August 2, 2026
kranthikidi.com
ತಾಜಾಸುದ್ದಿಸಿನಿಮಾ

‘ಪೆದ್ದಿ’ ಸಿನಿಮಾ ರಿಲೀಸ್​​ಗೆ, ಮೊದಲು ಫ್ಯಾನ್ಸ್​​ಗೆ ಬ್ಯಾಡ್ ನ್ಯೂಸ್..!

ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಅಭಿನಯದ ಬಹುನಿರೀಕ್ಷಿತ ‘ಪೆದ್ದಿ’ ಸಿನಿಮಾ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಜೂನ್ 4 ರಂದು ಈ ಚಿತ್ರ ವಿಶ್ವಾದ್ಯಂತ ಅತ್ಯಂತ ಅದ್ಧೂರಿಯಾಗಿ ತೆರೆಗೆ ಬರಲು ಸಿದ್ಧವಾಗಿದ್ದು, ಚಿತ್ರತಂಡ ಸರಣಿ ಇವೆಂಟ್‌ಗಳು ಹಾಗೂ ಪ್ರೆಸ್ ಮೀಟ್‌ಗಳ ಮೂಲಕ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದೆ. ಆದರೆ, ಇದೇ ಸಂದರ್ಭದಲ್ಲಿ ರಾಮ್ ಚರಣ್ ಅಭಿಮಾನಿಗಳಿಗೆ ಸಣ್ಣದೊಂದು ಬೇಸರದ ಸುದ್ದಿಯೊಂದು ಹೊರಬಿದ್ದಿದೆ.

‘ಪೆದ್ದಿ’ ಚಿತ್ರವನ್ನು ಭಾರತದ ಜೊತೆಜೊತೆಗೆ ಜಪಾನ್‌ನಲ್ಲೂ ಏಕಕಾಲಕ್ಕೆ ತೆರೆಗೆ ತರಲು ಚಿತ್ರತಂಡ ಭರ್ಜರಿ ಯೋಜನೆ ರೂಪಿಸಿತ್ತು. ‘ಆರ್‌ಆರ್‌ಆರ್‌’ ಚಿತ್ರದ ನಂತರ ಜಪಾನ್‌ನಲ್ಲಿ ರಾಮ್ ಚರಣ್‌ಗೆ ದೊಡ್ಡ ಮಟ್ಟದ ಫ್ಯಾನ್ ಬೇಸ್ ಸೃಷ್ಟಿಯಾಗಿರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿತ್ತು. ಆದರೆ, ಕೆಲವು ಅನಿವಾರ್ಯ ಕಾರಣಗಳಿಂದಾಗಿ ಸದ್ಯಕ್ಕೆ ಜಪಾನ್ ರಿಲೀಸ್ ಅನ್ನು ಮುಂದೂಡಲಾಗಿದೆ ಎಂದು ತಿಳಿದುಬಂದಿದೆ.

ಈ ಬೆಳವಣಿಗೆಯಿಂದ ಜಪಾನ್ ದೇಶದ ಅಭಿಮಾನಿಗಳಿಗೆ ನಿರಾಸೆಯಾಗಿದ್ದು, ಹೊಸ ಬಿಡುಗಡೆ ದಿನಾಂಕಕ್ಕಾಗಿ ಕಾಯುತ್ತಿದ್ದಾರೆ. ಇತ್ತ ಭಾರತದ ಅಭಿಮಾನಿಗಳು ಕೂಡ ಬೇಸರ ವ್ಯಕ್ತಪಡಿಸಿದ್ದು, ಒಟ್ಟಿಗೆ ರಿಲೀಸ್ ಆಗಿದ್ದರೆ ಬಾಕ್ಸ್ ಆಫೀಸ್‌ನಲ್ಲಿ ಇನ್ನೂ ದೊಡ್ಡ ದಾಖಲೆ ಬರೆಯಬಹುದಿತ್ತು ಎಂಬ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ.

