August 1, 2026
kranthikidi.com
ತಾಜಾಸುದ್ದಿರಾಜ್ಯ

ಹೆಚ್‌ಡಿ ದೇವೇಗೌಡರ ಕಾಲಿಗೆ ಬಿದ್ದು, ಆಶೀರ್ವಾದ ಪಡೆದ ಡಿಕೆ ಶಿವಕುಮಾರ್‌

ಬೆಂಗಳೂರು : ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಭೇಟಿಯ ಬೆನ್ನಲ್ಲೇ, ಇಂದು ಸಂಜೆ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಕಾರ್ಯಕ್ರಮಕ್ಕೆ ಬರುವಂತೆ ಆಹ್ವಾನಿಸಿದ್ದಾರೆ. ಬೆಂಗಳೂರಿನ ಪದ್ಮನಾಭನಗರದಲ್ಲಿರುವ ದೊಡ್ಡಗೌಡರ ಅಧಿಕೃತ ನಿವಾಸಕ್ಕೆ ಖುದ್ದಾಗಿ ಆಗಮಿಸಿದ ಡಿ.ಕೆ. ಶಿವಕುಮಾರ್, ಹಿರಿಯ ಮುತ್ಸದ್ದಿ ನಾಯಕನಿಗೆ ಗೌರವ ಸಲ್ಲಿಸಿದರು.

ಹೆಚ್.ಡಿ. ದೇವೇಗೌಡರನ್ನು ಭೇಟಿಯಾದ ಡಿ.ಕೆ. ಶಿವಕುಮಾರ್, ಅವರ ಕಾಲಿಗೆ ಬಿದ್ದು ನಮಸ್ಕಾರ ಮಾಡಿ ಆಶೀರ್ವಾದ ಪಡೆದರು. ಇಂದು ಸಂಜೆ ನಡೆಯಲಿರುವ ತಮ್ಮ ಪ್ರಮಾಣವಚನ ಕಾರ್ಯಕ್ರಮಕ್ಕೆ ಬರುವಂತೆ ಅತ್ಯಂತ ಗೌರವಪೂರ್ವಕವಾಗಿ ಆಹ್ವಾನಿಸಿದರು. ಇದೇ ವೇಳೆ ರಾಜ್ಯದ ಸಮಗ್ರ ಅಭಿವೃದ್ಧಿ ಹಾಗೂ ಸುಗಮ ಆಡಳಿತಕ್ಕಾಗಿ ಹಿರಿಯರ ಮಾರ್ಗದರ್ಶನ ಮತ್ತು ಸಹಕಾರ ಸದಾ ಇರಬೇಕೆಂದು ಕೋರಿದರು. ಇದನ್ನೂ ಓದಿ : ಡಿ.ಕೆ.ಶಿವಕುಮಾರ್ ರಾಜ್ಯದ 25ನೇ ಮುಖ್ಯಮಂತ್ರಿಗಳಾಗಿ ಪದಗ್ರಹಣ ಹಿನ್ನೆಲೆ; ಸಾವಿರಾರು ಜನರಿಗೆ ಅನ್ನದಾನ ಹಾಗೂ 50 ಸಾವಿರ ಸಿಹಿ ವಿತರಣೆ..!

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಲಿರುವ ಈ ಅದ್ಧೂರಿ ಕಾರ್ಯಕ್ರಮವು ಇಂದು ಸಂಜೆ ಲೋಕಭವನದ ಭವ್ಯ ಗಾಜಿನ ಮನೆಯಲ್ಲಿ ಜರುಗಲಿದೆ. ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ರಾಜ್ಯದ ಇಬ್ಬರೂ ದೈತ್ಯ ಹಿರಿಯ ನಾಯಕರನ್ನು ಖುದ್ದಾಗಿ ಆಹ್ವಾನಿಸುವ ಮೂಲಕ ಡಿಕೆಶಿ ಹೊಸ ರಾಜಕೀಯ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ.

Related posts

ಪಾಲಿಕೆ ವ್ಯಾಪ್ತಿಯಲ್ಲಿ 8ನೇ ದಿನವೂ ಮುಂದುವರೆದ ಪಾದಚಾರಿ ಒತ್ತುವರಿ ತೆರವು ಕಾರ್ಯ

Kalpana Editor

ಐರ್ಲೆಂಡ್, ಇಂಗ್ಲೆಂಡ್ ಟಿ20 ಸರಣಿ; ಸಿರಾಜ್ ಬದಲಿಗೆ ಕನ್ನಡಿಗ ಪ್ರಸಿದ್ಧ್ ಕೃಷ್ಣ ಆಯ್ಕೆ..!

Kalpana Editor

ನಾನು ರಾಜಕಾರಣಕ್ಕೆ ಮರಳಲು ಕಾಲ ಕೂಡಿಬರಬೇಕು – ನಟಿ ರಮ್ಯಾ

Kalpana Editor