kranthikidi.com
ತಾಜಾಸುದ್ದಿರಾಜಕೀಯರಾಜ್ಯ

ಈ ವಾರ ಸಂಪುಟ ವಿಸ್ತರಣೆ ಪೂರ್ಣ; ಬರ, ನೀರಾವರಿ ಯೋಜನೆ ವಿಚಾರದ ಬಗ್ಗೆ ಸಂಸದರಿಗೆ ಮನವರಿಕೆ – ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು : “ಈ ವಾರದೊಳಗೆ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ” ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು. ದೆಹಲಿಗೆ ಪ್ರಯಾಣ ಬೆಳೆಸುವ ಮುನ್ನ ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕೇಳಿದಾಗ, “ಸಚಿವ ಸಂಪುಟ ವಿಸ್ತರಣೆ ವಿಚಾರದಲ್ಲಿ ನೀವು (ಮಾಧ್ಯಮಗಳು) ಆತುರದಲ್ಲಿದ್ದೀರಿ” ಎಂದು ತಿಳಿಸಿದರು.

ದೆಹಲಿಯಲ್ಲಿ ಸಂಸದರ ಜೊತೆಗಿನ ಸಭೆ ಬಗ್ಗೆ ಕೇಳಿದಾಗ, “ಇಂದು ನಮ್ಮ ಸಂಸತ್ ಸದಸ್ಯರನ್ನು ಭೇಟಿ ಮಾಡುತ್ತಿದ್ದು, ಅವರಿಗೆ ರಾಜ್ಯದ ಬರ ಪರಿಸ್ಥಿತಿ, ನೀರಿನ ಪರಿಸ್ಥಿತಿ, ಕಾವೇರಿ, ಮಹದಾಯಿ, ಮೇಕೆದಾಟು, ಕೃಷ್ಣ ಸೇರಿದಂತೆ ಅನೇಕ ನೀರಾವರಿ ಯೋಜನೆಗಳ ಬಗ್ಗೆ ಮನವರಿಕೆ ಮಾಡಿಕೊಡಬೇಕಾಗಿದೆ” ಎಂದರು.

“ನಾನು ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಯಾವ ವಿಚಾರದಲ್ಲಿ ಎಲ್ಲರನ್ನು ಒಟ್ಟಾಗಿ ತೆಗೆದುಕೊಂಡು ಹೋಗಬೇಕು ಎಂದು ಸಂಸದರಿಗೆ ಮನವಿ ಮಾಡಲು ಹೋಗುತ್ತಿದ್ದೇನೆ. ನಂತರ ಬೆಂಗಳೂರಿನಲ್ಲಿ ಸರ್ವಪಕ್ಷ ಸಭೆ ಕರೆಯಲಾಗುವುದು. ರಾಜ್ಯದ ಹಿರಿಯ ನಾಯಕರ ಜೊತೆಗೂ ಪ್ರಮುಖ ವಿಚಾರಗಳನ್ನು ಚರ್ಚಿಸಲಾಗುವುದು” ಎಂದು ತಿಳಿಸಿದರು. ಇದನ್ನೂ ಓದಿ : ಮೇಕೆದಾಟು ಯೋಜನೆಗೆ ತಮಿಳುನಾಡು ಸಮ್ಮತಿ ಅಗತ್ಯವಿಲ್ಲ – ಕೇಂದ್ರ ಸ್ಪಷ್ಟನೆ..!

Related posts

ವಿದ್ಯಾರ್ಥಿಗಳ ನೀಟ್ ಪ್ರತಿಭಟನೆ; ತಡವಾಗಿ ಎಚ್ಚೆತ್ತುಕೊಂಡ ಕೇಂದ್ರ ಸರ್ಕಾರ – ಸಿಎಂ ಡಿ ಕೆ ಶಿವಕುಮಾರ್

Kalpana Editor

ಎಸಿ ಸ್ಫೋಟ; ಭಾರತೀಯ ಸ್ಪರ್ಧಾ ಆಯೋಗದ ಮೊದಲ ಅಧ್ಯಕ್ಷ ಧನೇಂದ್ರ ಕುಮಾರ್ ಸಾವು..!

Kalpana Editor

ಕೋತಿಗಳಿಗೆ ಹೆದರಿ ಬೆಟ್ಟದಿಂದ ಕಾಲುಜಾರಿ ಬಿದ್ದು ಮಹಿಳೆ ಸಾವು..!

Kalpana Editor