ಈ ಚಿತ್ರದ ಮತ್ತೊಂದು ದೊಡ್ಡ ವಿಶೇಷತೆ ಎಂದರೆ ಕನ್ನಡದ ಕರುನಾಡ ಚಕ್ರವರ್ತಿ ಡಾ. ಶಿವರಾಜ್‌ಕುಮಾರ್ ಅವರು ಈ ಚಿತ್ರದಲ್ಲಿ ಪ್ರಮುಖ ಪಾತ್ರವೊಂದರಲ್ಲಿ ಅಬ್ಬರಿಸಿದ್ದಾರೆ. ಶಿವಣ್ಣ ಅವರ ಖಡಕ್ ಎಂಟ್ರಿ ಮತ್ತು ರಾಮ್ ಚರಣ್ ಜೊತೆಗಿನ ಸ್ಕ್ರೀನ್ ಶೇರಿಂಗ್ ಈ ಸ್ಪೋರ್ಟ್ಸ್ ಆಕ್ಷನ್ ಡ್ರಾಮಾದ ಮುಖ್ಯ ಹೈಲೈಟ್ ಆಗಿರಲಿದ್ದು, ಕನ್ನಡ ಮತ್ತು ತೆಲುಗು ಎರಡೂ ಚಿತ್ರರಂಗದ ಪ್ರೇಕ್ಷಕರಲ್ಲಿ ಭಾರೀ ಕುತೂಹಲ ಮೂಡಿಸಿದೆ.

ವೃದ್ಧಿ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ವೆಂಕಟ ಸತೀಶ್ ಕಿಲಾರು ಅವರು ಈ ಚಿತ್ರವನ್ನು ಅದ್ಧೂರಿ ಬಜೆಟ್‌ನಲ್ಲಿ ನಿರ್ಮಾಣ ಮಾಡಿದ್ದಾರೆ. ಸೂಪರ್ ಹಿಟ್ ‘ಉಪ್ಪೇನಾ’ ಚಿತ್ರದ ಖ್ಯಾತಿಯ ಬುಚ್ಚಿ ಬಾಬು ಸನಾ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ರಾಮ್ ಚರಣ್‌ಗೆ ಜೋಡಿಯಾಗಿ ಬಾಲಿವುಡ್ ಸುಂದರಿ ಜಾನ್ವಿ ಕಪೂರ್ ನಾಯಕಿಯಾಗಿ ನಟಿಸಿದ್ದಾರೆ. ಇನ್ನುಳಿದಂತೆ ಚಿತ್ರದಲ್ಲಿ ಕನ್ನಡದ ಶಿವರಾಜ್‌ಕುಮಾರ್ ಜೊತೆಗೆ ಜಗಪತಿ ಬಾಬು, ದಿವ್ಯೇಂದು ಶರ್ಮ ಮತ್ತು ಬೊಮನ್ ಇರಾನಿ ಅವರಂತಹ ಘಟಾನುಘಟಿ ಕಲಾವಿದರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಆಸ್ಕರ್ ವಿಜೇತ ಎ.ಆರ್. ರೆಹಮಾನ್ ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿದ್ದಾರೆ.

Related posts

ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ; ಸಿಟಿ ರವಿ ನೇತೃತ್ವದ ಸಮಿತಿಯಿಂದ ಬಿವೈವಿಗೆ ವರದಿ ಸಲ್ಲಿಕೆ..!

Kalpana Editor

ಧರ್ಮೇಂದ್ರ, ಮಮ್ಮುಟ್ಟಿ ಸೇರಿ ಹಲವರಿಗೆ ಇಂದು ಪದ್ಮ ಪ್ರಶಸ್ತಿ ಪ್ರದಾನ..!

Kalpana Editor

ಪ್ರಶ್ನೆ ಪತ್ರಿಕೆ ಸೋರಿಕೆ; ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು: ಸಿಎಂ ಡಿಕೆ ಶಿವಕುಮಾರ್ ಆಗ್ರಹ..!

Kalpana Editor