August 25, 2026
kranthikidi.com
ತಾಜಾಸುದ್ದಿರಾಜ್ಯ

ಉತ್ತರ ಕರ್ನಾಟಕದ ಜೀವನಾಡಿ ಆಲಮಟ್ಟಿ ಜಲಾಶಯ ಸಂಪೂರ್ಣ ಭರ್ತಿ

ವಿಜಯಪುರ : ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಉತ್ತಮ ಮಳೆಯಾದ ಹಿನ್ನೆಲೆ ಉತ್ತರ ಕರ್ನಾಟಕದ ಜೀವನದಿ ಕೃಷ್ಣೆಯ ಒಡಲು ತುಂಬಿದ್ದು, ಆಲಮಟ್ಟಿ ಜಲಾಶಯ ಸಂಪೂರ್ಣ ಭರ್ತಿಯಾಗಿದೆ.

ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿಯಲ್ಲಿರುವ ಲಾಲ್‌ಬಹದ್ದೂರ್‌ ಶಾಸ್ತ್ರೀ ಜಲಾಶಯ ಒಟ್ಟು 519.60 ಮೀಟರ್ ನೀರು ಸಂಗ್ರಹಣಾ ಸಾಮರ್ಥ್ಯ ಹೊಂದಿದ್ದು, 519.46 ಮೀ. ನೀರು ಭರ್ತಿಯಾಗಿದೆ. ಕಂಗಾಲಾಗಿದ್ದ ರೈತರ ಮೊಗದಲ್ಲಿ ಇದೀಗ ಮಂದಹಾಸ ಮೂಡಿದೆ. ವಿಜಯಪುರ ಜಿಲ್ಲೆಯಲ್ಲಿ ವರುಣ ಮುನಿಸಿಕೊಂಡಿದ್ದು, ಬರಗಾಲ ಆವಾರಿಸಿದೆ.

ಇಂತಹ ಸಮಯದಲ್ಲಿ ನೀರಿಗಾಗಿ ಹಾಹಾಕಾರ ಎದ್ದಿತ್ತು. ಜೊತೆಗೆ ಜೂನ್ ತಿಂಗಳಲ್ಲಿ ಜಲಾಶಯದಲ್ಲಿ ಕೇವಲ 2 ಟಿಎಂಸಿ ಮಾತ್ರ ನೀರು ಉಳಿದಿತ್ತು. ಇದೇ ಸಮಯದಲ್ಲಿ ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಉತ್ತಮ ಮಳೆಯಾದ ಕಾರಣ ಅಪಾರ ಪ್ರಮಾಣದ ನೀರು ಜಾಲಶಯಕ್ಕೆ ಹರಿದು ಬಂದಿದೆ. ಇದರಿಂದ ಆಲಮಟ್ಟಿ ಜಲಾಶಯ ಇದೀಗ ಸಂಪೂರ್ಣ ಭರ್ತಿಯಾಗಿದೆ. ಇದನ್ನೂ ಓದಿ : ಇಂದಿರಾ ಕ್ಯಾಂಟೀನ್​​ಗಳ ಅಡುಗೆ ಮನೆಯಲ್ಲಿ ಇಲಿ, ಹೆಗ್ಗಣ; ಹೌಹಾರಿದ ಅಧಿಕಾರಿಗಳು

Related posts

ಗಂಡನ ಮನೆಯವರ ಕಿರುಕುಳಕ್ಕೆ ಬೇಸತ್ತು 3 ವರ್ಷದ ಮಗನೊಂದಿಗೆ ತಾಯಿ ಆತ್ಮಹತ್ಯೆ

Kalpana Editor

ರಾಜ್ಯಸಭಾ ಸ್ಥಾನಕ್ಕೆ ಟಿಎಂಸಿ ಸಂಸದೆ ಕೋಯಲ್‌ ಮಲಿಕ್‌ ರಾಜೀನಾಮೆ..!

Kalpana Editor

ರಾಷ್ಟ್ರೀಯ ಹೆದ್ದಾರಿ, ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ..!

Kalpana Editor