kranthikidi.com
ತಾಜಾಸುದ್ದಿರಾಜ್ಯ

ಜಮೀರ್‌ ಸಚಿವ, ಡಿಸಿಎಂ ಆಗದಂತೆ ಷಡ್ಯಂತ್ರ – ವೈರಲ್ ಆಡಿಯೋ ಬಗ್ಗೆ ಮೊಹಮ್ಮದ್ ಸಿರಾಜ್ ಪ್ರತಿಕ್ರಿಯೆ..!

ದಾವಣಗೆರೆ : ಜಮೀರ್‌ ಅಹಮ್ಮದ್ ಹೆಸರಿಗೆ ಮಸಿ ಬಳಿಯೋಕೆ ಯಾರೋ ಆಡಿಯೋ ಬಿಟ್ಟಿದ್ದಾರೆ ಎಂದು ಮೊಹಮ್ಮದ್ ಸಿರಾಜ್ ಆರೋಪಿಸಿದ್ದಾರೆ. ದಾವಣಗೆರೆ ಉಪಚುನಾವಣೆ ವಿಚಾರವಾಗಿ ವೈರಲ್‌ ಆಗಿರುವ ಆಡಿಯೋ ಬಗ್ಗೆ ಅವರು ಮಾತನಾಡಿದರು.

ಈ ವೇಳೆ, ಸಾಹೇಬ್ರು ಪಕ್ಷ ವಿರೋಧಿ ಚಟುವಟಿಕೆ ಮಾಡಿಲ್ಲ. ಕಾಂಗ್ರೆಸ್‌ಗಾಗಿ ಶ್ರಮಿಸಿದ್ದಾರೆ. ಜಮೀರ್ ಹೆಸರಿಗೆ ಮಸಿ ಬಳಿಯಲು ಯಾರೋ ಈ ಪ್ರಯತ್ನ ಮಾಡಿದ್ದಾರೆ. ನಮ್ಮಿಬ್ಬರ ಮಧ್ಯೆ ಅಂತಹ ಚರ್ಚೆಗಳೇ ನಡೆದಿಲ್ಲ. ಯಾರೋ ಈ ರೀತಿ ಮಾಡಿದ್ದಾರೆ. ನನಗೆ ಈ ವಿಚಾರ ಮಾಧ್ಯಮಗಳ ಮೂಲಕ ತಿಳಿಯಿತು. ಪಕ್ಷದಿಂದ ಯಾರೂ ನನಗೆ ಈ ವಿಚಾರವಾಗಿ ಕೇಳಿಲ್ಲ ಎಂದರು.

ಪಕ್ಷದಲ್ಲಿರುವವರೇ ಜಮೀರ್‌ಗೆ ಕೆಟ್ಟ ಹೆಸರು ತರಲು ಯತ್ನಿಸುತ್ತಿದ್ದಾರೆ. ಅಂತಹವರು ಪಕ್ಷದಲ್ಲೂ ಇದ್ದಾರೆ. ದಾವಣಗೆರೆಯಲ್ಲೂ ಇದ್ದಾರೆ. ಜಮೀರ್‌ ಅವರು ಸಚಿವ, ಡಿಸಿಎಂ ಆಗದಂತೆ ಷಡ್ಯಂತ್ರ ನಡೆಯುತ್ತಿದೆ. ದಾವಣಗೆರೆಯಲ್ಲಿ ಜಮೀರ್ ಅಭ್ಯರ್ಥಿ ಪರವಾಗಿಯೇ ಕೆಲಸ ಮಾಡಿದ್ದಾರೆ.‌ ಆಡಿಯೋ ವೈರಲ್ ಬಗ್ಗೆ ದೂರು ಕೊಡುತ್ತೇನೆ ಎಂದು ಎಚ್ಚರಿಸಿದ್ದಾರೆ.

Related posts

ಭಾರತದ ಮಾವಿನ ಹಣ್ಣುಗಳಿಗೆ ಜಪಾನ್ ಸರ್ಕಾರ ತಾತ್ಕಾಲಿಕ ಬ್ರೇಕ್..!

Kalpana Editor

ರಾಜ್ಯ ರಾಜಕೀಯದಲ್ಲಿ ಮಹಾ ಸಂಚಲನ: ‘ಕುರ್ಚಿ’ ಕದನಕ್ಕೆ ಕ್ಲೈಮ್ಯಾಕ್ಸ್? ದೆಹಲಿಗೆ ದಿಢೀರ್ ಹಾರಲಿರುವ ಸಿಎಂ-ಡಿಸಿಎಂ!

kknewskannada1987@gmail.com

ಕರ್ನಾಟಕದಿಂದ ರಾಜ್ಯಸಭೆಯ 4 ಸ್ಥಾನಗಳಿಗೆ ಅವಿರೋಧ ಆಯ್ಕೆ..!

Kalpana Editor