ಬೆಂಗಳೂರು : ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ ಬಳಿಕ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ನಿನ್ನೆಯಷ್ಟೇ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರ ಜೊತೆಗೆ 13 ಜನ ಸಚಿವರಾಗಿಯೂ ಪ್ರತಿಜ್ಞಾವಿಧಿ ಪಡೆದಿದ್ದಾರೆ. ಹೀಗಿದ್ದರೂ ಸಿಎಂ ಕುಚಿರ್ಯಿಂದ ಸಿದ್ದರಾಮಯ್ಯರನ್ನು ಇಳಿಸಿರುವುದು ಪಕ್ಷಕ್ಕೆ ಯಾವುದಾದರೂ ರೀತಿಯಲ್ಲಿ ಹೊಡೆತ ನೀಡಬಹುದೆಂಬ ಆತಂಕ ಕಾಂಗ್ರೆಸ್ ಹೈಕಮಾಂಡ್ಗಿದೆ.
ಹೀಗಾಗಿಯೇ ಭಾರಿ ಲೆಕ್ಕಾಚಾರ ಹಾಕಿರುವ ವರಿಷ್ಠರು ಒಬಿಸಿಗಳಿಗೆ ಬಂಪರ್ ನೀಡಿದ್ದಾರೆ. ಒಬಿಸಿಗೆ ಸೇರಿರುವ ಸಿದ್ದರಾಮಯ್ಯ ಅವರ ಪದತ್ಯಾಗದ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ಮಹತ್ವದ ನಿರ್ಣಯ ಕೈಗೊಂಡಿದೆ. ರಾಜ್ಯದಲ್ಲಿ ನಡೆಯಲಿರುವ ಪರಿಷತ್ ಚುನಾವಣೆ ನಾಲ್ವರು ಅಭ್ಯರ್ಥಿಗಳನ್ನು ಘೋಷಿಸಿದ್ದು, ಅವರೆಲ್ಲರೂ ಒಬಿಸಿಗೆ ಸೇರಿದವರೆ ಎನ್ನುವುದು ವಿಶೇಷವಾಗಿದೆ.
ಇಷ್ಟೇ ಅಲ್ಲದೆ ನಿನ್ನೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 13 ಮಂದಿಯ ಪೈಕಿ ಯತೀಂದ್ರ ಸಿದ್ದರಾಮಯ್ಯ ಮತ್ತು ಬೈರತಿ ಸುರೇಶ್ ಕೂಡ ಇದೇ ಒಬಿಸಿಗೆ ಸೇರಿದವರಾಗಿದ್ದಾರೆ. ವಿಧಾನ ಪರಿಷತ್ ಚುನಾವಣೆ ಅಭ್ಯರ್ಥಿಯ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನೂ ಬಿ.ಕೆ. ಹರಿಪ್ರಸಾದ್ಗೆ ನೀಡಿರುವುದು ಸಿದ್ದರಾಮಯ್ಯ ಪದತ್ಯಾಗದ ಬಳಿಕ ಪರ್ಯಾಯ ನಾಯಕತ್ವಕ್ಕೆ ಕಾಂಗ್ರೆಸ್ ಹೈಕಮಾಂಡ್ ಹೆಚ್ಚಿನ ಒತ್ತು ನೀಡುತ್ತಿದೆ ಎಂಬುದಕ್ಕೆ ಸ್ಪಷ್ಟ ಉದಾಹರಣೆಯಾಗಿದೆ.ಇದನ್ನೂ ಓದಿ : ಯೋಗಿ ಜೀ ನಮ್ಮನ್ನು ಕ್ಷಮಿಸಿ; ಎನ್ಕೌಂಟರ್ ಭಯಕ್ಕೆ ಠಾಣೆಯಲ್ಲಿ ಪ್ರಮಾಣ ಮಾಡಿದ ರೌಡಿಗಳು
ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರನ್ನು ಇಳಿಸಿದ ಬಳಿಕ ಅದರಿಂದ ಪಕ್ಷಕ್ಕೆ ಯಾವುದೇ ಡ್ಯಾಮೇಜ್ ಆಗದಂತೆ ಮತ್ತು ವೋಟ್ ಬ್ಯಾಂಕ್ ಕೈ ತಪ್ಪದಂತೆ ಆರಂಭದಿಂದಲೂ ಹೈಕಮಾಂಡ್ ನಾಯಕರು ತಂತ್ರ ರೂಪಿಸಿದ್ದರು. ಹೀಗಾಗಿ ಇವುಗಳೆಲ್ಲವೂ ಅದರದೇ ಭಾಗ ಎಂಬ ಮಾತುಗಳೀಗ ಕೇಳಿಬಂದಿವೆ.
