August 27, 2026
kranthikidi.com
ತಾಜಾಸುದ್ದಿರಾಜ್ಯ

ಸತೀಶ್ ಜಾರಕಿಹೊಳಿ ಸಹೋದರಿಯ ಪತಿಗೆ ಇಡಿ ಶಾಕ್ – 6 ಕಡೆ ದಾಳಿ..!

ಬೆಳಗಾವಿ : ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಸಹೋದರಿ ಪತಿಯೂ ಆಗಿರುವ ಅಬಕಾರಿ ಇಲಾಖೆಯ ಉನ್ನತ ಅಧಿಕಾರಿಯ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಇಂದು ಭಾರಿ ದಾಳಿ ನಡೆಸಿದ್ದಾರೆ. ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತರಾಗಿರುವ ವೈ. ಮಂಜುನಾಥ್ ಅವರಿಗೆ ಸೇರಿದ ಒಟ್ಟು 6 ಸ್ಥಳಗಳ ಮೇಲೆ ಇಡಿ ಅಧಿಕಾರಿಗಳ ತಂಡ ಏಕಕಾಲಕ್ಕೆ ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ಕೈಗೊಂಡಿದೆ.

ಇಂದು ಬೆಳಿಗ್ಗೆಯೇ ಕಾರ್ಯಪ್ರವೃತ್ತರಾದ ಇಡಿ ಅಧಿಕಾರಿಗಳು, ಬೆಳಗಾವಿಯ ದೂರದರ್ಶನ ಕೇಂದ್ರದ ಬಳಿ ಇರುವ ವೈ. ಮಂಜುನಾಥ್ ಅವರ ನಿವಾಸಕ್ಕೆ ಲಗ್ಗೆ ಇಟ್ಟಿದ್ದಾರೆ. ಗೋವಾ ಮತ್ತು ಬೆಂಗಳೂರಿನ ಜಾರಿ ನಿರ್ದೇಶನಾಲಯದ ಜಂಟಿ ಅಧಿಕಾರಿಗಳ ತಂಡ ಈ ಕಾರ್ಯಾಚರಣೆಯನ್ನು ಕೈಗೊಂಡಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹಾಗೂ ತನಿಖೆಗೆ ಭದ್ರತೆ ಒದಗಿಸುವ ನಿಟ್ಟಿನಲ್ಲಿ 10 ಕ್ಕೂ ಹೆಚ್ಚು ಅರೆಸೇನಾ ಪಡೆಯ ಯೋಧರ ಕಾವಲಿನಲ್ಲಿ ಈ ದಾಳಿ ನಡೆಸಲಾಗಿದೆ.

ವೈ. ಮಂಜುನಾಥ್ ಅವರು ಹಲವು ವರ್ಷಗಳಿಂದ ಅಬಕಾರಿ ಇಲಾಖೆಯಲ್ಲಿ ಬೆಳಗಾವಿ ವಲಯದ ಪ್ರಮುಖ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮಂಜುನಾಥ್ ಅವರ ನಿವಾಸ ಹಾಗೂ ಅವರಿಗೆ ಸಂಬಂಧಿಸಿದ ಒಟ್ಟು ಆರು ಕಡೆಗಳಲ್ಲಿ ಇಡಿ ಅಧಿಕಾರಿಗಳು ಮಹತ್ವದ ದಾಖಲೆ ಪತ್ರಗಳು, ಆಸ್ತಿ ಪಾಸ್ತಿ ವಿವರ ಹಾಗೂ ಬ್ಯಾಂಕ್ ಖಾತೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಬಳ್ಳಾರಿಯ ಮಾಜಿ ಸಂಸದ ದೇವೇಂದ್ರಪ್ಪ ಅವರ ಪುತ್ರನಾಗಿರುವ ಮಂಜುನಾಥ್ ಅವರು ಅಧಿಕಾರ ದುರುಪಯೋಗಪಡಿಸಿಕೊಂಡು ಬೇನಾಮಿ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನು, ಬಾರ್ ಅಂಡ್ ರೆಸ್ಟೋರೆಂಟ್‌ಗಳು ಸೇರಿದಂತೆ ಭಾರಿ ಪ್ರಮಾಣದ ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಎಲ್ಲೆಲ್ಲಿ ದಾಳಿ ನಡೆದಿದೆ? – ಬೆಳಗಾವಿ: ದೂರದರ್ಶನ ಕೇಂದ್ರದ ಬಳಿ ಇರುವ ವೈ. ಮಂಜುನಾಥ್ ಅವರ ನಿವಾಸ.
ಬೆಂಗಳೂರು: ಮಂಜುನಾಥ್ ಅವರಿಗೆ ಸೇರಿದ ಬೆಂಗಳೂರಿನ ಅಪಾರ್ಟ್‌ಮೆಂಟ್‌ ಮೇಲೂ ಇಡಿ ದಾಳಿ ನಡೆದಿದೆ. ಪ್ರಸ್ತುತ ಮಂಜುನಾಥ್ ಅವರು ಇದೇ ಅಪಾರ್ಟ್‌ಮೆಂಟ್‌ನಲ್ಲಿದ್ದಾರೆ ಎನ್ನಲಾಗಿದೆ.
ಮೈಸೂರು: ಮೈಸೂರಿನಲ್ಲಿರುವ ವೈ. ಮಂಜುನಾಥ್ ಅವರ ಮಹಿಳಾ ಸ್ನೇಹಿತೆಯ ನಿವಾಸದ ಮೇಲೆ ದಾಳಿ.
ಅರಸೀಕೆರೆ (ಹಾಸನ ಜಿಲ್ಲೆ): ಅರಸೀಕೆರೆಯಲ್ಲಿರುವ ಮಂಜುನಾಥ್ ಅವರ ಅತ್ಯಾಪ್ತನ ಮನೆ ಮೇಲೆ ರೇಡ್.
ಐನಾಪುರ (ಅಥಣಿ ತಾಲೂಕು): ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಐನಾಪುರ ಗ್ರಾಮದಲ್ಲಿರುವ ಮಂಜುನಾಥ್ ಅವರ ಮತ್ತೊಬ್ಬ ಸ್ನೇಹಿತನ ಮನೆ ಮೇಲೆ ದಾಳಿ.

