August 26, 2026
kranthikidi.com
ತಾಜಾಸುದ್ದಿರಾಜಕೀಯರಾಜ್ಯ

ಅಡ್ಡ ಮತದಾನ ಆರೋಪ; ಆಣೆ-ಪ್ರಮಾಣ ಮಾಡಲು ಧರ್ಮಸ್ಥಳಕ್ಕೆ ಹೊರಟ ಶಾಸಕ

ಹಾಸನ : ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಆರೋಪದ ಹಿನ್ನೆಲೆಯಲ್ಲಿ ಬೇಲೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಹೆಚ್‌.ಕೆ.ಸುರೇಶ್‌ ಅವರು ಆಣೆ-ಪ್ರಮಾಣ ಮಾಡಲು ಧರ್ಮಸ್ಥಳಕ್ಕೆ ಪ್ರಯಾಣ ಬೆಳೆಸಿದ್ದಾರೆ.

ಧರ್ಮಸ್ಥಳದ ಶ್ರೀ ಮಂಜುನಾಥಸ್ವಾಮಿ ಮೇಲೆ ಆಣೆ-ಪ್ರಮಾಣ ಮಾಡಲು ನೂರಾರು ಬೆಂಬಲಿಗರು, ಕಾರ್ಯಕರ್ತರ ಜೊತೆ ಶಾಸಕ ಸುರೇಶ್‌ ಹೊರಟಿಸಿದ್ದಾರೆ. ಇದಕ್ಕೂ ಮುನ್ನ ಬೇಲೂರಿನ ಶ್ರೀ ಚನ್ನಕೇಶವಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. ನಂತರ ದೇವಾಲಯದ ಆವರಣದಲ್ಲಿರುವ ಬಲಿ ಕಲ್ಲಿನ ಮೇಲೆ ಆಣೆ ಮಾಡಿದರು.

ನಾನು ಅಡ್ಡ ಮತದಾನ ಮಾಡಿಲ್ಲ ಎಂದು ಶಾಸಕ ಹೆಚ್‌.ಕೆ.ಸುರೇಶ್‌ ಆಣೆ ಮಾಡಿದರು. ನಂತರ ಕರ್ಪೂರ ಹಚ್ಚಿ ಧರ್ಮಸ್ಥಳಕ್ಕೆ ಪ್ರಯಾಣ ಬೆಳೆಸಿದರು. ಆರೋಪ ಬಂದ ಕೂಡಲೇ ಧರ್ಮಸ್ಥಳದ ಮಂಜುನಾಥಸ್ವಾಮಿ ಮೇಲೆ ಆಣೆ ಮಾಡುತ್ತೇನೆ ಎಂದು ಶಾಸಕ ಸುರೇಶ್‌ ಹೇಳಿದ್ದರು. ಮಾತಿನಂತೆ ಇಂದು ಧರ್ಮಸ್ಥಳದಲ್ಲಿ ಆಣೆ-ಪ್ರಮಾಣ ಮಾಡಲಿದ್ದಾರೆ. ಇದನ್ನೂ ಓದಿ : ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ; ಕಾಂಗ್ರೆಸ್ ವಿರುದ್ಧ ಅಶೋಕ್ ವಾಗ್ದಾಳಿ..!

Related posts

ಬಿಡದಿ ಬಿಕ್ಕಟ್ಟು – ಮುಖ್ಯಮಂತ್ರಿ ಜತೆ ಚರ್ಚೆಗೆ ನಾನು ಈಗಲೂ ಸಿದ್ಧ ಎಂದ ಹೆಚ್.ಡಿ.ಕುಮಾರಸ್ವಾಮಿ

Kalpana Editor

‘ಪೆದ್ದಿ’ ಸಿನಿಮಾ ರಿಲೀಸ್​​ಗೆ, ಮೊದಲು ಫ್ಯಾನ್ಸ್​​ಗೆ ಬ್ಯಾಡ್ ನ್ಯೂಸ್..!

Kalpana Editor

ಸ್ವರಲೋಕದ ದಿವ್ಯ ಚೇತನಕ್ಕೆ ಕಣ್ಣೀರಿನ ನಮನ; ಜಾನಕಿ ಅಂತಿಮ ದರ್ಶನಕ್ಕೆ ಹರಿದುಬಂದ ಅಭಿಮಾನಿ ಸಾಗರ

Kalpana Editor