August 1, 2026
kranthikidi.com
ತಾಜಾಸುದ್ದಿರಾಜ್ಯ

ಶಾಲೆಗೆ ತೆರಳುವಾಗ ಕಾರು ಡಿಕ್ಕಿ – ಬಾಲಕಿ ಸ್ಥಳದಲ್ಲೇ ಸಾವು..!

ನೆಲಮಂಗಲ : ದೊಡ್ಡಮ್ಮನ ಜೊತೆಗೆ ಶಾಲೆಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಥಾರ್‌ ಕಾರು ಬಾಲಕಿಗೆ ಡಿಕ್ಕಿ ಹೊಡೆದ ಪರಿಣಾಮ ಬಾಲಕಿ ಸ್ಥಳದಲ್ಲೇ ದಾರುಣ ಸಾವಿಗೀಡಾಗಿರುವ ಘಟನೆ ನೆಲಮಂಗಲದಲ್ಲಿ ನಡೆದಿದೆ. ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕಿನ ಬೀರವಾರ ಗ್ರಾಮದ ಬಳಿ ನಡೆದಿದ್ದು 10 ವರ್ಷದ ಲಿಖಿತಾ ಮೃತ ಬಾಲಕಿ ಎಂದು ಗುರುತಿಸಲಾಗಿದೆ.

ಲಿಖಿತ ಸರ್ಕಾರಿ ಶಾಲೆಯಲ್ಲಿ 4ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ಇಂದು ತಾಯಿ ತಿಂಡಿ ಮಾಡಿಸಿ ಕೆಲಸಕ್ಕೆ ತೆರಳಿದ್ದಾರೆ. ನಂತರ ಲಿಖಿತಾ ತನ್ನ ದೊಡ್ಡಮ್ಮನ ಜೊತೆಗೆ ಶಾಲೆಗೆ ತೆರಳುವಾಗ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಲಿಖಿತಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ನೆಲಮಂಗಲ ಮಾರ್ಗದಿಂದ ಕುಣಿಗಲ್ ಕಡೆ ಸಾಗುತ್ತಿದ್ದ ಕಾರು, ಚಾಲಕನ ನಿರ್ಲಕ್ಷ್ಯದಿಂದ ವೇಗವಾಗಿ ಬಂದು ಡಿಕ್ಕಿಯಾಗಿದೆ.

ಈ ಘಟನೆಯಲ್ಲಿ ಲಿಖಿತಾಳ ದೊಡ್ಡಮ್ಮ ಪ್ರಾಣಪಾಯದಿಂದ ಪಾರಾಗಿದ್ದಾರೆ. ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಈ ಬೀರವಾರ ಗ್ರಾಮದ ಬಳಿ ಪದೇ ಪದೇ ಅಪಘಾತ ಪ್ರಕರಣಗಳು ಸಂಭವಿಸಿತಿದ್ದು ಸ್ಕೈವಾಕ್ ನಿರ್ಮಾಣ ಮಾಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಇದನ್ನೂ ಓದಿ : ಇಂದು ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಉತ್ತರ ಕ್ರಿಯಾದಿ ಕಾರ್ಯ – ಜನರಿಗೆ ಅನ್ನಸಂತರ್ಪಣೆ ವ್ಯವಸ್ಥೆ..!

Related posts

ಮಣಿಪಾಲದಲ್ಲಿ ಶಾಲಾ ಬಸ್ ಅಪಘಾತ; ಡಿವೈಡರ್ ಮೇಲೇರಿದ ಬಸ್..!

Kalpana Editor

ವಿದ್ಯಾರ್ಥಿಗಳ ನೀಟ್ ಪ್ರತಿಭಟನೆ; ತಡವಾಗಿ ಎಚ್ಚೆತ್ತುಕೊಂಡ ಕೇಂದ್ರ ಸರ್ಕಾರ – ಸಿಎಂ ಡಿ ಕೆ ಶಿವಕುಮಾರ್

Kalpana Editor

ಸಣ್ಣ ಗಾಯಕ್ಕೆ ಹೊಲಿಗೆ ಹಾಕಲು ಅನಸ್ತೇಶಿಯಾ ನೀಡಿದ ಬೆನ್ನಲ್ಲೇ; ಮಗು ಸಾವು..!

Kalpana Editor