29.2 C
ಬೆಂಗಳೂರು
June 10, 2026
kranthikidi.com
ತಾಜಾಸುದ್ದಿದೇಶ

ಕಾಕ್ರೋಚ್‌ ಜನತಾ ಪಕ್ಷದ ಸಂಸ್ಥಾಪಕ ಭಾರತಕ್ಕೆ ವಾಪಸ್‌ – ಬೃಹತ್ ಪ್ರತಿಭಟನೆಗೆ ಕರೆ..!

ನವದೆಹಲಿ : ಕಾಕ್ರೋಚ್‌ ಜನತಾ ಪಕ್ಷದ ಸಂಸ್ಥಾಪಕ ಅಭಿಜೀತ್‌ ದೀಪ್ಕೆ ಜೂನ್‌ 6 ರಂದು ಭಾರತಕ್ಕೆ ಮರಳಲಿದ್ದು, ದೆಹಲಿಯಲ್ಲಿ ಪ್ರತಿಭಟನೆಗೆ ಕರೆ ನೀಡಿದ್ದಾರೆ. ಹೊಸದಾಗಿ ಸ್ಥಾಪಿಸಲಾದ ಸಿಜೆಪಿ ಸ್ಥಾಪಕ ದೀಪ್ಕೆ ಜೂ.6 ರಂದು ಭಾರತಕ್ಕೆ ಹಿಂತಿರುಗಿ, ಪರೀಕ್ಷೆಗೆ ಸಂಬಂಧಿಸಿದ ದೋಷಗಳಿಗಾಗಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಶಾಂತಿಯುತ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದಾರೆ.

ಇನ್‌ಸ್ಟಾಗ್ರಾಮ್‌ನಲ್ಲಿ ಬಿಡುಗಡೆ ಮಾಡಿದ ವೀಡಿಯೋದಲ್ಲಿ ದೀಪ್ಕೆ, ದೆಹಲಿಯಲ್ಲಿ ನಡೆಯಲಿರುವ ತಮ್ಮ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಬೆಂಬಲಿಗರು ಮತ್ತು ವಿದ್ಯಾರ್ಥಿಗಳಿಗೆ ಕರೆ ನೀಡಿದ್ದಾರೆ. ಜೂ.6 ರಂದು ವಿಮಾನ ನಿಲ್ದಾಣದಲ್ಲಿ ತಮ್ಮೊಂದಿಗೆ ಸೇರುವಂತೆ ಬೆಂಬಲಿಗರಿಗೆ ತಿಳಿಸಿದ್ದಾರೆ.

ಭಾರತದ ಸಂವಿಧಾನದ ಮಾರ್ಗವನ್ನು ಅನುಸರಿಸಿ ನಾವೆಲ್ಲರೂ ಒಗ್ಗೂಡಿ, ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಲು ಶಾಂತಿಯುತವಾಗಿ ಪ್ರತಿಭಟನೆ ನಡೆಸುವ ಸಮಯ ಬಂದಿದೆ. ನಾವು ಒಟ್ಟಾಗಿ ಧ್ವನಿ ಎತ್ತಿದರೆ, ಅವರು ಖಂಡಿತವಾಗಿಯೂ ನಮ್ಮ ಮಾತನ್ನು ಕೇಳಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

ನಾನು ಶನಿವಾರ ಬೆಳಿಗ್ಗೆ ದೆಹಲಿಗೆ ಬರಲು ಎಂದು ನಿರ್ಧರಿಸಿದ್ದೇನೆ. ದಯವಿಟ್ಟು ವಿಮಾನ ನಿಲ್ದಾಣದಲ್ಲಿ ನನ್ನೊಂದಿಗೆ ಸೇರಿ ಮತ್ತು ನಾವು ಒಟ್ಟಿಗೆ ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಗೆ ಹೋಗಿ ಜಂತರ್ ಮಂತರ್‌ನಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಲು ಅನುಮತಿ ಕೇಳೋಣ ಎಂದಿದ್ದಾರೆ. ಈ ಪರೀಕ್ಷೆಯಲ್ಲಾದ ಲೋಪಗಳು ಮತ್ತು ವಿವಾದಗಳಿಂದಾಗಿ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗಿದ್ದಾರೆ. ಇದಕ್ಕೆ ಕೇಂದ್ರ ಸರ್ಕಾರವೇ ನೇರ ಹೊಣೆ ಎಂದು ವೀಡಿಯೋದಲ್ಲಿ ದೀಪ್ಕೆ ಗಂಭೀರ ಆರೋಪ ಮಾಡಿದ್ದಾರೆ.

Related posts

ಕಾಯಿಲೆಯಿಂದ ಬಳಲುತ್ತಿದ್ದ, ಮಾಜಿ ಸಚಿವ ವೆಂಕಟರಮಣಪ್ಪ ನಿಧನ..!

Kalpana Editor

ರಾಯಬಾಗದಲ್ಲಿ ಭೀಕರ ರಸ್ತೆ ಅಪಘಾತ; ಮೂವರ ದುರ್ಮರಣ..!

Kalpana Editor

ರವಿಚಂದ್ರನ್ ವಿರುದ್ಧ ರೇಪ್ ಆರೋಪ ಮಾಡಿದ್ದ ನಟಿ ಕಣ್ಣೀರು – 34 ವರ್ಷಗಳ ಬಳಿಕ ಕ್ಷಮೆಯಾಚನೆ..!

Kalpana Editor