August 26, 2026
kranthikidi.com
ತಾಜಾಸುದ್ದಿರಾಜ್ಯ

ಮಾದಪ್ಪನ ಹುಂಡಿಯಲ್ಲಿ ಮತ್ತೆ ಕೋಟಿ ಕೋಟಿ ಹಣ ಸಂಗ್ರಹ..!

ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟದ ಮಾದಪ್ಪನ ಹುಂಡಿಯಲ್ಲಿ ಮತ್ತೆ ಕೋಟಿ ಕೋಟಿ ಹಣ ಸಂಗ್ರಹವಾಗಿದೆ. ವೀಕೆಂಡ್ ಹಾಗೂ ಅಮಾವಾಸ್ಯೆ ಹಿನ್ನೆಲೆಯಲ್ಲಿ ಭಕ್ತರ ಹರಿವು ಹೆಚ್ಚಾಗಿದ್ದು, ಕೇವಲ 27 ದಿನಗಳಲ್ಲಿ ದಾಖಲೆಯ 2,73,57,105 ರೂಪಾಯಿ ನಗದು ಸಂಗ್ರಹವಾಗಿರುವ ಮಾಹಿತಿ ಲಭ್ಯವಾಗಿದೆ.

ಕೋಟಿ ಕೋಟಿ ಹಣದ ಜೊತೆಗೆ 44 ಗ್ರಾಂ ಚಿನ್ನ ಹಾಗೂ 977 ಗ್ರಾಂ ಬೆಳ್ಳಿಯನ್ನು ಭಕ್ತರು ಕಾಣಿಕೆಯಾಗಿ ಸಮರ್ಪಿಸಿದ್ದಾರೆ. ವಿಶೇಷವೆಂದರೆ, ಎಣಿಕೆ ವೇಳೆ ಏಳು ವಿದೇಶಿ ನೋಟುಗಳು ಹಾಗೂ ನಿಷೇಧಿತ ಹತ್ತು 2,000 ಮುಖಬೆಲೆಯ ಹಳೆಯ ನೋಟುಗಳು ಪತ್ತೆಯಾಗಿವೆ. ಮಲೆ ಮಹದೇಶ್ವರ ಪ್ರಾಧಿಕಾರದ ಸಿಬ್ಬಂದಿ ಸಮ್ಮುಖದಲ್ಲಿ ಈ ಬೃಹತ್ ಮೊತ್ತದ ಹುಂಡಿ ಎಣಿಕೆ ಕಾರ್ಯ ಯಶಸ್ವಿಯಾಗಿ ಜರುಗಿದೆ ಎನ್ನಲಾಗಿದೆ. ಇದನ್ನೂ ಓದಿ : ಬಾಲಕನ ಮೇಲೆ ಬೀದಿನಾಯಿಗಳ ದಾಳಿ; ಕುತ್ತಿಗೆ, ಕೈಗೆ ಗಾಯ…!

Related posts

ಶ್ವಾಸಕೋಶದ ಆರೋಗ್ಯ ಹದಗೆಡುವುದಕ್ಕೆ, ದೈನಂದಿನ ಅಭ್ಯಾಸಗಳೇ ಕಾರಣ..!

Kalpana Editor

ಶಿಲ್ಪಿ ಅರುಣ್‌ ಯೋಗಿರಾಜ್‌ರಿಂದ ಪ್ರಧಾನಿಗೆ ಸಿದ್ಧವಾಗಿದೆ; ವಿಶೇಷ ಉಡುಗೊರೆ..!

Kalpana Editor

ಕಾಮನ್‌ವೆಲ್ತ್ ಕ್ರೀಡಾಕೂಟಕ್ಕೆ ಅಧಿಕೃತ ತೆರೆ; ಭಾರತಕ್ಕೆ ಧ್ವಜ ಹಸ್ತಾಂತರ..!

kknewskannada1987@gmail.com