ಬೆಂಗಳೂರು : ಇಂದು ಬೃಹತ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಬೆಂಗಳೂರು ನಗರದಾದ್ಯಂತ ಫುಟ್ಪಾತ್ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಹಮ್ಮಿಕೊಂಡಿದ್ದು, ಜಯನಗರದ ಅಶೋಕ ಪಿಲ್ಲರ್ ಸಮೀಪದಿಂದ ಇಂದು (ಬುಧವಾರ) ಬೆಳಗ್ಗೆ ಕಾರ್ಯಾಚರಣೆ ಆರಂಭಗೊಂಡಿದ್ದು, ಅಂಗಡಿಗಳು ಮತ್ತು ಕಟ್ಟಡ ಕಾಮಗಾರಿಗೆ ಸಂಬಂಧಿಸಿದ ವಸ್ತುಗಳಿಂದ ಒತ್ತುವರಿ ಮಾಡಲಾಗಿದ್ದ ಫುಟ್ಪಾತ್ಗಳನ್ನು ತೆರವುಗೊಳಿಸಲಾಗುತ್ತಿದೆ.
ಇಂದು ಬೆಳಗ್ಗೆ 9:30ಕ್ಕೆ ಶುರುವಾದ ಈ ಕಾರ್ಯಾಚರಣೆಗೆ ಜೆಸಿಬಿಗಳನ್ನು ಬಳಸಲಾಗುತ್ತಿದೆ. ಈ ಸ್ಥಳೀಯ ಅಧಿಕಾರಿಗಳ ನೇತೃತ್ವದಲ್ಲಿ ಪೊಲೀಸರ ಬೆಂಗಾವಲು ಸಹ ಒದಗಿಸಲಾಗಿದೆ. ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ ನಂಬರ್ 153 ರಲ್ಲಿ, ಅಶೋಕ ಪಿಲ್ಲರ್ನಿಂದ ಮಾಧವನ್ ಪಾರ್ಕ್ವರೆಗೆ ಈ ತೆರವು ನಡೆಯುತ್ತಿದೆ. ಪಾದಚಾರಿಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗಿದ್ದ ಎಲ್ಲ ಒತ್ತುವರಿಗಳನ್ನು ತೆರವುಗೊಳಿಸಿ, ಭವಿಷ್ಯದಲ್ಲಿ ಮತ್ತೆ ಒತ್ತುವರಿ ಮಾಡದಂತೆ ನಿಗಾ ವಹಿಸಲು ಜಿಬಿಎ ಎಚ್ಚರಿಕೆ ವಹಿಸುತ್ತಿದೆ. ಇದನ್ನೂ ಓದಿ : ಇಂದಿನಿಂದ ನೈಸ್ ರಸ್ತೆ, ಎಲೆಕ್ಟ್ರಾನಿಕ್ಸ್ ಸಿಟಿ ಫ್ಲೈಓವರ್ – ಟೋಲ್ ದರ ಏರಿಕೆ..!
