kranthikidi.com
ತಾಜಾಸುದ್ದಿರಾಜ್ಯ

ಉತ್ತರ ಕರ್ನಾಟಕದಲ್ಲಿ ಮಣ್ಣೆತ್ತಿನ ಅಮವಾಸ್ಯೆ ಸಂಭ್ರಮ; ಮಳೆಗಾಗಿ ವಿಶೇಷ ಪೂಜೆ, ಪ್ರಾರ್ಥನೆ..!

ರಾಯಚೂರು : ಮಣ್ಣೆತ್ತಿನ ಅಮವಾಸ್ಯೆ ಹಿನ್ನೆಲೆ ಮಣ್ಣಿನ ಎತ್ತುಗಳ ವ್ಯಾಪಾರ ಜೋರಾಗಿದ್ದು, ಉತ್ತರ ಕರ್ನಾಟಕ ಭಾಗದ ಗ್ರಾಮೀಣ ಸೊಗಡಿನ ಹಬ್ಬಗಳಲ್ಲಿ ಒಂದಾದ ಮಣ್ಣೆತ್ತಿನ ಅಮವಾಸ್ಯೆಯನ್ನ ರಾಯಚೂರಿನಲ್ಲಿ ಜನರು ಸಂಭ್ರಮದಿಂದ ಆಚರಿಸುತ್ತಿದ್ದಾರೆ.

ಕೃಷಿ ಚಟುವಟಿಕೆಗಳಿಗೆ ಸಹಾಯ ಮಾಡುವ ಎತ್ತುಗಳನ್ನ ಮಣ್ಣಿನಿಂದ ತಯಾರಿಸಿ ದೇವರ ಜಗಲಿಯಲ್ಲಿಟ್ಟು ಪೂಜೆ ಮಾಡುವ ಮೂಲಕ ಗೌರವ ಸಲ್ಲಿಸುತ್ತಾರೆ. ಈ ಬಾರಿ ಮಣ್ಣೆತ್ತಿನ ವ್ಯಾಪಾರ ಜೋರಾಗಿದ್ದು, ಜೋಡೆತ್ತಿನ ಬೆಲೆ ಕೂಡ ಹೆಚ್ಚಾಗಿದೆ. 80 ರೂ.ಯಿಂದ 100 ರೂ.ವರೆಗೆ ಮಣ್ಣಿನ ಜೋಡೆತ್ತುಗಳ ಮಾರಾಟ ನಡೆದಿದೆ.

ಈ ಮೊದಲು ತಯಾರಿಸಿಟ್ಟ ಎತ್ತುಗಳು ಈಗಾಗಲೇ ಖಾಲಿಯಾಗಿರುವುದರಿಂದ ವ್ಯಾಪಾರಿಗಳು ಸ್ಥಳದಲ್ಲೇ ಎತ್ತುಗಳನ್ನ ತಯಾರಿಸಿ ಮಾರಾಟ ಮಾಡುತ್ತಿದ್ದಾರೆ. ನಿನ್ನೆಯಿಂದ ಜನ ಮಣ್ಣೆತ್ತುಗಳನ್ನ ಖರೀದಿ ಮಾಡುತ್ತಿದ್ದು, ಇಂದು ಪೂಜೆ ಸಲ್ಲಿಸುತ್ತಿದ್ದಾರೆ. ಅಮಾವಾಸ್ಯೆ ಹಿನ್ನೆಲೆ ಬಸವಣ್ಣನಿಗೆ ಕರಿಗಡುಬು, ಪಾಯಸ ಸೇರಿದಂತೆ ವಿವಿಧ ಖಾದ್ಯಗಳ ನೈವೇದ್ಯ ಹಿಡಿಯಲಾಗುತ್ತದೆ.

ಮಣ್ಣೆತ್ತಿನ ಅಮವಾಸ್ಯೆ ಸಂಭ್ರಮ ಒಂದೆಡೆಯಿದ್ರೆ ಈ ಬಾರಿ ಇನ್ನೂ ಬಾರದ ಮಳೆ ಮುಂದೆಯಾದ್ರೂ ಉತ್ತಮವಾಗಿ ಸುರಿಯಲಿ ಅಂತ ಜನ ಪ್ರಾರ್ಥಿಸುತ್ತಿದ್ದಾರೆ. ಆರಂಭದಲ್ಲಿ ಉತ್ತಮವಾಗಿ ಮಳೆ ಬಂದಿದ್ದರೂ ಕೂಡ ಈಗ ವರುಣನ ದರ್ಶನ ಅಪರೂಪವಾಗಿರುವುದರಿಂದ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುವ ರೀತಿಯಲ್ಲಿ ಮಳೆ ಬರಲಿ ಅಂತ ರೈತರು ಪ್ರಾರ್ಥನೆ ಮಾಡುತ್ತಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ : ಮೇವು ಹಗರಣ; ಸುಪ್ರೀಂನಲ್ಲಿ ಲಾಲೂಗೆ ಬಿಗ್‌ ರಿಲೀಫ್‌ – ಸಿಬಿಐ ಅರ್ಜಿ ವಜಾ

Related posts

ಮಾಜಿ ಸಚಿವ ನಾಗೇಂದ್ರ ಅಕ್ರಮಗಳ ಬಗ್ಗೆ ಚಾರ್ಜ್​ಶೀಟ್ ಸಲ್ಲಿಸಿದ ಸಿಬಿಐ

Kalpana Editor

ಮಂಗಳೂರಿನಲ್ಲಿ ಪದವೀಧರರಿಗೆ ಉತ್ತಮ ಉದ್ಯೋಗಾವಕಾಶ; ನೇರ ಸಂದರ್ಶನ..!

Kalpana Editor

ಜಾನಕಿ ಅವರಿಗೆ ಸಂಗೀತವೇ ಉಸಿರಾದರೆ, ಜಾನಕಿಯನ್ನೇ ಉಸಿರಾಗಿಸಿಕೊಂಡಿದ್ದರು ರಾಮಪ್ರಸಾದ್

Kalpana Editor