August 25, 2026
kranthikidi.com
ತಾಜಾಸುದ್ದಿರಾಜ್ಯ

ಕಾರಾಗೃಹ ವ್ಯವಸ್ಥೆಯ ಲೋಪದಲ್ಲಿ ಯಾರೇ ಇದ್ದರೂ ಅವರ ಮೇಲೆ ಕ್ರಮ; ಪ್ರಿಯಾಂಕ್ ಖರ್ಗೆ

ಬೆಂಗಳೂರು : ಕಾರಾಗೃಹ ವ್ಯವಸ್ಥೆ ಲೋಪದಲ್ಲಿ ಎಷ್ಟೇ ದೊಡ್ಡ ಅಧಿಕಾರಿಗಳು ಇದ್ದರು ಅವರ ವಿರುದ್ದ ಕ್ರಮ ಆಗುತ್ತದೆ ಅಂತ ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಮೊಬೈಲ್ ಪತ್ತೆ ಆಗಿರೋ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಕಾರಾಗೃಹದಲ್ಲಿ ಆಗಬಾರದ ಚಟುವಟಿಕೆಗಳು ನಡೆದಿದ್ದರೆ ಕ್ರಮ ಆಗಲೇಬೇಕು. ಈ ವಿಚಾರಕ್ಕೆ ಸಂಬಂಧಿಸಿದ ವಿಡಿಯೋ ಸ್ವಲ್ಪ ಹಳೆಯದು. ಯಾರು ಮೊಬೈಲ್ ಕೊಟ್ಟರು, ಹೇಗೆ ಒಳಗೆ ಬಂತು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ವೈಫೈ ಬಳಸಿರುವುದು ಕಂಡುಬಂದಿಲ್ಲ ಎಂದು ಹೇಳಿದರು.

ಪೇದೆಯಿಂದ ಹಿಡಿದು IPS ಅಧಿಕಾರಿಯವರೆಗೆ ಯಾರೇ ತಪ್ಪು ಮಾಡಿದ್ದರೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು. ಕಾರಾಗೃಹದಲ್ಲಿನ ಲೋಪ ಸರಿಪಡಿಸುವ ಉದ್ದೇಶದಿಂದಲೇ ರೇಡ್ ಮಾಡಿಸಲಾಗಿದೆ. ತಾವು ಭೇಟಿ ನೀಡಿದ ವೇಳೆ ಕೆಲವು ಲೋಪಗಳು ಕಂಡುಬಂದಿದ್ದರಿಂದ ಕ್ರಮ ಕೈಗೊಳ್ಳಲಾಗಿದೆ ಎಂದರು. ಇನ್ನು ಈ ಕ್ರಮ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಟಾರ್ಗೆಟ್ ಮಾಡಿರುವುದೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಯಾರ ಮೇಲೂ ವೈಯಕ್ತಿಕ ದಾಳಿ ಮಾಡುತ್ತಿಲ್ಲ ಎಂದರು. ಪ್ರಜ್ವಲ್ ರೇವಣ್ಣ ಅವರಿಗೆ ಈಗಾಗಲೇ ಕೋರ್ಟ್ ಶಿಕ್ಷೆ ವಿಧಿಸಿದ್ದು, ಅದಕ್ಕಾಗಿಯೇ ಅವರು ಜೈಲಿನಲ್ಲಿದ್ದಾರೆ. ಹೀಗಿರುವಾಗ ಅವರನ್ನು ಟಾರ್ಗೆಟ್ ಮಾಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

