ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ಅವರು ಸಿಎಂ ಸಿದ್ದರಾಮಯ್ಯನವರ ಬ್ರೇಕ್ಫಾಸ್ಟ್ ಸಭೆಗೆ ಆಗಮಿಸಿದ್ದಾರೆ. ಸದಾಶಿವನಗರದಿಂದ ಹೊರಟ ಡಿಕೆಶಿ ಕಾವೇರಿ ನಿವಾಸಕ್ಕೆ 9:30ಕ್ಕೆ ಆಗಮಿಸಿದರು. ಡಿಕೆಶಿ ಎದುರೇ ‘5 ವರ್ಷ ಸಿದ್ದರಾಮಯ್ಯ ಸಿಎಂ’ ಘೋಷಣೆ ಕೂಗಿದ ಅಭಿಮಾನಿಗಳು.
ಡಿಸಿಎಂ ಆಗಮನದ ವೇಳೆ ಸಿದ್ದು ಬೆಂಬಲಿಗರ ಸಿದ್ದರಾಮಯ್ಯಗೆ ಜೈಕಾರ ಹಾಕಿದರು. 5 ವರ್ಷ ಸಿದ್ದ ಸಿಎಂ ಎಂದು ಘೋಷಣೆ ಕೂಗಿ ಡಿಕೆಶಿ ವಿರುದ್ಧ ಆಕ್ರೋಶ ಹೊರಹಾಕಿದರು. ಜಮೀರ್ ಅಹಮದ್ ತಮ್ಮ ನಿವಾಸದಿಂದ ನೇರ ಚಾಮರಾಜಪೇಟೆ ಮೈದಾನದ ಕಡೆ ತೆರಳಿದ್ದಾರೆ. ಬಕ್ರೀದ್ ಹಿನ್ನೆಲೆ ಪ್ರಾರ್ಥನೆಗೆ ತೆರಳಿದ ಬಳಿಕ ಬ್ರೇಕ್ ಫಾಸ್ಟ್ ಮೀಟಿಂಗ್ನಲ್ಲಿ ಭಾಗಿಯಾಗಿದ್ರು.
