kranthikidi.com
ತಾಜಾಸುದ್ದಿರಾಜ್ಯ

ಮಳೆ ಆರ್ಭಟ ಜೋರು; ಹಾರಂಗಿ ಜಲಾಶಯದಿಂದ ನೀರು ಕಾವೇರಿ ನದಿಗೆ..!

ಮಡಿಕೇರಿ : ಕೊಡಗಿನಲ್ಲಿ ಮತ್ತೆ ಮಳೆಯ ಆರ್ಭಟ ಜೋರಾಗಿದೆ. ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಿದ ಹಿನ್ನೆಲೆ, 5,365 ಕ್ಯೂಸೆಕ್‌ ನೀರನ್ನ ಕಾವೇರಿ ನದಿಗೆ ಹರಿಸಲಾಗಿದೆ. ಜಿಲ್ಲೆಯಾದ್ಯಂತ ಗಾಳಿ-ಮಳೆಯ ತೀವ್ರತೆ ಹೆಚ್ಚಾಗಿದ್ದು, ನದಿ, ತೋರೆ, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ನಿರಂತರ ಮಳೆಯ ಪರಿಣಾಮ ಕಾವೇರಿ ನದಿಯ ನೀರಿನ ಮಟ್ಟವೂ ಏರಿಕೆಯಾಗಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಿದೆ.

ನಿರಂತರ ಮಳೆಯ ಪರಿಣಾಮ ಕಾವೇರಿ ನದಿಯ ನೀರಿನ ಮಟ್ಟ ಏರಿಕೆಯಾಗಿದ್ದು, ನದಿಯ ತಗ್ಗು ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ವಹಿಸಲಾಗಿದೆ. ಹಾರಂಗಿ ಜಲಾನಯನ ಪ್ರದೇಶದಲ್ಲೂ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಲಾಶಯಕ್ಕೆ 4,613 ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ. ಒಳಹರಿವು ಹೆಚ್ಚಿದ ಕಾರಣ 5,365 ಕ್ಯೂಸೆಕ್ಸ್ ನೀರನ್ನ ಕಾವೇರಿ ನದಿಗೆ ಬಿಡುಗಡೆ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಇನ್ನಷ್ಟು ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕೆಂದು ಅಧಿಕಾರಿಗಳು ಮನವಿ ಮಾಡಿದ್ದಾರೆ. ಇದನ್ನೂ ಓದಿ : ಶಿಲ್ಪಿ ಅರುಣ್‌ ಯೋಗಿರಾಜ್‌ರಿಂದ ಪ್ರಧಾನಿಗೆ ಸಿದ್ಧವಾಗಿದೆ; ವಿಶೇಷ ಉಡುಗೊರೆ..!

Related posts

ನಟ ರಾಮ್ ಚರಣ್ ಆಸ್ಪತ್ರೆ ಫೋಟೋ ವೈರಲ್; ವಿಶ್ರಾಂತಿ ಕಡ್ಡಾಯ..!

Kalpana Editor

ಭಗವಂತನ ದಯೆಯಿಂದ ಒಳ್ಳೆ ಕಾಲ; ಕೋಟಿ ಕೋಟಿ ನಮಸ್ಕಾರಗಳು – ಇಕ್ಬಾಲ್ ಹುಸೇನ್

Kalpana Editor

ಸರ್ವಪಕ್ಷ ಸಭೆಯಲ್ಲಿ ತೀರ್ಮಾನ ಆಗೋವರೆಗೆ ತಮಿಳುನಾಡಿಗೆ ನೀರು ಬಿಡಲ್ಲ – ಸಚಿವ ರಾಮಲಿಂಗಾರೆಡ್ಡಿ

Kalpana Editor