ಅಧಿಕಾರಿ ಅಲೋಕ್ ಕುಮಾರ್ ವಿರುದ್ಧ ಕ್ರಮದ ಬಗ್ಗೆಯೂ ತನಿಖೆ ನಡೆಯುತ್ತಿದೆ. ಕಾನ್ಸ್‌ಟೇಬಲ್‌ನಿಂದ ಹಿಡಿದು ಯಾರೇ ತಪ್ಪು ಮಾಡಿದ್ದರೂ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸಚಿವರು ಸ್ಪಷ್ಟಪಡಿಸಿದರು. ಜೈಲುಗಳನ್ನು ರೆಸಾರ್ಟ್‌ಗಳಾಗಿ ಪರಿವರ್ತಿಸಲಾಗಿದೆ ಎಂಬ ಬಿಜೆಪಿ ಆರೋಪಕ್ಕೂ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದರು. ಬಿಜೆಪಿ ನಾಯಕರು ಜೈಲಿಗೆ ಹೋಗಿ ನೋಡಿದ್ದಾರಾ ಎಂದು ಪ್ರಶ್ನಿಸಿದ ಅವರು, ಜೈಲು ರೆಸಾರ್ಟಾ ಅಥವಾ ಜೈಲಾ ಎಂಬುದು ಗೊತ್ತಾಗಲು ಬಿಜೆಪಿ ನಾಯಕರನ್ನು ಅಲ್ಲಿಗೆ ಕಳುಹಿಸಬೇಕು ಎಂದು ವ್ಯಂಗ್ಯವಾಡಿದರು.

ಹಿಂದೆ ಅರಗ ಜ್ಞಾನೇಂದ್ರ, ಆರ್. ಅಶೋಕ್ ಹಾಗೂ ಬಸವರಾಜ ಬೊಮ್ಮಾಯಿ ಗೃಹ ಸಚಿವರಾಗಿದ್ದಾಗ ಜೈಲುಗಳು ರೆಸಾರ್ಟ್‌ಗಳಾಗಿದ್ದವೆಯೇ ಎಂದು ಪ್ರಶ್ನಿಸಿದ ಅವರು, ಸುಮ್ಮನೆ ಆರೋಪ ಮಾಡುವುದು ಸರಿಯಲ್ಲ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಈಗಾಗಲೇ ಕೆಲವು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಜೈಲುಗಳಲ್ಲಿನ ಡಿಜಿಟಲ್ ವ್ಯವಸ್ಥೆಯ ಆಡಿಟ್ ನಡೆಸಲು ಸೂಚನೆ ನೀಡಲಾಗಿದೆ. ರಾಜ್ಯದ ಎಲ್ಲಾ ಕಾರಾಗೃಹಗಳಲ್ಲೂ ಆಡಿಟ್ ನಡೆಯಲಿದೆ. ಲೋಪ ಹೇಗೆ ಆಯಿತು, ಯಾರಿಂದ ಆಯಿತು ಎಂಬುದನ್ನು ತನಿಖೆ ಮಾಡಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಿಯಾಂಕ್ ಖರ್ಗೆ ಸ್ಪಷ್ಟ ಸಂದೇಶ ನೀಡಿದ್ದಾರೆ. ಇದನ್ನೂ ಓದಿ : ರೇಣುಕಾ ಸ್ವಾಮಿ ಕೊಲೆ ಪ್ರಕರಣ; ಹೆಡ್​​ಫೋನ್ ಧರಿಸಿ ಬಂದ ಪವಿತ್ರಾ ಗೌಡ, ಜಡ್ಜ್ ತರಾಟೆ..!

Related posts

ಕಲೇಶಪುರ ಹಾಲಿ ಶಾಸಕ ಹಾಗೂ ಮಾಜಿ ಮಾಜಿ ಶಾಸಕ ನಡುವಿನ ವಾಕ್ಸಮರ..!

Kalpana Editor

ಕಲ್ಲು ಕ್ವಾರೆ ದುರಂತ; ಮೃತರ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಲಿ – ಹೆಚ್‌ಡಿಕೆ

Kalpana Editor

ಮೊದಲ ಆಷಾಢ ಶುಕ್ರವಾರ ಹಿನ್ನೆಲೆ; ಚಾಮುಂಡೇಶ್ವರಿಗೆ ವಿಶೇಷ ಪೂಜೆ..!

Kalpana Editor