July 24, 2026
kranthikidi.com
ತಾಜಾಸುದ್ದಿರಾಜ್ಯ

ಫುಟ್‌ಪಾತ್‌ ಒತ್ತುವರಿ ಕಾರ್ಯಾಚರಣೆ, ನಿಯಮ ಎಲ್ಲರಿಗೂ ಒಂದೇ – ನಂದಿನಿ, ಹಾಪ್‌ಕಾಮ್ಸ್ ಸರದಿ..!

ಬೆಂಗಳೂರು : ನಗರದಲ್ಲಿ ಪಾದಚಾರಿ ಮಾರ್ಗ ತೆರವು ಕಾರ್ಯಾಚರಣೆ ತೀವ್ರಗೊಂಡಿದ್ದು, ವ್ಯಾಪಾರಿಗಳ ಅಂಗಡಿಗಳನ್ನು ತೆರವುಗೊಳಿಸಿದ ಬಳಿಕ ಈಗ ಫುಟ್‌ಪಾತ್ ಮೇಲಿರುವ ಸರ್ಕಾರಿ ಸ್ವಾಮ್ಯದ ಮಳಿಗೆಗಳಿಗೂ ಮುಹೂರ್ತ ನಿಗದಿಯಾಗಿದೆ. ಬೆಂಗಳೂರಿನಾದ್ಯಂತ ಒಟ್ಟು 1,500 ಕಿ.ಮೀ ಪಾದಚಾರಿ ಮಾರ್ಗವನ್ನು ಒತ್ತುವರಿಯಿಂದ ಮುಕ್ತಗೊಳಿಸುವ ಬೃಹತ್ ಗುರಿ ಹೊಂದಲಾಗಿದ್ದು, ಈಗಾಗಲೇ 500 ಕಿ.ಮೀಗೂ ಹೆಚ್ಚು ಭಾಗವನ್ನು ತೆರವುಗೊಳಿಸಲಾಗಿದೆ.

ಫುಟ್‌ಪಾತ್ ಮೇಲೆ ವ್ಯಾಪಾರ ಮಾಡುವ ಬಡವರ ಅಂಗಡಿಗಳನ್ನು ತಕ್ಷಣವೇ ತೆರವುಗೊಳಿಸುವ ಅಧಿಕಾರಿಗಳು, ಅಲ್ಲಿಯೇ ಇರುವ ಸರ್ಕಾರಿ ಸ್ವಾಮ್ಯದ ನಂದಿನಿ ಬೂತ್‌, ಹಾಪ್‌ಕಾಮ್ಸ್‌ ಹಾಗೂ ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗಳ ತಂಟೆಗೆ ಹೋಗುತ್ತಿಲ್ಲ ಎಂಬ ಗಂಭೀರ ಆರೋಪ ಸಾರ್ವಜನಿಕರಿಂದ ಕೇಳಿಬಂದಿತ್ತು. ಈ ಆರೋಪಗಳಿಗೆ ಪ್ರತಿಕ್ರಿಯಿಸಿರುವ ಜಿಬಿಎ ಮುಖ್ಯ ಎಂಜಿನಿಯರ್‌ ಬಸವರಾಜ್‌ ಕಬಾಡೆ, ನಿಯಮ ಎಲ್ಲರಿಗೂ ಒಂದೇ. ಫುಟ್‌ಪಾತ್ ಮೇಲಿರುವ ಸರ್ಕಾರಿ ಸ್ವಾಮ್ಯದ ಮಳಿಗೆಗಳನ್ನೂ ತೆರವುಗೊಳಿಸಲು ಚಿಂತನೆ ನಡೆದಿದೆ ಎಂದು ತಿಳಿಸಿದ್ದಾರೆ.

ನಂದಿನಿ ಬೂತ್, ಹಾಪ್‌ಕಾಮ್ಸ್ ಹಾಗೂ ಬೆಸ್ಕಾಂನ ಅಪಾಯಕಾರಿ ಎರಡು ಕಂಬಗಳ ಟ್ರಾನ್ಸ್‌ಫಾರ್ಮರ್‌ಗಳನ್ನು ಫುಟ್‌ಪಾತ್‌ನಿಂದ ಬೇರೆಡೆಗೆ ಸ್ಥಳಾಂತರಿಸುವಂತೆ ಅಥವಾ ತೆರವುಗೊಳಿಸುವಂತೆ, ಜಿಬಿಎ ಇಂಜಿನಿಯರ್‌ಗಳೇ ಸಂಬಂಧಪಟ್ಟ ಇಲಾಖೆಗಳಿಗೆ ಅಧಿಕೃತ ಮನವಿ ಸಲ್ಲಿಕೆ ಮಾಡುತ್ತಿದ್ದಾರೆ. ವ್ಯಾಪಾರಿಗಳ ಮಳಿಗೆಗಳ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಂಡ ಜಿಬಿಎ, ಸರ್ಕಾರಿ ಸಂಸ್ಥೆಗಳಿಗೆ ಸೇರಿದ ನಂದಿನಿ ಬೂತ್ ಹಾಗೂ ಹಾಪ್‌ಕಾಮ್ಸ್‌ಗಳನ್ನು ನಿಜಕ್ಕೂ ತೆರವು ಮಾಡುತ್ತದೆಯೇ ಅಥವಾ ಇದು ಕೇವಲ ಹೇಳಿಕೆಗೆ ಸೀಮಿತವಾಗಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ. ಇದನ್ನೂ ಓದಿ : ಪಿಜಿಯಲ್ಲಿ ಸಿಲಿಂಡರ್ ಬ್ಲಾಸ್ಟ್ – 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ..!

Related posts

ಬಿಜೆಪಿಯಿಂದ ಹೊರಬಂದು ಅಣ್ಣಾಮಲೈ ಆಂದೋಲನ; 14 ಲಕ್ಷ ಜನ ಬೆಂಬಲ..!

Kalpana Editor

ಆಫ್ರಿಕಾದ ಚೀತಾಗಳು ಬನ್ನೇರುಘಟ್ಟದಲ್ಲಿ ಜೂನ್ 4ರಿಂದ ವೀಕ್ಷಣೆಗೆ ಲಭ್ಯ..!

Kalpana Editor

ದುಡ್ಡು ಕೊಟ್ರೆ ಸಿಗುತ್ತೆ SSLC, PUC, ಡಿಗ್ರಿ ನಕಲಿ ಅಂಕ ಪಟ್ಟಿ..!

Kalpana Editor