ನು ನನ್ನ ಆರೋಗ್ಯಕ್ಕೆ ಸಂಬಂಧಿಸಿದೆ ಎಂದು ಹಲವರು ತಪ್ಪಾಗಿ ಅರ್ಥ ಮಾಡಿಕೊಂಡಿದ್ದಾರೆʼ ಎಂದು ತಿಳಿಸಿದ್ದಾರೆ.

ಒಬ್ಬ ಚಾಂಪಿಯನ್ ಸೋಲಿನ ಬಳಿಕ ಮತ್ತೆ ಹೇಗೆ ಎದ್ದು ನಿಲ್ಲುತ್ತಾನೆ ಎಂಬುದನ್ನು ವಿವರಿಸಲು ಈ ಉದಾಹರಣೆ ನೀಡಿದ್ದಾಗಿ ಅವರು ಹೇಳಿದ್ದಾರೆ. ದೇಹಕ್ಕೆ ಗಾಯವಾದರೂ, ಸಮಯದೊಂದಿಗೆ ಅದು ಮತ್ತೆ ಚೇತರಿಸಿಕೊಳ್ಳುತ್ತದೆ. ಅದೇ ರೀತಿ ಜೀವನದಲ್ಲೂ ಕಷ್ಟಗಳನ್ನು ಎದುರಿಸಿ ಮುಂದೆ ಸಾಗಬೇಕು ಎಂಬ ಸಂದೇಶ ನೀಡಲು ಈ ಬರಹ ಬರೆದಿದ್ದಾಗಿ ತಿಳಿಸಿದ್ದಾರೆ. ತಮ್ಮ ಬ್ಲಾಗ್‌ನ ಕೊನೆಯಲ್ಲಿ ʼಜೀವನದಲ್ಲಿ ಕಲಿಯುವುದಕ್ಕೆ ಅಂತ್ಯವೇ ಇಲ್ಲʼ ಎಂದು ಬರೆದಿರುವ ಅಮಿತಾಬ್, ತಮ್ಮ ಆರೋಗ್ಯ ಚೆನ್ನಾಗಿದ್ದು ಯಾವುದೇ ಆತಂಕ ಬೇಡ ಎಂದು ಅಭಿಮಾನಿಗಳಿಗೆ ತಿಳಿಸಿದ್ದಾರೆ. ಇದನ್ನೂ ಓದಿ : ಕೇಂದ್ರ ಗೃಹ ಸಚಿವ ಅಮಿತ್ ಶಾ ಹುಬ್ಬಳ್ಳಿ ಪ್ರವಾಸ ದಿಢೀರ್ ರದ್ದು..!

Related posts

ನೀಟ್ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯತಿ; ಯೋಗಿ ಸರ್ಕಾರದಿಂದ ಆದೇಶ..!

Kalpana Editor

ಕಾಂಗ್ರೆಸ್ ಪಕ್ಷದಲ್ಲಿ ರೇಟ್ ಫಿಕ್ಸ್ – ಸಂಪುಟ ವಿಸ್ತರಣೆಗೆ ಡೇಟ್ ಫಿಕ್ಸ್ ಆಗುತ್ತಿಲ್ಲ; ಬಿ.ವೈ.ವಿಜಯೇಂದ್ರ

Kalpana Editor

ಹಿರಿಯೂರು ಉಪಚುನಾವಣೆಗೆ ಸ್ಪರ್ಧೆ ಮಾಡಲ್ಲ; ಹೆಚ್‌ಡಿಕೆ ಸ್ಪಷ್ಟನೆ..!

Kalpana Editor