August 1, 2026
kranthikidi.com
ತಾಜಾಸುದ್ದಿದೇಶರಾಜ್ಯ

ಮೈಸೂರಿಗೆ ಪ್ರಧಾನಿ ಮೋದಿ ಭೇಟಿ; ವಿವೇಕಾನಂದ ಸ್ಮಾರಕ ಲೋಕಾರ್ಪಣೆ..!

ಮೈಸೂರು\ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಆಗಸ್ಟ್‌ 1ರಂದು ಮೈಸೂರಿಗೆ ಭೇಟಿ ನೀಡಲಿದ್ದು, 45 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಸ್ವಾಮಿ ವಿವೇಕಾನಂದ ಸ್ಮಾರಕ ಹಾಗೂ ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ. ಮೈಸೂರಿನ ದೇವರಾಜ ಮೊಹಲ್ಲಾದ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿರುವ ಈ ಸ್ಮಾರಕದಲ್ಲಿ ಸ್ವಾಮಿ ವಿವೇಕಾನಂದರು ತಂಗಿದ್ದ ಐತಿಹಾಸಿಕ ಹಿನ್ನೆಲೆಯಿದ್ದು, ಅದನ್ನು ಸಾಂಸ್ಕೃತಿಕ ಮತ್ತು ಯುವಜನ ಚಟುವಟಿಕೆಗಳ ಕೇಂದ್ರವಾಗಿ ಅಭಿವೃದ್ಧಿಪಡಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಆಗಮಿಸಿದ ಬಳಿಕ ಮೊದಲು ಸ್ವಾಮಿ ವಿವೇಕಾನಂದ ಸ್ಮಾರಕ ಹಾಗೂ ಸಾಂಸ್ಕೃತಿಕ ಯುವ ಕೇಂದ್ರವನ್ನು ಲೋಕಾರ್ಪಣೆ ಮಾಡಲಿದ್ದಾರೆ. ನಂತರ ರಾಮಕೃಷ್ಣ ಆಶ್ರಮಕ್ಕೆ ತೆರಳಿ ಸ್ವಾಮಿ ವಿವೇಕಾನಂದರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಲಿದ್ದಾರೆ. ರಾಮಕೃಷ್ಣ ಆಶ್ರಮದ ಆಡಿಟೋರಿಯಂನಲ್ಲಿ ವಿಶೇಷ ವೇದಿಕೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ಪ್ರಧಾನಿ ಮೋದಿ ಸುಮಾರು 30 ನಿಮಿಷಗಳ ಕಾಲ ಆಶ್ರಮದಲ್ಲಿ ಇರಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಸುಮಾರು 6 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆಯಿದೆ.

ಈ ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ವಿಶೇಷ ಪಾಸ್ ವಿತರಿಸಲಾಗುತ್ತದೆ. ಪಾಸ್ ಹೊಂದಿರುವವರಿಗೆ ಮಾತ್ರ ಪ್ರವೇಶ ನೀಡಲಾಗುವುದು. ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತನೆಯ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ಪ್ರಧಾನಿ ಮೋದಿಯವರಿಗೆ ಉಡುಗೊರೆಯಾಗಿ ನೀಡಲಾಗುತ್ತದೆ. ಜೊತೆಗೆ ಮೈಸೂರಿನ ಸಾಂಸ್ಕೃತಿಕ ಪರಂಪರೆಯನ್ನು ಪ್ರತಿಬಿಂಬಿಸುವ ವಿಶೇಷ ನೆನಪಿನ ಕಾಣಿಕೆಯನ್ನೂ ಪ್ರಧಾನಿಗೆ ಅರ್ಪಿಸಲಾಗುತ್ತದೆ ಎಂದು ಮೈಸೂರು ರಾಮಕೃಷ್ಣ ಆಶ್ರಮದ ಮುಕ್ತಿದಾನಂದ ಜೀ ಮಹಾರಾಜ್ ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಸಂಸದ ಯದುವೀರ್, ಶಾಸಕ ಹರೀಶ್ ಗೌಡ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವೇದಿಕೆ ಹಂಚಿಕೊಳ್ಳಲಿದ್ದಾರೆ. ವೇದಿಕೆಯಲ್ಲಿ ಕೆಲವೇ ಗಣ್ಯರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಮೇ 10 ರಂದು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನ ಕನಕಪುರ ರಸ್ತೆಯಲ್ಲಿರುವ ಆರ್ಟ್ ಆಫ್ ಲಿವಿಂಗ್ ಆಶ್ರಮಕ್ಕೆ ಭೇಟಿ ನೀಡಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ 45ನೇ ವಾರ್ಷಿಕೋತ್ಸವ, ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರ 70ನೇ ಜನ್ಮೋತ್ಸವ ಹಾಗೂ ನೂತನ ಧ್ಯಾನ ಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಇದೀಗ ಮೈಸೂರಿನಲ್ಲಿ ಸ್ವಾಮಿ ವಿವೇಕಾನಂದ ಸ್ಮಾರಕ ಉದ್ಘಾಟನೆ ಹಾಗೂ ರಾಮಕೃಷ್ಣ ಆಶ್ರಮದ ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕಾಗಿ ಮತ್ತೊಮ್ಮೆ ಕರ್ನಾಟಕ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಇದನ್ನೂ ಓದಿ : ಕಾವೇರಿ ನೀರಿಗಾಗಿ ಮತ್ತೆ CWRC ಮೊರೆ ಹೋದ ತಮಿಳುನಾಡು; ವಿವಾದಕ್ಕೆ ಸಂಬಂಧಿಸಿದಂತೆ ಇಂದು ಸಭೆ..!

Related posts

ಬಿಜೆಪಿಯ ಒಬ್ಬ ಲೀಡರ್ ಮಗನೂ RSS ನಲ್ಲಿ ಪೂರ್ಣ ಪ್ರಚಾರಕನಾಗಿಲ್ಲ – ಪ್ರಿಯಾಂಕ್‌ ಖರ್ಗೆ

Kalpana Editor

ತಮಿಳುನಾಡಿನಲ್ಲಿ ಹುಟ್ಟುವ ಮಕ್ಕಳಿಗೆ 1 ಗ್ರಾಂ ಉಂಗುರ; ಷರತ್ತುಗಳೇನು..?

Kalpana Editor

ಬಿಜೆಪಿಯ ಭ್ರಷ್ಟರು ಬಿಡದಿ ಟೌನ್ಡ್ ಶಿಪ್ ಕುಮಾರಸ್ವಾಮಿ ಕುಟುಂಬದ ಜಮೀನಿನ ರಕ್ಷಿಸಲು ಜೆಡಿಎಸ್ ನೊಂದಿಗೆ ಕೈಜೋಡಿಸಿದ್ದಾರೆ ಎಂಬ ಆರೋಪ..!

Kalpana Editor