ಬೆಂಗಳೂರು : ದಲಿತರ ಭೂಮಿಯನ್ನು ಅಕ್ರಮವಾಗಿ ಸ್ವಾಧೀನ ಮಾಡಿಕೊಂಡಿರೋ ಆರೋಪದ ಮೇಲೆ ಆರ್ಟ್ ಆಫ್ ಲೀವಿಂಗ್ ಸಂಸ್ಥೆ ವಿರುದ್ಧ ತನಿಖೆಗೆ ಸರ್ಕಾರ SIT ರಚನೆ ಮಾಡಿದೆ. ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರ ನೇತೃತ್ವದಲ್ಲಿ SIT ರಚನೆ ಮಾಡಲಾಗಿದೆ.
ವಿಧಾನಸೌಧದಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಪರಮೇಶ್ವರ್, ರವಿಶಂಕರ್ ಗೂರೂಜಿ ಅವರ ನೇತೃತ್ವದ ಆರ್ಟ್ ಆಫ್ ಲೀವಿಂಗ್ ಸಂಸ್ಥೆ ದಲಿತರಿಗೆ ಸೇರಿದ 150 ಎಕರೆ ಜಾಗ ಅಕ್ರಮವಾಗಿ ಸ್ವಾಧೀನ ಮಾಡಿಕೊಂಡಿದ್ದಾರೆ ಅಂತ ದೂರು ಬಂದಿದೆ.
ದಲಿತ ಸಂಘಟನೆಗಳು ಹಾಗೂ ಸಾರ್ವಜನಿಕರು ದೂರು ಕೊಟ್ಟಿದ್ದರು. ದೂರಿನ ಅನ್ವಯ ಈಗ SIT ರಚನೆ ಮಾಡಲಾಗಿದೆ. ಬೆಂಗಳೂರು ವಿಭಾಗ ಪ್ರಾದೇಶಿಕ ಆಯುಕ್ತರ ನೇತೃತ್ವದಲ್ಲಿ ತನಿಖೆ ನಡೆಯಲಿದ್ದು, ಅಕ್ರಮವಾಗಿದ್ದರೆ ಕ್ರಮ ಆಗುತ್ತದೆ ಅಂತ ತಿಳಿಸಿದರು. ಇದನ್ನೂ ಓದಿ : ಹೆಚ್ಎಸ್ಆರ್ ಲೇಔಟ್ನನಲ್ಲಿ ಎಸ್ಐಆರ್ ವೇಳೆ ಲೋಪ ಆರೋಪ – ತೇಜಸ್ವಿ ಸೂರ್ಯ
