August 26, 2026
kranthikidi.com
ತಾಜಾಸುದ್ದಿದೇಶ

ಕೆಂಪುಕೋಟೆಗೆ ಬಾಂಬ್ ಬೆದರಿಕೆ; ಸುದೀರ್ಘ ತಪಾಸಣೆ – ಹುಸಿ ಕರೆ ಎಂದು ದೃಢ..!

ನವದೆಹಲಿ : ಐತಿಹಾಸಿಕ ಕೆಂಪುಕೋಟೆಗೆ ಬಾಂಬ್ ಇಟ್ಟು ಸ್ಫೋಟಿಸುವುದಾಗಿ ಅಪರಿಚಿತ ವ್ಯಕ್ತಿಯೊಬ್ಬ ನೀಡಿದ ಬೆದರಿಕೆ ಕರೆ ಭಾರಿ ಆತಂಕ ಸೃಷ್ಟಿಸಿದೆ. ಪೊಲೀಸರು ಹಾಗೂ ಭದ್ರತಾ ಸಂಸ್ಥೆಗಳ ಸುದೀರ್ಘ ತಪಾಸಣೆಯ ಬಳಿಕ ಇದು ಹುಸಿ ಕರೆ ಎಂದು ದೃಢಪಟ್ಟಿದೆ.

ಮುಂಬೈ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿದ ಅಪರಿಚಿತನೊಬ್ಬ, ದೆಹಲಿಯ ಕೆಂಪುಕೋಟೆಯಲ್ಲಿ ಬಾಂಬ್ ಸ್ಫೋಟಗೊಳ್ಳಲಿದೆ ಎಂದಿದ್ದ. ತಕ್ಷಣವೇ ಎಚ್ಚೆತ್ತ ಮುಂಬೈ ಪೊಲೀಸರು ಈ ಮಾಹಿತಿಯನ್ನು ದೆಹಲಿ ಪೊಲೀಸ್ ಕಂಟ್ರೋಲ್ ರೂಂಗೆ ರವಾನಿಸಿದರು. ಮಾಹಿತಿ ಸಿಗುತ್ತಿದ್ದಂತೆಯೇ ಕಾರ್ಯಪ್ರವೃತ್ತರಾದ ದೆಹಲಿ ಪೊಲೀಸರು, ಕೆಂಪುಕೋಟೆ ಆವರಣ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಭದ್ರತೆಯನ್ನು ತೀವ್ರಗೊಳಿಸಿದರು.

ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನದಳದ ಸಹಾಯದಿಂದ ಇಡೀ ಆವರಣವನ್ನು ಜಾಲಾಡಿದ ಭದ್ರತಾ ಸಿಬ್ಬಂದಿ, ಹಲವು ಗಂಟೆಗಳ ಕಾಲ ಸಮಗ್ರ ತಪಾಸಣೆ ನಡೆಸಿದರು. ಪರಿಶೀಲನೆಯಲ್ಲಿ ಯಾವುದೇ ಅನುಮಾನಾಸ್ಪದ ಅಥವಾ ಸ್ಫೋಟಕ ವಸ್ತುಗಳು ಪತ್ತೆಯಾಗದ ಹಿನ್ನೆಲೆ ಇದೊಂದು ಹುಸಿ ಕರೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಬೆದರಿಕೆ ಕರೆ ಮಾಡಿದ ವ್ಯಕ್ತಿಯ ಪತ್ತೆಗಾಗಿ ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ : ತಾಯಿ, ಅಜ್ಜಿ, ಮಾವನನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಮಗ

Related posts

ಚೆನ್ನಮ್ಮ ವಯಸ್ಸು 89; 9 ಅನ್ನೋದು ಗಂಡಾಂತರ – ಬ್ರಹ್ಮಾಂಡ ಗುರೂಜಿ

Kalpana Editor

ಕರಾವಳಿಯಲ್ಲಿ ಭಾರೀ ಮಳೆ – ಗೋಕರ್ಣದ ಮಹಾಬಲೇಶ್ವರ ದೇವಸ್ಥಾನಕ್ಕೆ ನುಗ್ಗಿದ ನೀರು

Kalpana Editor

ಉಪ್ಪಿಗೆ ನಾಯಕಿಯಾದ ಮಾಲಾಶ್ರೀ ಪುತ್ರಿ – ಹೊಸ ಚಿತ್ರಕ್ಕೆ ಅದ್ಧೂರಿ ಚಾಲನೆ..!

kknewskannada1987@gmail.com