28.9 C
ಬೆಂಗಳೂರು
June 10, 2026
kranthikidi.com
ತಾಜಾಸುದ್ದಿರಾಜ್ಯ

ರಾಜ್ಯದಲ್ಲಿ ವರದಿಯಾಗಿದ್ದ, ಎಬೋಲಾ ವೈರಸ್‌ ಪ್ರಕರಣಗಳು ನೆಗೆಟಿವ್; ದಿನೇಶ್ ಗುಂಡೂರಾವ್ ಸ್ಪಷ್ಟನೆ..!

ಬೆಂಗಳೂರು : ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ಲ್ಯಾಬ್ ರಿಪೋರ್ಟ್‌ನಲ್ಲಿ ನೆಗೆಟಿವ್ ಎಂದು ವರದಿ ಬಂದಿದೆ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ಉಗಾಂಡದಿಂದ ಬೆಂಗಳೂರಿಗೆ ಬಂದಿದ್ದ ಮಹಿಳೆಯೊಬ್ಬರಲ್ಲಿ ಎಬೋಲಾ ವೈರಸ್‌ನ ರೋಗಲಕ್ಷಣಗಳು ಕಂಡುಬಂದಿತ್ತು.

ಈ ಹಿನ್ನೆಲೆ ಮಹಿಳೆಯನ್ನು ರಾಜೀವ್ ಗಾಂಧಿ ಆಸ್ಪತ್ರೆಗೆ ಶಿಫ್ಟ್ ಮಾಡಿ ಕ್ವಾರಂಟೈನ್‌ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಅಲ್ಲದೇ ಮಹಿಳೆಯ ಸ್ಯಾಂಪಲ್ ಸಂಗ್ರಹಿಸಿ ಲ್ಯಾಬ್‌ಗೆ ರವಾನಿಸಲಾಗಿತ್ತು. ಇದೀಗ ಲ್ಯಾಬ್ ರಿಪೋರ್ಟ್ ನೆಗೆಟಿವ್ ಬಂದಿದ್ದು, ಆ ವ್ಯಕ್ತಿಗೆ ಯಾವುದೇ ಸೋಂಕು ತಗುಲಿಲ್ಲ ಎಂದು ಆರೋಗ್ಯ ಇಲಾಖೆಯ ತಜ್ಞ ವೈದ್ಯರು ಖಚಿತಪಡಿಸಿದ್ದಾರೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

Related posts

ಗಂಗಾ ನದಿಯಲ್ಲಿ ದೋಣಿ ಮುಳುಗಡೆ; ಇಬ್ಬರ ದುರ್ಮರಣ, 5 ಮಂದಿ ನಾಪತ್ತೆ..!

Kalpana Editor

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ- ಸಿಎಂ ಸಿದ್ದರಾಮಯ್ಯ

Kalpana Editor

ಮಹಿಳೆಯರ ಮೇಲೆ ಕಾಲಿಂದ ನೀರು ಎರಚುತ್ತಾರೆ, ಗೂಂಡಾಗಿರಿ ಮಾಡ್ತಿದ್ದಾರೆ: ಕನ್ನಡಿಗರ ಆಕ್ರೋಶ..!

Kalpana Editor