August 1, 2026
kranthikidi.com
ತಾಜಾಸುದ್ದಿರಾಜ್ಯ

ಕಾಲುವೆ ನೀರು ನುಗ್ಗಿ ಬೆಳೆಗಳು ಹಾನಿ – ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ..!

ರಾಯಚೂರು : ದೇವದುರ್ಗ ತಾಲೂಕಿನ ಇಂಗಳದಾಳದಲ್ಲಿ ನಾರಾಯಣಪುರ ಬಲದಂಡೆ ಕಾಲುವೆ ನೀರು ಜಮೀನಿಗೆ ನುಗ್ಗಿ ಲಕ್ಷಾಂತರ ರೂಪಾಯಿ ಬೆಳೆಹಾನಿಯಾಗಿದೆ. ಕಾಲುವೆಯಲ್ಲಿ ಹೂಳು ತುಂಬಿ, ಗಿಡಗಂಟೆ ಬೆಳೆದ ಹಿನ್ನೆಲೆ ಜಮೀನುಗಳಿಗೆ ನೀರು ನುಗ್ಗಿದೆ. ಅಲ್ಲದೇ ಕಾಲುವೆಗೆ ನೀರು ಹರಿಸುವ ಮುನ್ನ ಜಂಗಲ್ ಕಟ್ ಮಾಡದ ಹಿನ್ನೆಲೆ ಅನಾಹುತ ನಡೆದಿದೆ.

ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಬೆಳೆದ ಹತ್ತಿ ಬೆಳೆ ಹಾನಿಯಾಗಿದ್ದು, ರೈತರು ಕಂಗಾಲಾಗಿದ್ದಾರೆ. ನಾರಾಯಣಪುರ ಬಲದಂಡೆ ಕಾಲುವೆಯ 17ನೇ ಉಪಕಾಲುವೆಯಲ್ಲಿ ಗಿಡ ಗಂಟೆಗಳು ಬೆಳೆದಿದ್ದು, ಇಂಗಳದಾಳ, ಬೂದಿನಾಳ ಜಮೀನುಗಳಿಗೆ ನೀರು ನುಗ್ಗಿದೆ. ಬೇರೆ ದಾರಿಯಿಲ್ಲದೇ ಜೆಸಿಬಿಯಿಂದ ಸ್ವತಃ ರೈತರೇ ಕಾಲುವೆ ಸ್ವಚ್ಛ ಮಾಡಿಕೊಂಡಿದ್ದಾರೆ. ಕೆಬಿಜೆಎನ್‌ಎಲ್ ಅಧಿಕಾರಿಗಳ ಬೇಜವಾಬ್ದಾರಿತನಕ್ಕೆ ರೈತರು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ : ಫೇಸ್‌ಬುಕ್‌ನಿಂದ ಮೋದಿ ವಿಡಿಯೋ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ

Related posts

ರಾಹುಲ್‌ ನಡೆ ಖಂಡಿಸಿ ದೇಶವ್ಯಾಪಿ ಪ್ರತಿಭಟನೆಗೆ ಬಿಜೆಪಿ ಪ್ಲ್ಯಾನ್‌ – ಕಾಂಗ್ರೆಸ್ ಕಚೇರಿಗಳಿಗೆ ಮುತ್ತಿಗೆ ಸಾಧ್ಯತೆ..!

Kalpana Editor

ಹನುಮಂತಪ್ಪ ಅವರ ಕೆಲಸ, ಆಚಾರ ವಿಚಾರ ಶಾಶ್ವತವಾಗಿ ಉಳಿಯಲಿದೆ – ಸಿಎಂ ಡಿ ಕೆ ಶಿವಕುಮಾರ್

Kalpana Editor

ಶುದ್ಧ ಕುಡಿವ ನೀರು ಘಟಕದ ನಿರ್ವಹಣೆಗೆ ಟೆಂಡರ್ ಕರೆಯಿರಿ – ಸಚಿವ ಈಶ್ವರ ಖಂಡ್ರೆ

Kalpana Editor