ಇಡಿ ಅಧಿಕಾರಿಗಳು ದಾಳಿ ಮಾಡಿದ ಸಮಯದಲ್ಲಿ ಅಧಿಕಾರಿ ವೈ. ಮಂಜುನಾಥ್ ಮನೆಯಲ್ಲಿ ಇರಲಿಲ್ಲ. ಆದರೆ ಕೆಲವು ದಿನಗಳ ಹಿಂದೆಯಷ್ಟೇ ಇವರ ಬಿಜಿನೆಸ್ ಪಾಲುದಾರರು ಹಾಗೂ ಗೆಳೆಯರ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ಆ ವೇಳೆ ಸಿಕ್ಕ ಮಹತ್ವದ ದಾಖಲೆಗಳಲ್ಲಿ ವೈ. ಮಂಜುನಾಥ್ ಅವರ ಹೆಸರು ತಳಕು ಹಾಕಿಕೊಂಡಿತ್ತು. ಈ ಆಧಾರದ ಮೇಲೆಯೇ ಇಡಿ ಈಗ ಮಂಜುನಾಥ್ ಮತ್ತು ಅವರ ಆಪ್ತರನ್ನು ಗುರಿಯಾಗಿಸಿ ಸಾಕ್ಷ್ಯ ಸಂಗ್ರಹಕ್ಕೆ ಇಳಿದಿದೆ. ಪ್ರಸ್ತುತ 10 ಹೆಚ್ಚು ಅರೆಸೇನಾ ಪಡೆ ಯೋಧರ ಕಾವಲಿನಲ್ಲಿ ತಪಾಸಣೆ ಮುಂದುವರಿದಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ : ಬಿಎಂಟಿಸಿ ಚಾಲಕನಿಗೆ ಅಪಘಾತ, ಪರಿಹಾರಕ್ಕೆ ಆಗ್ರಹಿಸಿ; ಡಿಪೋ ಸಿಬ್ಬಂದಿ ಪ್ರತಿಭಟನೆ..!

Related posts

ಬಿಜೆಪಿಯ ಭ್ರಷ್ಟರು ಬಿಡದಿ ಟೌನ್ಡ್ ಶಿಪ್ ಕುಮಾರಸ್ವಾಮಿ ಕುಟುಂಬದ ಜಮೀನಿನ ರಕ್ಷಿಸಲು ಜೆಡಿಎಸ್ ನೊಂದಿಗೆ ಕೈಜೋಡಿಸಿದ್ದಾರೆ ಎಂಬ ಆರೋಪ..!

Kalpana Editor

ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಜಾರಿ..!

Kalpana Editor

ಸಿಜೆಪಿ ಪ್ರತಿಭಟನೆಯಲ್ಲಿ ಹಿಂಸಾಚಾರ; ಆರೋಪಿಗಳ ಪಾಸ್‌ಪೋರ್ಟ್ ರದ್ದು..!

Kalpana Editor