22.1 C
ಬೆಂಗಳೂರು
September 21, 2026
kranthikidi.com
ತಾಜಾಸುದ್ದಿದೇಶಸಿನಿಮಾ

ಹಣ ವಂಚನೆ ಪ್ರಕರಣ; ನಟ ಸಲ್ಮಾನ್ ಖಾನ್, ಸಹೋದರಿಗೆ ಕೋರ್ಟ್‌ ಸಮನ್ಸ್ ಜಾರಿ..!

ಚಂಡೀಗಢದ ಮಣಿಮಜ್ರಾದಲ್ಲಿರುವ ಬೀಯಿಂಗ್ ಹ್ಯೂಮನ್ ಆಭರಣ ಶೋರೂಮ್‌ಗೆ ಸಂಬಂಧಿಸಿದ ವಂಚನೆ ದೂರಿಗೆ ಸಂಬಂಧಿಸಿದಂತೆ ನಟ ಸಲ್ಮಾನ್ ಖಾನ್, ಸಹೋದರಿ ಅಲ್ವಿರಾ ಖಾನ್‌ ಅಗ್ನಿಹೋತ್ರಿಗೆ ಚಂಡೀಗಢ ಜಿಲ್ಲಾ ನ್ಯಾಯಾಲಯ ಸಮನ್ಸ್‌ ಜಾರಿ ಮಾಡಿದೆ.

ಜೊತೆಗೆ ಸ್ಟೈಲ್ ಅಂಡ್ ಕಂಟೆಂಟ್ ಜ್ಯುವೆಲ್ಲರಿ ಪ್ರೈವೇಟ್ ಲಿಮಿಟೆಡ್‌ನ ನಿರ್ದೇಶಕರಿಗೂ ಕೋರ್ಟ್‌ ಸಮನ್ಸ್ ನೀಡಿದೆ. ಎಲ್ಲಾ ಆರೋಪಿಗಳು ಅಕ್ಟೋಬರ್ 5 ರಂದು ಹಾಜರಾಗಿ ಆರೋಪಗಳಿಗೆ ಉತ್ತರಗಳನ್ನು ಸಲ್ಲಿಸುವಂತೆ ನ್ಯಾಯಾಲಯ ನಿರ್ದೇಶಿಸಿದೆ. ಚಂಡೀಗಢ ಮೂಲದ ಉದ್ಯಮಿ ಅರುಣ್ ಗುಪ್ತಾ ಅವರು ದೂರು ದಾಖಲಿಸಿದ್ದರು. ಉತ್ತಮ ವ್ಯವಹಾರ ನಿರೀಕ್ಷೆಯ ಸುಳ್ಳು ಭರವಸೆ ನೀಡಿ ಶೋರೂಂನಲ್ಲಿ ಹೂಡಿಕೆ ಮಾಡಲು ನನ್ನನ್ನು ಮನವೊಲಿಸಿದ್ದರು. ತರುವಾಯ ನನಗೆ ಹಲವಾರು ಕೋಟಿ ನಷ್ಟವಾಗಿದೆ ಎಂದು ಆರೋಪಿಸಿದ್ದಾರೆ.

ಬೀಯಿಂಗ್ ಹ್ಯೂಮನ್ ಆಭರಣಗಳನ್ನು ಮಾರಾಟ ಮಾಡಲು ಪರವಾನಗಿ ಪಡೆದ ಸ್ಟೈಲ್ & ಕಂಟೆಂಟ್ ಜ್ಯುವೆಲ್ಲರಿ ಪ್ರೈವೇಟ್ ಲಿಮಿಟೆಡ್ ಕಂಪನಿಯೊಂದಿಗೆ ಒಪ್ಪಂದ ಮಾಡಿಕೊಂಡ ನಂತರ ಗುಪ್ತಾ ಸುಮಾರು 3 ಕೋಟಿ ರೂ.ಗಳನ್ನು ಹೂಡಿಕೆ ಮಾಡಿದ್ದಾರೆ. ಶೋರೂಮ್ ಸ್ಥಾಪಿಸಲು ಸುಮಾರು 1 ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ. ಒಪ್ಪಂದದ ಅಡಿಯಲ್ಲಿ ಅಗತ್ಯವಿರುವ ಎಲ್ಲಾ ಒಪ್ಪಂದದ ಬಾಧ್ಯತೆಗಳನ್ನು ಪೂರೈಸಿದ್ದೇನೆ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ : ನಟ ದರ್ಶನ್​​ಗೆ ಮತ್ತೆ ಶಾಕ್; ಪ್ರದೋಷ್ ಬಳಿಕ ಮತ್ತಿಬ್ಬರು ಮಾಫಿ ಸಾಕ್ಷಿ ಅರ್ಜಿ

Related posts

ರಾಮನಗರದಲ್ಲಿ ಮಾತ್ರ ಹಾಗಾಗಿದೆ, SIR ದುರ್ಬಳಕೆ ಮಾಡಿಕೊಂಡಿಲ್ಲ; ವಿಪಕ್ಷಗಳ ಆರೋಪದಲ್ಲಿ ಹುರುಳಿಲ್ಲ – ಯತೀಂದ್ರ

Kalpana Editor

ಸಾಗಿಸುತ್ತಿದ್ದ ಲಾರಿ ಪಲ್ಟಿ – 15 ಲಕ್ಷ ಮೌಲ್ಯದ ಮದ್ಯ ಮಣ್ಣುಪಾಲು..!

Kalpana Editor

ಶಾಸಕ ಸುಬ್ಬಾರೆಡ್ಡಿಗೆ ತಪ್ಪಿದ ಸಚಿವ ಸ್ಥಾನ – ನಾಳೆ ಬಾಗೇಪಲ್ಲಿ ಸಂಪೂರ್ಣ ಬಂದ್‌ಗೆ ಕರೆ..!

kknewskannada1987@gmail.com