August 1, 2026
kranthikidi.com
ತಾಜಾಸುದ್ದಿರಾಜ್ಯ

ಬಸ್ – ಕಂಟೇನರ್ ಲಾರಿ ನಡುವೆ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ..!

ಆನೇಕಲ್‌ : ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಂಟೇನರ್ ಲಾರಿ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿರುವ ಘಟನೆ ಹೊಸಕೋಟೆ ಸಮೀಪದ ಅತ್ತಿವಾಟ ಗೇಟ್ ಬಳಿ ನಡೆದಿದೆ. ಡಿಕ್ಕಿಯ ರಭಸಕ್ಕೆ ಕೆಎಸ್‌ಆರ್‌ಟಿಸಿ ಬಸ್‌ನ ಮುಂಭಾಗ ಸಂಪೂರ್ಣ ಛಿದ್ರವಾಗಿದೆ. ಅದೃಷ್ಟವಶಾತ್‌ ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಗಾಯಾಳುಗಳನ್ನು ಹೊಸಕೋಟೆಯ ಸರ್ಕಾರಿ ಆಸ್ಪತ್ರಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಕೆಎಸ್‌ಆರ್‌ಟಿಸಿ ಬಸ್ ಚಾಲಕನ ಸಮಯಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಈ ಘಟನಾ ಸ್ಥಳಕ್ಕೆ ಹೊಸಕೋಟೆ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ : ಕ್ಯಾನ್ಸರ್ ಮುಕ್ತ ಸಮಾಜಕ್ಕಾಗಿ ʼಕ್ಯಾನ್ಸರ್ ಸರ್ವೈವರ್ ರನ್ʼ ಜಾಗೃತಿ ಓಟ

Related posts

ವಾಹನ ಸವಾರರಿಗೆ ಮತ್ತೊಂದು ಜೀವಭಯ ಎದರು; ಯಶವಂತಪುರ-ತುಮಕೂರು ರಸ್ತೆಯ ಮೇಲ್ಸೇತುವೆ ಶಿಥಿಲಾವಸ್ಥೆ..!

Kalpana Editor

ರಾಷ್ಟ್ರೀಯ ಹೆದ್ದಾರಿ, ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ..!

Kalpana Editor

ಆನ್‌ಲೈನ್ ಗೇಮಿಂಗ್ ನಿಷೇಧ – ಬೊಮ್ಮಾಯಿ ಸರ್ಕಾರದ ಕಾನೂನು ಎತ್ತಿ ಹಿಡಿದ ಕೋರ್ಟ್

Kalpana Editor